ರಾಯಚೂರು: ರೈತನೋರ್ವ (Farmer) ಸಾಲಬಾಧೆ (Indebtedness) ತಾಳದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಉಪ್ಪಲದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ತೆಗ್ಗಿಹಾಳ (32) ಸಾವನ್ನಪ್ಪಿರುವ ಯುವ ರೈತ. ಬ್ಯಾಂಕ್ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಸಾಲ ತೀರಿಸಲು ಆಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ರಾಹುಲ್ ವಿರುದ್ಧ ವಿಡಿಯೋ – ಯೂಟ್ಯೂಬರ್ ಬಂಧನಕ್ಕೆ ನೋಯ್ಡಾಗೆ ತೆರಳಿ ಬರಿಗೈಯಲ್ಲಿ ಕರ್ನಾಟಕ ಪೊಲೀಸರು ವಾಪಸ್
ತನ್ನ ಮನೆಯ ಬಳಿ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಹಿನ್ನೆಲೆ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜೈಲುಪಾಲಾದ ಅಮ್ಮನ ಕಂಡು ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಗೌಡ ಮಗಳು