– ಸಿನಿಮಾ ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಉದ್ಘಾಟನೆ
ಶಿವಮೊಗ್ಗ: ಶಿವಮೊಗ್ಗದ ನಾಡಹಬ್ಬ ದಸರಾಗೆ (Shivamogga Dasara) ಚಾಲನೆ ಸಿಕ್ಕಿದೆ. ಕೋಟೆ ರಸ್ತೆಯ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ದಸರಾ ಮಹೋತ್ಸವಕ್ಕೆ ಸಿನಿಮಾ ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ (Sunil Kumar Desai) ಚಾಲನೆ ನೀಡಿದರು.
ಉದ್ಘಾಟನೆ ಬಳಿಕ ಮಾತನಾಡಿದ ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ, ಹಬ್ಬದ ಆಚರಣೆಗಳ ಹಿಂದೆ ಉತ್ತಮ ಉದ್ದೇಶ ಇದೆ. ದೇಶದ ಒಂದೊಂದು ಭಾಗದಲ್ಲಿ ಒಂದೊಂದು ರೀತಿಯ ಆಚರಣೆ ಇದೆ. ಕೆಟ್ಟದ್ದನ್ನು ನಾಶ ಮಾಡಬೇಕು ಎಂಬುದು ಈ ಆಚರಣೆಗಳ ಉದ್ದೇಶ. ರಾವಣ ಅತ್ಯಂತ ಪ್ರಚಂಡ, ಉತ್ತಮ ಆಡಳಿತಗಾರ, ಶಿವಭಕ್ತ. ಆದರೆ ಆತನಿಗೆ ಅಹಂಕಾರವಿತ್ತು. ಒಂಭತ್ತು ಒಳ್ಳೆಯ ಗುಣವಿದ್ದರೂ ಅಹಂಕಾರ ಇದ್ದರೆ ಪ್ರಯೋಜನವಿಲ್ಲ. ರಾಮನಿಂದ ರಾವಣನ ನಾಶವಾಗುತ್ತದೆ. ರಾವಣನ ದಹನ ಕೆಟ್ಟದ್ದರ ನಾಶದ ಸಂಕೇತವಾಗಿದೆ ಎಂದರು. ಇದನ್ನೂ ಓದಿ: ಸಿಎಂ ಕೇಸ್ನಲ್ಲಿ ಅವರೇ ಜಡ್ಜ್, ಅವರೇ ಲಾಯರ್- ಸಿ.ಟಿ ರವಿ
ಪಾಲಿಕೆ ಆವರಣದಿಂದ ಕೋಟೆ ಚಂಡಿಕಾದುರ್ಗಾ ಪರಮೇಶ್ವರಿ ದೇವಸ್ಥಾನದವರಗೆ ನಾಡ ದೇವಿ ಚಾಮುಂಡೇಶ್ವರಿಯ ಮೆರವಣಿಗೆ ನಡೆಯಿತು. ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಈ ಸಂದರ್ಭ ಪಾಲಿಕೆಯ ಅಧಿಕಾರಿಗಳು, ಮಾಜಿ ಸದಸ್ಯರು ವಾದ್ಯಗಳಿಗೆ ನೃತ್ಯ ಮಾಡಿದರು. ಇದನ್ನೂ ಓದಿ: 160 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿದ್ದರಾಮಯ್ಯ
ಕೋಟೆ ಚಂಡಿಕಾದುರ್ಗಾ ಪರಮೇಶ್ವರಿ ದೇಗುಲದ ಮುಂಭಾಗ ಮೆರವಣಿಗೆ ಪೂರ್ಣಗೊಳ್ಳುತ್ತಿದ್ದಂತೆ ಚಾಮುಂಡೇಶ್ವರಿ ದೇವಿಗೆ ಮಂಗಳಾರತಿ ಬೆಳಗಲಾಯಿತು. ಸಂಸದ ರಾಘವೇಂದ್ರ, ಶಾಸಕ ಎಸ್ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಸೇರಿ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ: Breaking | ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್