– ಬಿಜೆಪಿ ನಾಯಕರ ಒಗ್ಗಟ್ಟಿನ ಕೊರತೆಯೇ ಸೋಲಿಗೆ ಕಾರಣ
ವಿಜಯಪುರ: ಉಪಚುನಾವಣಾ ಫಲಿತಾಂಶ ಕಂಡು ಟಿವಿ ಒಡೆದು ಹಾಕಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಕೋಲ್ಹಾರ (Kolhar) ಪಟ್ಟಣದಲ್ಲಿ ನಡೆದಿದೆ.
ರಾಜ್ಯದಲ್ಲಿ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ 3 ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಇಂದು (ನ.23) ಹೊರಬಿದ್ದಿದೆ. ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ (Congress) ಭರ್ಜರಿಯಾಗಿ ಗೆಲುವನ್ನು ಸಾಧಿಸಿದೆ.ಇದನ್ನೂ ಓದಿ: ರಾಜ್ಯದ ಜನ ಕಾಂಗ್ರೆಸ್ ಪರವಾಗಿದ್ದಾರೆ, ಗ್ಯಾರಂಟಿಗಳಿಂದ ಆಶೀರ್ವಾದ ಸಿಕ್ಕಿದೆ: ಕೆಹೆಚ್ ಮುನಿಯಪ್ಪ
ಕೋಲ್ಹಾರ ಪಟ್ಟಣದ ನಿವಾಸಿ ಹಾಗೂ ಬಿಜೆಪಿ (BJP) ಕಾರ್ಯಕರ್ತರಾದ ವೀರಭದ್ರಪ್ಪ ಭಾಗಿ ಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಿದ್ದರು. ಈ ವೇಳೆ ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವನ್ನು ಸಾಧಿಸಿ ಬಿಜೆಪಿ ಸೋತಿರುವುದು ಕಾರ್ಯಕರ್ತನ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಮನೆಯಲ್ಲಿದ್ದ ಟಿವಿಯನ್ನು ಎತ್ತಿಕೊಂಡು ಹೊರಕ್ಕೆ ಬಿಸಾಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ನಾಯಕರ ನಡುವಿನ ಭಿನ್ನಮತಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಕರ ನಡುವಿನ ಬಿರುಕು, ಕಾರ್ಯಕರ್ತರಲ್ಲಿ ಆಕ್ರೋಶ ಉಂಟಾಗುವಂತೆ ಮಾಡಿದೆ. ಬಿಜೆಪಿ ನಾಯಕರಲ್ಲಿ ಒಗ್ಗಟಿನ ಕೊರತೆಯಿಂದ ಈ ಹೀನಾಯ ಸೋಲಿಗೆ ಕಾರಣವಾಗಿದೆ. ಬಿಜೆಪಿ ವರಿಷ್ಠರು ಮೊದಲು ಬಿಜೆಪಿ ನಾಯಕರು, ಮುಖಂಡರ ಸಭೆ ಕರೆಯಿರಿ. ಇಲ್ಲವಾದರೆ ಬಿಜೆಪಿ ನಾಯಕರ ನಡುವಿನ ಭಿನ್ನಾಭಿಪ್ರಾಯದಿಂದ ಕಾರ್ಯಕರ್ತರು ಹಾಳಾಗುವ ಪರಿಸ್ಥಿತಿ ಬರುತ್ತದೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: NC 24: ಪೌರಾಣಿಕ ಕಥೆ ಹೇಳಲು ಸಜ್ಜಾದ ನಾಗಚೈತನ್ಯ- ಪೋಸ್ಟರ್ ಔಟ್