ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನ ಹುಟ್ಟುಹಬ್ಬದಲ್ಲಿ ಭಾಗವಹಿಸಲು ಸುಮಾರು 460 ಕಿ.ಮೀ ಪಾದಯಾತ್ರೆ ಹೊರಟಿದ್ದಾನೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರಗುಂಟಾದಿಂದ ಬೆಂಗಳೂರಿಗೆ ದರ್ಶನ್ ಅಭಿಮಾನಿ (Fan) ವೀರಭದ್ರ ಪಾದಯಾತ್ರೆ ಮಾಡುತ್ತಿದ್ದಾರೆ.
- Advertisement 2
ಲಿಂಗಸುಗೂರು ತಾಲೂಕಿನ ಗೌಡೂರು ಗ್ರಾಮದ ದರ್ಶನ್ ಅಭಿಮಾನಿ ವೀರಭದ್ರ ‘ಕಾಟೇರ’ (Katera Film) ಸಿನಿಮಾ ಸಕ್ಸಸ್ ಆಗಲಿ, ಅಂತ ಈ ಹಿಂದೆ ಗುರಗುಂಟಾ ಅಮರೇಶ್ವರ ದೇವರಿಗೆ ಹರಕೆ ಹೊತ್ತಿದ್ದ ಹರಕೆ ತೀರಿಸಲು ಈಗ ಪಾದಯಾತ್ರೆ ಹೊರಟಿದ್ದಾರೆ. ದರ್ಶನ ಕುಟುಂಬಕ್ಕೆ ಒಳ್ಳೆಯದಾಗಲಿ ಅಂತ ಅಮರೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಪೂಜೆ ನೆರವೇರಿಸಿ ಪಾದಯಾತ್ರೆ ಆರಂಭಿಸಿದ್ದಾನೆ.
- Advertisement 3
- Advertisement 4
ಈಗಾಗಲೇ ಬದ್ರಿ ಬಳ್ಳಾರಿ ದಾಟಿದ್ದು, ತುಮಕೂರು ಮಾರ್ಗವಾಗಿ ತೆರಳಿ ಫೆ.16ರಂದು ದರ್ಶನ ಹುಟ್ಟುಹಬ್ಬದ ದಿನ ಅವರ ಮನೆಗೆ ತೆರಳಿ ಕೇಕ್ ಕತ್ತರಿಸುವ ಆಸೆ ಇಟ್ಟುಕೊಂಡಿದ್ದಾನೆ. ಮಾರ್ಗ ಮಧ್ಯೆ ದರ್ಶನ ಅಭಿಮಾನಿಗಳು ಶುಭಾಶಯ ಕೋರಿ ಪಾದಯಾತ್ರೆ ಯಶಸ್ವಿಯಾಗಲಿ ಅಂತ ಹಾರೈಸಿದ್ದಾರೆ. ಇದನ್ನೂ ಓದಿ:Devara: ಜ್ಯೂ.ಎನ್ಟಿಆರ್ ಚಿತ್ರಕ್ಕೆ ಮರಾಠಿ ನಟಿ ಎಂಟ್ರಿ
ದರ್ಶನ್ ನಟನೆಯ ‘ಕಾಟೇರ’ (Katera) ಸಿನಿಮಾ ಸಕ್ಸಸ್ಫುಲ್ ಪ್ರದರ್ಶನ ಕಾಣುವ ಮೂಲಕ ಸಿನಿಮಾ ಗೆದ್ದಿದೆ. ಸದ್ಯ ಒಟಿಟಿಗೂ ಸಿನಿಮಾ ಲಗ್ಗೆ ಇಟ್ಟಿದೆ. ‘ಕಾಟೇರ’ ಸಿನಿಮಾ ಕನ್ನಡದ ನೆಲದ ಸಿನಿಮಾ. 1970ರ ಕಾಲಘಟ್ಟದ ಕಥೆಯನ್ನು ಚೆಂದವಾಗಿ ತೆರೆಮೇಲೆ ತಂದಿದ್ದರು ನಿರ್ದೇಶಕ ತರುಣ್ ಸುಧೀರ್. ಮಾಲಾಶ್ರೀ ಪುತ್ರಿ ಆರಾಧನಾ ‘ಕಾಟೇರ’ ದೊಡ್ಡ ಹಿಟ್ ನೀಡಿದೆ. ಕಥೆ ಬರೆದ ಜಡೇಶ್ ಕುಮಾರ್ ಹಂಪಿ, ಡೈಲಾಗ್ ಬರೆದ ಮಾಸ್ತಿಗೂ ಕಾಟೇರ ಸಿನಿಮಾ ಮರೆಯಲಾಗದ ಯಶಸ್ಸು ನೀಡಿದೆ. ಈ ನಡುವೆಯೂ ರಾಜ್ಯದ 196 ಚಿತ್ರಮಂದಿರಗಳಲ್ಲಿ ಭರ್ಜರಿ ಓಟ ಮುಂದುವರಿಸಿದೆ.