ಮಂಗಳೂರು: ಖಾಸಗಿ ಬಸ್ನಲ್ಲಿ ಬೆಂಗಳೂರಿನಿಂದ (Bengaluru) ಮಂಗಳೂರಿಗೆ (Mangaluru) ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಬಸ್ ಕ್ಲೀನರ್ ಅನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್ (26) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಆಸ್ಪತ್ರೆಯೊಂದರ ವೈದ್ಯೆಗೆ, ತನ್ನ ಪ್ಯಾಂಟ್ ಜಿಪ್ ಓಪನ್ ಮಾಡಿ ಖಾಸಗಿ ಬಸ್ ಕ್ಲೀನರ್ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನೂ ಓದಿ: ವಿರೋಧದ ನಡುವೆಯೂ ಅಧಿಕೃತ ಅನುಮತಿಯೊಂದಿಗೆ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ
ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ವೈದ್ಯರಾಗಿರುವ ದೂರುದಾರರು, ಪ್ಯಾಂಟ್ ಜಿಪ್ ಓಪನ್ ಮಾಡಿ ಅಸಭ್ಯ ನಡವಳಿಕೆ ತೋರಿದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ದೂರು ನೀಡುವ ವಿಚಾರ ತಿಳಿದ ಆರೋಪಿ ಮಹಿಳೆಗೆ ಬೆದರಿಕೆಯೊಡ್ಡಿದ್ದಾನೆ.
ಇದೀಗ ಪೊಲೀಸರು ಆರೋಪಿ ಇಮ್ರಾನ್ ಅನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 151/2022 U/s 354ರಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಖಾಸಗಿ ಬಸ್ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿತ್ತು. ಇದನ್ನೂ ಓದಿ: ಟಿಪ್ಪು ಜಯಂತಿ ವಿರೋಧಿಸಿ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸುತ್ತೇನೆ: ಮುತಾಲಿಕ್