ಬೆಂಗಳೂರು-ಅಯೋಧ್ಯೆ ಏರ್ ಇಂಡಿಯಾ ವಿಮಾನದಲ್ಲಿ ರಾಮಜಪ, ಭಜನೆ

Public TV
2 Min Read
bengaluru ayodhya flight bhajan

– ಬೋರ್ಡಿಂಗ್ ಗೇಟಲ್ಲಿ ಜೈಶ್ರೀರಾಮ್ ಘೋಷಣೆ

ಬೆಂಗಳೂರು: ದೇಶದೆಲ್ಲೆಡೆ ಅಯೋಧ್ಯೆ ರಾಮಮಂದಿರದಲ್ಲಿನ (Ayodhya Ram Mandir) ಪ್ರಾಣ ಪ್ರತಿಷ್ಠೆ ಸಮಾರಂಭದ ಸಂಭ್ರಮ ಮನೆ ಮಾಡಿದೆ. ಎಲ್ಲೆಲ್ಲೂ ಶ್ರೀರಾಮ ಜಪ, ಭಜನೆ (Ram Bhajan) ಮೊಳಗುತ್ತಿದೆ. ದೇಶದ ಕೋಟ್ಯಂತರ ಭಾರತೀಯ ಶ್ರೀರಾಮನ ಸ್ಮರಿಸುತ್ತಿದ್ದಾರೆ.

ಇದಕ್ಕೆ ಸಾಕ್ಷಿ ಎಂಬಂತೆ, ಬೆಂಗಳೂರಿನಿಂದ ಅಯೋಧ್ಯೆಗೆ (Bengaluru-Ayodhya Flight) ಹೊರಟಿದ್ದ ಭಕ್ತರ ತಂಡವೊಂದು ವಿಮಾನದಲ್ಲಿ ರಾಮಜಪ ಮಾಡಿ ಗಮನ ಸೆಳೆಯಿತು. ಬೆಂಗಳೂರು-ಅಯೋಧ್ಯೆ ಏರ್ ಇಂಡಿಯಾ ವಿಮಾನದಲ್ಲಿ ರಾಮಜಪ, ಭಜನೆ ಕೇಳಿಬಂತು. ಇದನ್ನೂ ಓದಿ: Ayodhya Ram Mandir: ಗರ್ಭಗುಡಿ ಪ್ರವೇಶಿಸಿದ ರಾಮಲಲ್ಲಾ ವಿಗ್ರಹ – ಇಂದು ಮೂರ್ತಿ ಪ್ರತಿಷ್ಠಾಪನೆ

ram bhajan at airport

ವಿಮಾನ ನಿಲ್ದಾಣದ ಬೋರ್ಡಿಂಗ್‌ ಗೇಟಲ್ಲಿ ಭಕ್ತರು ‘ಜೈ ಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೇ ರಾಮಭಜನೆ ಮಾಡುತ್ತಾ ವಿಮಾನ ಏರಿದ ದೃಶ್ಯಗಳ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಢಕ್ಕೆ ಭಾರಿಸುತ್ತ, ಕಂಸಾಳೆ ಸದ್ದು ಮಾಡುತ್ತ, ‘ಶ್ರೀರಾಮ.. ಜಯ ರಾಮ.. ಜಯ ಜಯ ರಾಮ’ ಎಂದು ಭಜಿಸುತ್ತಾ ಭಕ್ತರು ವಿಮಾನ ಏರಿದ್ದಾರೆ. ಮತ್ತೆ ಒಂದು ಕಡೆ ನಿಂತು ‘ಭೋಲೊ ಭಾರತ್‌ ಮಾತಾಕಿ’, ‘ರಾಮಚಂದ್ರ ಮಹಾರಾಜ್‌ಕೀ’, ‘ಅಯೋಧ್ಯಾ ವಾಸಿಕೀ’ ಜೈ ಎಂದು ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ಬಾಲರಾಮನಿಗೆ ಬೆಂಗ್ಳೂರಿನಿಂದ ತುಳಸಿಮಾಲೆಯ ಸೇವೆ!

ತಂಡದಲ್ಲಿ ಕೆಲವರು ಸಾಂಪ್ರದಾಯಿಕ ಉಡುಪಿನಲ್ಲೇ ಬೆಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ತಲೆಗೆ ಕೇಸರಿ ಬಣ್ಣದ ಪೇಟ ಧರಿಸಿದ್ದಾರೆ. ಕೆಲವರು ಕೇಸರಿ ಪಂಚೆ ಉಟ್ಟು ವಿಮಾನ ಏರಿದ್ದಾರೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಬೆಂಗಳೂರು, ಕೋಲ್ಕತ್ತಾ ಮತ್ತು ಅಯೋಧ್ಯೆ ನಡುವೆ ಪ್ರಯಾಣಕ್ಕೆ ಮೊದಲ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಬುಧವಾರ ಹಸಿರು ನಿಶಾನೆ ತೋರಿದ್ದರು. ಇದನ್ನೂ ಓದಿ: ರಾಮಮಂದಿರ ಪ್ರವೇಶಿಸಿದ ರಾಮಲಲ್ಲಾ ಮೂರ್ತಿ

ಇದೇ ಜನವರಿ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭ ಜರುಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ಈ ಸುಸಂದರ್ಭಕ್ಕೆ ಸಾಕ್ಷಿಯಾಗಲು ರಾಮಭಕ್ತರು ಕಾತರರಾಗಿದ್ದಾರೆ.

Share This Article