ಮೈಸೂರು: ಯುಗಾದಿ (Ugadi) ಹಬ್ಬದ ದಿನ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಟಿ ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ (Triveni Sangam) ನಡೆದಿದೆ.
ಮೃತ ಬಾಲಕನನ್ನು ಶ್ರೀರಾಂಪುರದ ಶರಣ್ (13) ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆ ತೆರಳಿದ್ದ. ವೇಳೆ ಈ ದುರ್ಘಟನೆ ಸಂಭವಿಸಿದೆ. ಬಾಲಕನ ಸಾವಿನಿಂದ ಫೋಷಕರ ಆಕ್ರಂದನ ಮಗಿಲು ಮುಟ್ಟಿದೆ. ಇದನ್ನೂ ಓದಿ: ನದಿಯಲ್ಲಿ ಈಜಲು ಹೋದ ಇಬ್ಬರು ಹುಡುಗರು ನೀರುಪಾಲು
ಶನಿವಾರ (ಮಾ.29) ಟಿ.ನರಸೀಪುರದ ತಾಲೂಕಿನ ಮೇದಿನಿ ಗ್ರಾಮದಲ್ಲಿ ಈಜಲು ನದಿಗೆ ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿದ್ದರು.
ಇನ್ನೂ ಮಾ.15 ರಂದು ಟಿ.ನರಸಿಪುರದಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದನ್ನೂ ಓದಿ: Mysuru | ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಜಲಸಮಾಧಿ