ಬಳ್ಳಾರಿ: ಶಂಕಿತ ಡೆಂಗ್ಯೂವಿನಿಂದ (Dengue) 5 ವರ್ಷದ ಬಾಲಕ ಮೃತಪಟ್ಟ ಘಟನೆ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರದೀಪ್ ಆಚಾರಿ (5) ಎಂದು ಗುರುತಿಸಲಾಗಿದೆ.
ಒಂದು ವಾರದಲ್ಲಿ ಸಿದ್ದಮ್ಮನಹಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಪ್ರತೀ ನಿತ್ಯ ಸೋಂಕಿತರು ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಇದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: Uttar Pradesh | ರೈಲು ಹಳಿಯ ಮೇಲೆ ಕಾಂಕ್ರೀಟ್ ಕಂಬ ಇರಿಸಿದ್ದ ಅಪ್ರಾಪ್ತ ವಶಕ್ಕೆ
ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದ್ದರೂ ಪಂಚಾಯ್ತಿ ಅಧಿಕಾರಿಗಳು ಫಾಗಿಂಗ್ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಇಂದು ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ; ತಾಯಿ ದರ್ಶನಕ್ಕೆ ನಿರ್ಬಂಧ