ವಿಜಯಪುರ: ಗಾಂಜಾ ನಶೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದ ಮಂಜುನಾಥ ನಗರದ ಮಲ್ಲಿಕಾರ್ಜುನ್ ಸ್ಕೂಲ್ ಬಳಿ ಅಪ್ರಾಪ್ತ ಬಾಲಕಿ ಹೊರಟಾಗ ಮೂವರು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕುತ್ತಿಗೆ ಹಿಸುಕಿ ಕೊಲೆಗೈದಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಕೈಲಾಶ್, ಸಾಗರ್ ಮೋರೆ, ದೀಪಕ್ ಹಾಗೂ ಇನ್ನು ಇಬ್ಬರಿಂದ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಕೈಲಾಶ್ ಓರ್ವನನ್ನು ಬಿಟ್ಟು ಉಳಿದ ಇಬ್ಬರು ಅತ್ಯಾಚಾರಿಗಳು ಅಪ್ರಾಪ್ತರು ಎಂದು ತಿಳಿದು ಬಂದಿದೆ. ಸದ್ಯಕ್ಕೆ ಕೈಲಾಸ್ ಮತ್ತು ಸಾಗರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ದೂರು ದಾಖಲಾಗಿಲ್ಲ.
ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನಲೆಯಲ್ಲಿ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಮೃತ ಬಾಲಕಿಯ ಶವವಿಟ್ಟು ಕುಟುಂಬಸ್ಥರು ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಕುಟುಂಬಸ್ಥರ ಪ್ರತಿಭಟನೆಗೆ ವಿವಿಧ ದಲಿತ ಪರ ಸಂಘಟನೆಗಳು ಸಾಥ್ ನೀಡಿದ್ದಾರೆ.
ಪ್ರತಿಭಟನಾಕಾರರು ಕಲಬುರ್ಗಿ ಅಥಣಿ ರಸ್ತೆ ಬಂದ್ ಮಾಡಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.