Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಮಳೆಗೆ ಮುಳುಗಿದ ರಾಜಧಾನಿ – ಪೂಲ್‌ನಲ್ಲಿ ಈಜಾಡಲು ಬನ್ನಿ ಬೊಮ್ಮಾಯಿಯವರೇ ಎಂದ ಯುವಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭಾರೀ ಮಳೆಗೆ ಮುಳುಗಿದ ರಾಜಧಾನಿ – ಪೂಲ್‌ನಲ್ಲಿ ಈಜಾಡಲು ಬನ್ನಿ ಬೊಮ್ಮಾಯಿಯವರೇ ಎಂದ ಯುವಕ

Bengaluru City

ಭಾರೀ ಮಳೆಗೆ ಮುಳುಗಿದ ರಾಜಧಾನಿ – ಪೂಲ್‌ನಲ್ಲಿ ಈಜಾಡಲು ಬನ್ನಿ ಬೊಮ್ಮಾಯಿಯವರೇ ಎಂದ ಯುವಕ

Public TV
Last updated: May 18, 2022 9:05 am
Public TV
Share
2 Min Read
RAIN IN BNG (1)
SHARE

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ. ರಾತ್ರಿ ಸುರಿದ ಭಾರೀ ಮಳೆಗೆ ರಾಜಧಾನಿ ತೊಯ್ದು ತೊಪ್ಪೆಯಾಗಿದೆ. ರಾಜಧಾನಿಯ ತಗ್ಗು ಪ್ರದೇಶಗಳು ಜಲಾವೃತಗೊಂಡರೆ, ನೂರಾರು ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಇಲ್ಲಿನ ವಿಜಯನಗರ, ತ್ಯಾಗರಾಜನಗರ, ಆರ್‌ಆರ್ ನಗರದ ಕೆಂಚೇನಹಳ್ಳಿ, ತಿಗಳರಪಾಳ್ಯ, ನಾಗರಬಾವಿ, ಭದ್ರಪ್ಪ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲಾ ಸಂಪೂರ್ಣ ಹಾಳಾಗಿವೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಗುಡುಗು ಸಹಿತ, ಭಾರೀ ಮಳೆ- ತಗ್ಗುಪ್ರದೇಶಗಳೆಲ್ಲ ನೀರುಮಯ, ಸವಾರರ ಪರದಾಟ

RAIN 01

ಶಾಂತಿನಗರ, ನಾಗರಬಾವಿ, ಎಚ್‌ಎಎಲ್, ರಾಜ್‌ಕುಮಾರ್ ರಸ್ತೆ, ಕಲ್ಯಾಣನಗರ ಬಡಾವಣೆಗಳಲ್ಲಿ ರಸ್ತೆಗಳಿಗೆ ನೀರು ಹರಿದು ನದಿಗಳಂತಾಗಿವೆ. ಮಳೆ ನೀರಿನಲ್ಲಿ ಬೈಕ್‌ಗಳು ಕೊಚ್ಚಿ ಹೋಗಿವೆ. ನಾಯಂಡಹಳ್ಳಿ ಜಂಕ್ಷನ್ ಮಿನಿ ಕೆರೆಯಂತಾಗಿದ್ದು, ಕಾರುಗಳು ನೀರಿನಲ್ಲಿ ಮುಳುಗಿದ್ದವು. ಇದೇ ವೇಳೆ ರಸ್ತೆಯಲ್ಲೇ ಜಲಾವೃತ್ತಗೊಂಡಿದ್ದ ನೀರಿನ ಬಳಿ ನಿಂತ ಯುವಕರು ಸರ್ಕಾರ ಕಟ್ಟಿಸಿರೋ ಸ್ವಿಮ್ಮಿಂಗ್ ಪೂಲ್.. ಬನ್ನಿ ಈಜಾಡಿ ಎಂದು ವ್ಯಂಗ್ಯವಾಡುತ್ತಿದ್ದ ದೃಶ್ಯ ಕಣ್ಣಿಗೆ ಬಿದ್ದಿತು. ಇದನ್ನೂ ಓದಿ: ಬಸವೇಶ್ವರ ಮೂರ್ತಿಗೆ ಮುಸ್ಲಿಂರಿಂದ ಸ್ವಾಗತ

RAIN BNG

ಇನ್ನು ಯಶವಂತಪುರ ಬಸ್ ನಿಲ್ದಾಣ ಜಲಮಯವಾಗಿದ್ದರೆ, ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಜಲಪಾತವೇ ಸೃಷ್ಟಿಯಾಗಿತ್ತು. ಡಾಲರ್ಸ್ ಕಾಲೋನಿಯಲ್ಲಿ ಉದ್ಯಮಿಗಳ ಮನೆಗಳಿಗೂ ಚರಂಡಿ ಎಂಟ್ರಿಕೊಟ್ಟಿದ್ದು, ಪಾರ್ಕಿಂಗ್ ಸ್ಥಳದಲ್ಲಿ ಚರಂಡಿ ನೀರು ನುಗ್ಗಿ ಐಷಾರಾಮಿ ಕಾರುಗಳು ಮುಳುಗಿದ್ದವು. ಲಹರಿ ಸಂಸ್ಥೆಯ ವೇಲು ನಿವಾಸದ ಅಂಡರ್‌ಪಾಸ್ ಸಹ ಸಂಪೂರ್ಣ ಜಲಾವೃತವಾಗಿತ್ತು. ವೈಯ್ಯಾಲಿಕಾವಲ್ ಪೊಲೀಸ್ ಠಾಣೆ ಮುಂಭಾಗದಲ್ಲಿ ಜಲಮಂಡಳಿ ಕಾಮಗಾರಿ ನಡೆಸಿತ್ತು. ಆದ್ರೆ ಸರಿಯಾಗಿ ಗುಂಡಿ ಮುಚ್ಚಿರಲಿಲ್ಲ. ಪರಿಣಾಮ ಜೋರು ಮಳೆಯಿಂದಾಗಿ ಗುಂಡಿ ಮತ್ತಷ್ಟು ದೊಡ್ಡದಾಗಿ ಪೊಲೀಸ್ ಜೀಪ್ ಹಳ್ಳದಲ್ಲಿ ಸಿಲುಕಿತ್ತು. ಮುಂಜಾನೆಯೂ ಸೋನೆಯ ಮಳೆಯ ನಡುವೆ ಜನರು ತಮ್ಮ ಮನೆ, ಆವರಣಗಳನ್ನು ಶುಚಿಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

RAIN IN BNG

ಹಲವು ಜಿಲ್ಲೆಗಳಲ್ಲಿ ಮಳೆ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಮೈಸೂರು, ಮಂಡ್ಯ, ಕೊಪ್ಪಳ, ಬೀದರ್, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

ಎಲ್ಲಿ, ಏನು ಅನಾಹುತ?: ಯಾದಗಿರಿ ಜಿಲ್ಲೆಯ ಮಂಗಿಹಾಳ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಕುರಿಗಾಹಿ ಮೃತಪಟ್ಟಿದ್ದಾನೆ. ಹೋನಗೇರಾ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ಚಾಮರಾಜನಗರದ ಹನೂರು ತಾಲ್ಲೂಕಿನ ಮಂಚಾಪುರ ಗ್ರಾಮದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 3 ಹಸುಗಳು ಸಾವಿಗೀಡಾಗಿವೆ. ವಿಜಯಪುರದಲ್ಲಿ ಸಿಡಿಲು ಬಡಿದು 14 ಕುರಿಗಳು ಮೃತಪಟ್ಟಿವೆ.

Rain

ಬಿಳಿಗಿರಿರಂಗನ ಬೆಟ್ಟ ಸಂರಕ್ಷಿತ ಅರಣ್ಯ ಪ್ರದೇಶದದಲ್ಲಿ ಮೋಡಗಳು ಆವರಿಸಿದ ನಯನ ಮನೋಹರ ದೃಶ್ಯಗಳು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಪರಿಣಾಮ ಮುಂಗಾರು ಬಿರುಸುಗೊಂಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮೇ 21ರ ವರೆಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

TAGGED:arabian seabengaluruMetrology DepartmentrainSwming Poolweatherಅರಬ್ಬಿ ಸಮುದ್ರಬೆಂಗಳೂರುಮಳೆಸ್ವಿಮ್ಮಿಂಗ್ ಪೂಲ್ಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
13 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
16 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
39 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
41 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
58 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?