ಶಿವಮೊಗ್ಗ: ಚೇಸ್ ಮಾಡಲು ಹೋಗಿ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ (Shivamogga) ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ.
ಮೃತ ಬೈಕ್ ಸವಾರನ ಗುರುತು ಇನ್ನು ಪತ್ತೆಯಾಗಿಲ್ಲ.ಇದನ್ನೂ ಓದಿ:2025 ನಿಮಗೆ ಯಶಸ್ಸು, ಕೊನೆಯಿಲ್ಲದ ಸಂತೋಷ ತರಲಿ: ಜನತೆಗೆ ಹೊಸ ವರ್ಷದ ಶುಭಕೋರಿದ ಪ್ರಧಾನಿ ಮೋದಿ
ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ. ಈ ವೇಳೆ ಗಾಯತ್ರಿ ಶಾಲೆ ಬಳಿ ಹಂಪ್ ಕಾಣದೆ ಇಬ್ಬರು ಸವಾರರು ಕಾರು ಮತ್ತು ಬೈಕ್ನ್ನು ಹಾರಿಸಿದ್ದರು. ಈ ಹಿನ್ನೆಲೆ ಕಾರು ಪಲ್ಟಿಯಾಗಿ ಬೈಕ್ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಾರಿನಲ್ಲಿದ್ದ ಇಬ್ಬರು ಹುಡುಗಿಯರು ಪಾರಾಗಿದ್ದು, ಕಾರು ಚಾಲಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
ಸದ್ಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ:ದೇಗುಲದಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ಅನಿಷ್ಟ – ಶಿವಗಿರಿ ಶ್ರೀ