ಹುಬ್ಬಳ್ಳಿ: ಜಿಲ್ಲೆಯಲ್ಲಿ ಕನ್ನಡ ಗೊತ್ತಿಲ್ಲ ಎನ್ನುವರ ಧಿಮಾಕು ಹೆಚ್ಚಾಗಿದೆ. ನನಗೆ ಕನ್ನಡ ಬರಲ್ಲ. ಏನು ಮಾಡ್ತೀಯಾ ಎಂದು ಮಹಾನಗರ ಪಾಲಿಕೆ ಪೌರ ಕಾರ್ಮಿಕನ ಜೊತೆಗೆ ಪ್ರತಿಷ್ಠಿತ ಬಟ್ಟೆ ಅಂಗಡಿ ಸಿಬ್ಬಂದಿ ಮೊಂಡುತನ ತೋರಿದ್ದಾನೆ.
ಹುಬ್ಬಳ್ಳಿಯ (Hubballi) ಕೊಪ್ಪಿಕರ ರಸ್ತೆಯಲ್ಲಿ ಪಾಲಿಕೆಯ ಆಟೋ ಟಿಪ್ಪರ್ ಚಾಲಕ ಮತ್ತು ಮಿನಿಸ್ಟರ್ ವೈಟ್ ಬಟ್ಟೆ ಅಂಗಡಿ ಸಿಬ್ಬಂದಿ ಜೊತೆಗೆ ಈ ಗಲಾಟೆ ನಡೆದಿದೆ. ಕಸ ಹಾಕಲು ಬಂದ ಶಾಪ್ನ ಸಿಬ್ಬಂದಿ ಬಳಿ ಪೌರ ಕಾರ್ಮಿಕರೊಬ್ಬರು ಕನ್ನಡ ಮಾತನಾಡಲು ಬರಲ್ವ ಎಂದು ಕೇಳಿದ್ದಾನೆ. ಇದನ್ನೂ ಓದಿ: `ಪರಮ್ ಸುಂದರಿ’ ಪ್ರೀಮಿಯರ್ನಲ್ಲಿ ಪರಮ ಸುಂದರಿಯಾಗಿ ಮಿಂಚಿದ ಜಾನ್ವಿ
ಈ ವೇಳೆ ಸಿಬ್ಬಂದಿ ನನಗೆ ಕನ್ನಡ ಬರಲ್ಲ, ಏನು ಮಾಡ್ತೀಯಾ ಎಂದು ಅವಾಜ್ ಹಾಕಿದ್ದಾನೆ. ಹುಬ್ಬಳ್ಳಿಗೆ ಬಂದು ಇಷ್ಟು ವರ್ಷವಾದರೂ ಕನ್ನಡ ಬರಲ್ವ? ಕನ್ನಡದಲ್ಲಿ ಮಾತನಾಡಲು ಬರದಿದ್ದರೇ ಕನ್ನಡದಲ್ಲಿ ಮಾತನಾಡುವವರನ್ನು ಕಸ ಹಾಕಲು ಕಳುಹಿಸಿ ಶಾಪ್ ಸಿಬ್ಬಂದಿಯನ್ನು ಪೌರ ಕಾರ್ಮಿಕರು ತರಾಟೆಗೆ ತೆಗೆದುಕೊಂಡಿದ್ದಾನೆ. ಇದನ್ನೂ ಓದಿ: ಬುರುಡೆ ಗ್ಯಾಂಗ್ ಸಮೀರ್ ಹಿಂದೆ ಎಡಪಂಥೀಯರು, ಮಾವೋವಾದಿ, ಜಿಹಾದಿಗಳಿದ್ದಾರೆ: ಚಕ್ರವರ್ತಿ ಸೂಲಿಬೆಲೆ
ಬಟ್ಟೆ ಶಾಪ್ನ ಮುಂಭಾಗವೇ ಪೌರ ಕಾರ್ಮಿಕ ಹಾಗೂ ಬಟ್ಟೆ ಶಾಪ್ನ ಸಿಬ್ಬಂದಿ ನಡುವೆ ಕೆಲಹೊತ್ತು ವಾಗ್ವಾದ ನಡೆದಿದೆ.