ಮನೆ ಇಲ್ಲದೇ ಮದುವೆಗೆ ಹೆಣ್ಣು ಕೊಡ್ತಿಲ್ಲ- ಜನತಾ ದರ್ಶನದ ವೇಳೆ ವ್ಯಕ್ತಿ ಅಳಲು

Public TV
1 Min Read
CHAMARAJANAGAR JANATHA DARSHANA

ಚಾಮರಾಜನಗರ: ಉಸ್ತುವಾರಿ ಸಚಿವ ಕೆ. ವೆಂಕಟೇಶ್ ನಡೆಸಿದ ಜನತಾ ದರ್ಶನ (Janatha Darshana) ಸಭೆ ಹೈ ಡ್ರಾಮಾವೊಂದಕ್ಕೆ ಸಾಕ್ಷಿಯಾಯ್ತು.

ನಗರದ ಜಿಲ್ಲಾಧಿಕಾರಿ ಕಚೇರಿಯ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಬಂದಿದ್ದ ವ್ಯಕ್ತಿ ಡ್ರಾಮಾ ಮಾಡಿದ್ದಾನೆ. ನಗರದಲ್ಲಿ ರಸ್ತೆ ಅಗಲೀಕರಣ ವೇಳೆಯ ಜಿಲ್ಲಾಡಳಿತ ಸ್ವಾಧೀನಪಡಿಸಿಕೊಂಡಿದ್ದ ನಿವೇಶನಕ್ಕೆ ಇನ್ನೂ ಪರಿಹಾರ ನೀಡಿಲ್ಲ ಎಂದು ವ್ಯಕ್ತಿಯೊಬ್ಬರು ದೂರು ನೀಡಿದರು. ಅಲ್ಲದೆ ನನಗೆ 40 ವರ್ಷ ಆದರೂ ಮದುವೆ ಆಗಿಲ್ಲ. ಸರ್ಕಾರದಿಂದ ಬೇರೆ ನಿವೇಶನವೂ ಸಿಕ್ಕಿಲ್ಲ ಎಂದು ಸಚಿವರ ಮುಂದೆ ಅಳಲು ತೋಡಿಕೊಂಡರು.

ಸರ್ಕಾರದಿಂದ ನಿಗದಿಯಾಗಿದ್ದ ಬದಲೀ ನಿವೇಶನ ಇನ್ನೂ ಸಿಕ್ಕಿಲ್ಲ. ನನಗೆ ಹುಡುಗಿ ಕೊಡಬೇಕೆಂದರೆ ಮನೆ ಇದೆಯಾ ಎಂದು ಪ್ರಶ್ನಿಸುತ್ತಾರೆ. ಮನೆ-ಮಠ ನಿವೇಶನ, ಮದುವೆ ಇಲ್ಲದೆ ಪರದಾಡುತ್ತಿದ್ದೇನೆ. ಹೀಗಾಗಿ ನನಗೆ ದಯಾಮರಣ ನೀಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ರಸ್ತೆಗಿಳಿಯಲ್ಲ BMTC, KSRTC; ಶಾಲಾ- ಕಾಲೇಜುಗಳಿಗೂ ರಜೆ: ಮಂಗಳವಾರ ಏನಿರತ್ತೆ..?, ಏನಿರಲ್ಲ..?

ಈ ವ್ಯಕ್ತಿಯ ಮಾತು ಕೇಳಿ ವೇದಿಕೆಯಲ್ಲಿದ್ದ ಸಚಿವರು, ಶಾಸಕರು ಕಕ್ಕಾಬಿಕ್ಕಿಯಾದರು. ತಕ್ಷಣವೇ ಆ ವ್ಯಕ್ತಿಯನ್ನ ಅಧಿಕಾರಿಗಳು ಸಮಾಧಾನಪಡಿಸಿ ಆಚೆ ಕರೆದುಕೊಂಡು ಹೋದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article