ತುಮಕೂರು: ಸಾಲ ತೀರಿಸುವಂತೆ ಬ್ಯಾಂಕ್ ನವರು ಕಳಿಸಿದ ನೋಟಿಸ್ ನೋಡಿ ಹೃದಯಾಘಾತಕ್ಕೊಳಗಾಗಿ ರೈತರೊಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಜಿಲ್ಲೆಯ ಶಿರಾ ತಾಲೂಕಿನ ಎಂ. ದಾಸರಹಳ್ಳಿಯ 65 ವರ್ಷದ ಬಡಯ್ಯ ಮೃತ ರೈತ. ವಿವಿಧ ಬ್ಯಾಂಕ್ ಗಳಲ್ಲಿ 6 ಲಕ್ಷ ರೂಪಾಯಿಗೂ ಹೆಚ್ಚು ಸಾಲ ಮಾಡಿದ್ದರು. ಆದರೆ ಬೆಳೆ ಹಾಳಾಗಿ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ.
ಸೋಮವಾರ ಮಧ್ಯಾಹ್ನ ಬಡಯ್ಯನಿಗೆ ಸಾಲ ತೀರಿಸುವಂತೆ ಬ್ಯಾಂಕಿನಿಂದ ನೋಟಿಸ್ ಬಂದಿತ್ತು. ಅದನ್ನು ನೋಡಿ ಹೃದಯಾಘಾತಕ್ಕೆ ಒಳಗಾಗಿದ್ದರು. ಬಡಯ್ಯ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.