Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪ್ರೇಮ ವಿವಾಹವಾಗಿದ್ದಕ್ಕೆ ದಲಿತರಿಂದಲೇ ದಲಿತ ಕುಟುಂಬಕ್ಕೆ ಬಹಿಷ್ಕಾರ!

Public TV
Last updated: November 13, 2022 9:01 am
Public TV
Share
3 Min Read
Dalit Family 2
SHARE

– ಬಹಿಷ್ಕಾರ ಕುಟುಂಬ ಮಾತನಾಡಿಸಿದವ್ರಿಗೆ ದಂಡ, ಶಿಕ್ಷೆಯ ಎಚ್ಚರಿಕೆ
– ಪ್ರೀತಿಸಿ ಮದುವೆಯಾದ ಕಾರಣಕ್ಕೆ 14 ವರ್ಷ ವನವಾಸ

ಗದಗ: ಪ್ರೀತಿ (Love) ವಿಚಾರಕ್ಕಾಗಿಯೇ ಗ್ರಾಮದ ಆ ಕುಟುಂಬದ ಮನೆಗಳು ಧ್ವಂಸವಾದವು. ಏಕಾಏಕಿ ಮನೆ ಖಾಲಿ ಮಾಡಿಸಿದ್ರು. ಇಡೀ ಸಮುದಾಯವೇ ಆ ಒಂದು ಕುಟುಂಬವನ್ನು ಕುಲದಿಂದ ಬಹಿಷ್ಕಾರ ಹಾಕಿದೆ. ದಿಕ್ಕು ಕಾಣದೇ ಕುಟುಂಬ ಬೀದಿಗೆ ಬಂದಿದೆ. ನಾವು ಸವರ್ಣಿಯರು ದಲಿತರನ್ನು ಬಹಿಷ್ಕಾರ ಹಾಕುವುದನ್ನು ನೋಡಿದ್ದೆವೆ, ಕೇಳಿದ್ದೇವೆ. ಆದರೆ ಇಲ್ಲಿ ದಲಿತರೇ ದಲಿತರನ್ನ ಬಹಿಷ್ಕಾರ ಹಾಕಿದ್ದಾರೆ. ಮನನೊಂದು ಕುಟುಂಬದ 11 ಜನ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

Contents
– ಬಹಿಷ್ಕಾರ ಕುಟುಂಬ ಮಾತನಾಡಿಸಿದವ್ರಿಗೆ ದಂಡ, ಶಿಕ್ಷೆಯ ಎಚ್ಚರಿಕೆ – ಪ್ರೀತಿಸಿ ಮದುವೆಯಾದ ಕಾರಣಕ್ಕೆ 14 ವರ್ಷ ವನವಾಸLive Tv

Gagad GP

ಹೌದು. ಗದಗ (Gadag) ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ ಗ್ರಾಮದಲ್ಲಿ ಎಸ್. ಸಾಬಣ್ಣ ಮಾದರ ಎಂಬ ಕುಟುಂಬಕ್ಕೆ ಈಗ ಬಹಿಷ್ಕಾರ ಹಾಕಲಾಗಿದೆ. ಇವರ ಮಗ ಶಿವಾನಂದ ಮಾದರ ಎಂಬಾತ ಅದೇ ಜಾತಿಯ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದರು (Love Marriage). ಸಂಬಂಧದಲ್ಲಿ ಶಿವಾನಂದ ಹಾಗೂ ಯುವತಿ ತಂದೆ ಮಗಳಾಗಬೇಕಂತೆ. ಅದನ್ನು ಮರೆತು 2009 ರಲ್ಲಿ ಮದುವೆ ಆದ್ರು. ಆಗ ಯುವತಿ ಕುಟುಂಬಸ್ಥರು ಇವರ ಮೇಲೆ ಕತ್ತಿ ಮಸಿಯಲಾರಂಬಿಸಿದ್ರು. 2009 ರಲ್ಲಿ ಊರು ತೊರೆದು 14 ವರ್ಷ ವನವಾಸ ಮುಗಿಸಿ ಈಗ ಊರಿಗೆ ಬಂದಿದ್ದಾರೆ. ಆದರೂ ಇವರ ಮೇಲಿನ ಸಿಟ್ಟು, ಕೋಪ ಇನ್ನೂ ತನ್ನಗಾಗಿಲ್ಲ. ದಲಿತ ಸಮಾಜದಿಂದ ನಮ್ಮನ್ನು ಬಹಿಷ್ಕಾರ ಹಾಕಿದ್ದಾರೆ.

Police 1

ಊರಿನವರು ಯಾರೇ ನಮ್ಮನ್ನು ಮಾತನಾಡಿಸಿದ್ರೆ, ಸಹಾಯ ಮಾಡಿದ್ರೆ ಅವರಿಗೂ ಒಂದು ಸಾವಿರ ದಂಡ ಹಾಗೂ ಶಿಕ್ಷೆ ಘೋಷಣೆ ಮಾಡಿದ್ದಾರೆ. ದಲಿತರಿಂದಲೇ ದಲಿತರಿಗೆ ಬಹಿಷ್ಕಾರ ಹಾಕಿ ಅನ್ಯಾಯ ಮಾಡಿದ್ದಾರೆ. ಸಾಕಷ್ಟು ಮನನೊಂದಿದ್ದೇವೆ. ನಮಗೆ ಸಾವೊಂದೇ ಪರಿಹಾರ ಎಂದು ನೊಂದ ಕುಟುಂಬಸ್ಥರು ಹೇಳುತ್ತಿದ್ದಾರೆ. ಇದನ್ನೂ ಓದಿ: ಮೋದಿ ಹಾದಿಯಲ್ಲೆ ಸಿದ್ದರಾಮಯ್ಯ – ಜಾತಿ, ಧರ್ಮ ಸಮೀಕರಣಕ್ಕೆ ರಣತಂತ್ರ

Dalit Family

ಶಿವಾನಂದ ಹಾಗೂ ಯುವತಿ ಇಬ್ಬರೂ ಮಾದಿಗ ಜನಾಂಗದವರು. ಆದರೂ ಇಬ್ಬರ ಪ್ರೀತಿ ಕುಟುಂಬದ ನೆಮ್ಮದಿ ಹಾಳು ಮಾಡಿದೆ. ಇತ್ತೀಚೆಗೆ ಯುವತಿ ತಂದೆ ಮೃತಪಟ್ಟ ನಂತರ ಇವರನ್ನು ಊರಿಗೆ ಕರೆಸಿಕೊಂಡಿದ್ದಾರೆ. ಆಸ್ತಿಗೆ ಸಹಿ ಹಾಕಿಸಿಕೊಂಡಿದ್ದಾರಂತೆ. 14 ವರ್ಷದ ನಂತರ ಊರಿಗೆ ಬಂದರೂ ದಬ್ಬಾಳಿಕೆ ನಿಲ್ಲುತ್ತಿಲ್ಲವಂತೆ. ಕಳೆದ 3 ದಿನಗಳ ಹಿಂದೆಯಷ್ಟೇ ಈ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ್ದಾರಂತೆ. 3 ಜನ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದಾರೆ. ಮಗ ಮಾಡಿದ ತಪ್ಪಿಗೆ ಇಡೀ ಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ. ಇದನ್ನೂ ಓದಿ: ಮೆಗಾ ಸ್ನಾತಕೋತ್ತರ ಶೈಕ್ಷಣಿಕ ಉತ್ಸವದ ಮೊದಲ ದಿನ ಭರ್ಜರಿ ರೆಸ್ಪಾನ್ಸ್- ಬನ್ನಿ ಭಾಗವಹಿಸಿ, ಬಹುಮಾನ ಗೆಲ್ಲಿ

Gadag GP

ಕುಟುಂಬದ 11 ಜನ ಕಳೆದ 3 ದಿನದಿಂದ ಬಿಸಿಲು, ಮಳೆ, ಚಳಿಯಲ್ಲಿ ರಸ್ತೆ ಬದಿ ಕಾಲ ಕಳೆಯುತ್ತಿದ್ದಾರೆ. 2009ರಲ್ಲಿ ಯುವತಿ ಕುಟುಂಬಸ್ಥರಿಂದ 2 ಮನೆ ಧ್ವಂಸಮಾಡಿದ್ದಾರೆ. ನಂತರ 1019 ರಲ್ಲಿ ನವ ಗ್ರಾಮದಲ್ಲಿ ಆಶ್ರಯ ಯೋಜನೆಯಡಿ ನಿರ್ಮಾಣವಾದ ಒಂದು ಮನೆ ಸಹ ಧ್ವಂಸ ಮಾಡಿದ್ದಾರಂತೆ. ಈಗ ಇದ್ದ ಮನೆ ಸಹ ಖಾಲಿ ಮಾಡಿಸಿದ್ದಾರೆ. ಕುಟುಂಬ ಯಜಮಾನ ಸಾಬಣ್ಣ, ಶಾಂತವ್ವ, ಮಗ ಶಿವಾನಂದ, ಸೊಸೆ, ಮತ್ತೋರ್ವ ಮಗ ಮುತ್ತಣ್ಣ, ರೇಣುಕಾ, ಅಂಜನಾದೇವಿ ಸೇರಿ 5 ಜನ ಮಕ್ಕಳು ಬೀದಿಪಾಲಾಗಿವೆ. ಜೀವನವೇ ಸಾಕಾಗಿದೆ. ನೆಮ್ಮದಿಯಿಂದ ಜೀವನ ಮಾಡಲು ಅನುಕೂಲ ಕಲ್ಪಿಸಿಕೊಡಿ. ಇಲ್ಲವೆ ಸಾಯಲು ಅನುಮತಿ ಕೊಡಿ ಅಂತಿದೆ ನೊಂದ ಕುಟುಂಬ.

Dalit Family 1

ಪ್ರೀತಿಸಿ ಮದುವೆಯಾದ ಕಾರಣಕ್ಕೆ ಇಡೀ ಕುಟುಂಬ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಈಗ ನರಗುಂದ ತಹಶಿಲ್ದಾರ್, ಪೊಲೀಸ್ (Gadag Police) ಇಲಾಖೆ, ಗ್ರಾಮ ಪಂಚಾಯತಿ ಈ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆದರೆ ಸಮಸ್ಯೆ ಬಗೆಹರಿಸುತ್ತಾರಾ ಅನ್ನೋದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:Dalit CommunitygadagLove Marriagepoliceಗದಗದಲಿತ ಸಮುದಾಯಪೊಲೀಸ್ಪ್ರೇಮ ವಿವಾಹ
Share This Article
Facebook Whatsapp Whatsapp Telegram

You Might Also Like

M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
37 seconds ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
19 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
33 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
38 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Bunny Hop Catch
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?