ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ (Car) ಏಕಾಏಕಿ ಬೆಂಕಿ (Fire) ಕಾಣಿಸಿಕೊಂಡ ಪರಿಣಾಮ ಮಾರುತಿ ಎಕ್ಸ್ಎಲ್ 6 ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ನೆಲಮಂಗಲದ (Nelamangala) ಅಂಚೇಪಾಳ್ಯದ (Anchepalya) ಬಳಿ ನಡೆದಿದೆ.
ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ ಬರಲು ಸಾಧ್ಯವಾಗದೇ ಕೂತಲ್ಲೇ ಸಜೀವ ದಹನವಾಗಿದ್ದಾರೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಧಗಧಗನೇ ಹೊತ್ತಿ ಉರಿದು ಭಸ್ಮವಾಗಿದೆ. ಇದನ್ನೂ ಓದಿ: ಊಟದ ಮೆನುವಿನಲ್ಲಿ ಮಟನ್ ಕರ್ರಿ ಇಲ್ಲವೆಂದು ಮದುವೆ ಕ್ಯಾನ್ಸಲ್ ಮಾಡಿದ ವರ!
ಘಟನೆಯಿಂದಾಗಿ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಪರಿಶಿಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸ್ನೇಹಿತರ ಜೊತೆ ಚಾರಣಕ್ಕೆ ಬಂದಿದ್ದ ಯುವಕ ನಾಪತ್ತೆ
ಹೈಬ್ರಿಡ್/ಪೆಟ್ರೋಲ್ ಎಕ್ಸ್ಎಲ್ 6 ಕಾರು ಅನಿಲ್ ಕುಮಾರ್ ಟಿ ಅವರಿಗೆ ಸೇರಿದ್ದು, ಬೆಂಗಳೂರು ಉತ್ತರ ಆರ್ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. ಇದನ್ನೂ ಓದಿ: ಗ್ಯಾಸ್ ಗೀಸರ್ಗೆ ಮತ್ತೊಂದು ಬಲಿ – ವಿಷಾನಿಲ ಸೋರಿಕೆಯಾಗಿ ಸ್ನಾನ ಮಾಡಲು ಹೋಗಿದ್ದ ಯುವತಿ ಸಾವು