ಚಿತ್ರದುರ್ಗ: ಸಬ್ಸಿಡಿ ಲೋನ್ ಕೊಡಿಸುತ್ತೇವೆ ಎಂದು ನಂಬಿಸಿ ಜನರನ್ನು ವಂಚಿಸುವ ವಂಚಕರ ಕಥೆ ಹೊಸದೇನಲ್ಲ. ಆದರೆ ವಿಶೇಷಚೇತನರೊಬ್ಬರಿಗೆ (Disabled Person) ಸರ್ಕಾರದಿಂದ ವಿಶೇಷ ಸ್ಕೀಂ (Govt Scheme) ಮಾಡಿಸಿಕೊಡುತ್ತೇನೆ ಎಂದು ನಂಬಿಸಿ ಹಣ ಪಡೆದು ವಂಚಿಸಿರುವ ಪ್ರಕರಣ ಚಿತ್ರದುರ್ಗದಲ್ಲಿ (Chitradurga) ಬೆಳಕಿಗೆ ಬಂದಿದೆ.
ಸೊಂಟ ಸ್ವಾಧೀನವಿಲ್ಲದೇ ತೆವಳುವ ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ನಿವಾಸಿ ಜಯಪ್ರಕಾಶ್ ಎಂಬ ವಿಶೇಷಚೇತನ ಗಾಂಧಿ ಸರ್ಕಲ್ನಲ್ಲಿ ಚಿಲ್ಲರೆ ಅಂಗಡಿ ನಡೆಸುತ್ತಾ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಇವರಿಗೆ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂದು ಪರಿಚಯ ಮಾಡಿಕೊಂಡ ಮಂಜುನಾಥ್ ಎಂಬ ಆಸಾಮಿ, ನಿಮಗೆ ವಿಕಲಚೇತನರ ವಿಶೇಷ ಸ್ಕೀಂ ಮಾಡಿಸಿಕೊಡುತ್ತೇವೆ. ಅದರಿಂದ ನೀವು ಕಟ್ಟಿದ ಹಣವನ್ನು ದ್ವಿಗುಣಗೊಳಿಸಿ ಕೊಡುತ್ತೇವೆ. ಅದು ನಿಮ್ಮ ಮುಂದಿನ ಜೀವನೋಪಾಯಕ್ಕೆ ಸಹಕಾರಿಯಾಗಲಿದೆ ಎಂದು ಜಯಪ್ರಕಾಶ್ ಅವರನ್ನು ನಂಬಿಸಿ ವಂಚಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: Haveri | ಕೋಟಿ ಕೋಟಿ ಖರ್ಚು ಮಾಡಿ ರೈತರಿಗಾಗಿ ನಿರ್ಮಿಸಿದ ಮೆಗಾ ಮಾರ್ಕೆಟ್ ಪಾಳು
ಈ ಸ್ಕೀಂನಿಂದ ನನಗೂ ಒಳ್ಳೆಯ ಹೆಸರು ಬರಲಿದೆ ಎಂದು ಹೇಳಿ 13,500 ರೂ. ಹಣ ಪಡೆದು ಜಯಪ್ರಕಾಶ್ಗೆ ವಂಚಿಸಿದ್ದಾರೆ. ಹಣಕಟ್ಟಿ ಹಲವು ತಿಂಗಳಾದರು ಹಣ ಬಾರದ ಹಿನ್ನೆಲೆಯಲ್ಲಿ ನನ್ನ ಹಣ ನನಗೆ ವಾಪಸ್ ಕೊಡಿ ಎಂದು ಕೇಳಿದಾಗ, ಸರ್ಕಾರವು ಆ ಸ್ಕೀಂ ನಿಲ್ಲಿಸಿದೆ ಎಂದು ತಪ್ಪಿಸಿಕೊಂಡು ಓಡಾಡುತ್ತಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಹಕ್ಕಲಪುರದಲ್ಲಿ ಬೋನಿಗೆ ಸೆರೆಯಾದ ಚಿರತೆ – ರೈತರು ನಿರಾಳ
ಅಲ್ಲದೇ ಇವರ ಮತ್ತೋರ್ವ ಸ್ನೇಹಿತ ವೆಂಕಟೇಶ ಎಂಬ ಆಸಾಮಿ ಕೂಡ ಮನೆ ಸಮಸ್ಯೆಗಾಗಿ ಇವರಿಂದ 20 ಸಾವಿರ ರೂ. ಹಣವನ್ನು ಸಾಲವಾಗಿ ಪಡೆದು ವಂಚಿಸಿದ್ದಾರೆಂದು ಆರೋಪಿಸಿದ್ದಾರೆ. ಇದರಿಂದ ಮನನೊಂದ ಜಯಪ್ರಕಾಶ್, ಪ್ರಾಂಸರಿ ಪತ್ರ ಸೇರಿದಂತೆ ಇತರೆ ದಾಖಲೆಗಳ ಸಹಿತ ಚಿತ್ರದುರ್ಗ ನಗರ ಠಾಣೆ ಪೊಲೀಸರು ಹಾಗೂ ಎಸ್ಪಿಗೆ ದೂರು ನೀಡಿದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ನನ್ನ ಜೀವನ ಕಷ್ಟಕರವಾಗಿದೆ ಎಂದು ಜಯಪ್ರಕಾಶ್ ಅಸಹಾಯಕತೆ ಹೊರಹಾಕಿದ್ದಾರೆ. ಇದನ್ನೂ ಓದಿ: ಮುಡಾ ಕುರಿತು ಇ.ಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ
ಇನ್ನು ಈ ಬಗ್ಗೆ ವಂಚಿಸಿರೋ ಮಂಜುನಾಥ್ನನ್ನು ಕೇಳಿದಾಗ, ಜಯಪ್ರಕಾಶ್ ಅವರ ಆರೋಪವನ್ನು ಅಲ್ಲೆಗಳೆದಿದ್ದಾನೆ. ಆದರೆ ಮತ್ತೋರ್ವ ವೆಂಕಟೇಶ್ ಮಾತ್ರ ಹಣವನ್ನು ಪಡೆದಿರುವುದನ್ನು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಹಣ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದಾನೆ ಹೊರತು ಹಣ ಹಿಂತಿರುಗಿಸಿಲ್ಲ. ಹೀಗಾಗಿ ವಿಕಲಚೇತನ ಗಳಿಸಿದ ಹಣ ಕೊಟ್ಟು ಕಂಗಾಲಾಗಿರೋದು ವಿಪರ್ಯಾಸ ಎನಿಸಿದೆ. ಇದನ್ನೂ ಓದಿ: Kotekar Bank Robbery | ಗುಪ್ತಚರ ಇಲಾಖೆ ಸಹಾಯದಿಂದ ಆರೋಪಿಗಳ ಬಂಧನ: ಕಮಿಷನರ್ ಅನುಪಮ್ ಅಗರ್ವಾಲ್