ಚಿಕ್ಕೋಡಿ: ಜಾತ್ರೆಯಲ್ಲಿ (Belagavi Jatre) ಯುವಕನೋರ್ವ ತನ್ನ ಕೈಹಿಡಿದು ಎಳೆದಾಡಿದ್ದಾನೆಂದು ಮನನೊಂದ ಯುವತಿ ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ.
ಸಂಕೋನಟ್ಟಿ ಗ್ರಾಮದ ಸ್ವಪ್ನಾ ಸುಭಾಷ ಹಿಪ್ಪರಗಿ (19) ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಂಕೋನಟ್ಟಿ ಗ್ರಾಮದ ಸುನೀಲ ಅಣ್ಣಪ್ಪ ಧರಿಗೌಡರ ಆಕೆಯ ಕೈ ಹಿಡಿದು ಎಳೆದಾಡಿದ ಯುವಕ ಎಂದು ಅಥಣಿ ಪೊಲೀಸ್ ಠಾಣೆಯಲ್ಲಿ (Athani town Police Station) ಕೇಸ್ ದಾಖಲಾಗಿದೆ. ಇದನ್ನೂ ಓದಿ: ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಪ್ರಿಯಕರ – ಮನನೊಂದು ಯುವತಿ ಆತ್ಮಹತ್ಯೆ
ಸುನೀಲ ಧರಿಗೌಡರ ಜತೆ ಸ್ವಪ್ನಾಳನ್ನು ವಿವಾಹ ಮಾಡಿಕೊಡಿ ಎಂದು ಸುನೀಲ ತಂದೆ-ತಾಯಿ ಈಚೆಗೆ ಯುವತಿಯ ಮನೆಗೆ ಬಂದು ಕೇಳಿದ್ದರು. ಮಗಳಿಗೆ ಈಗಲೇ ಮದುವೆ ಮಾಡುವುದಿಲ್ಲ ಎಂದು ಸ್ವಪ್ನಾಳ ತಂದೆ ಸುಭಾಷ ಹೇಳಿದ್ದರು. ಅದೇ ಸಿಟ್ಟಿನಲ್ಲಿ ಜ.25 ರಂದು ಜಾತ್ರೆಯಲ್ಲಿ ಸುನೀಲನು ಸ್ವಪ್ನಾಳ ಕೈ ಹಿಡಿದು ಎಳೆದಿದ್ದ. ಇದರಿಂದ ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೂರು ಮಕ್ಕಳನ್ನು ನೀರಿನ ಸಂಪ್ಗೆ ಎಸೆದು, ಮಹಿಳೆ ಆತ್ಮಹತ್ಯೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k