ಕಲಬುರಗಿ: ಹೆಚ್ಚಿನ ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಪಾಪಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಲೆಗೈದಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಬಾದ್ ಪಟ್ಟಣದಲ್ಲಿ ನಡೆದಿದೆ.
30 ವರ್ಷದ ಶಿವಮ್ಮ ಪತಿಯಿಂದಲೇ ಕೊಲೆಯಾದ ಪತ್ನಿ. ಪತಿ ನಾಗಪ್ಪನಿಗೆ ಹೆಚ್ಚಾಗಿ ಸಾಲ ಮಾಡಿಕೊಳ್ಳಬೇಡಿ ಎಂದು ಹೇಳಿದ್ದಾರೆ. ಇದರಿಂದ ನನಗೆ ಪ್ರಶ್ನೆ ಮಾಡುತ್ತೀಯಾ ಎಂದು ನಾಗಪ್ಪ ಮನೆಯಲ್ಲಿದ್ದ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಪರಿಣಾಮ ಶಿವಮ್ಮರ ತಲೆಗೆ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇತ್ತ ಪತ್ನಿಯನ್ನು ಕೊಲೆಗೈದ ಬಳಿಕ ಗಂಡ ನಾಗಪ್ಪ ತಲೆ ಮರೆಸಿಕೊಂಡಿದ್ದಾನೆ. ಈ ಸಂಬಂಧ ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಪತ್ತೆಗೆ ವಿಶೇಷ ಜಾಲ ಬೀಸಿದ್ದಾರೆ.
ಇದನ್ನೂ ಓದಿ: ಪತಿಯನ್ನು ಬಿಟ್ಟುಬರಲು ನಿರಾಕರಿಸಿದ್ದಕ್ಕೆ ಲೈಂಗಿಕ ದೌರ್ಜನ್ಯ- ಗುಪ್ತಾಂಗಕ್ಕೆ ಕಬ್ಬಿಣದ ರಾಡ್ನಿಂದ ಹಲ್ಲೆ, ಮಹಿಳೆ ಸಾವು
ಇಬ್ಬರು ಮುದ್ದಾದ ಮಕ್ಕಳ ಕತ್ತು ಕೊಯ್ದು ತಾನೂ ಕತ್ತು ಕೊಯ್ದುಕೊಂಡ ತಾಯಿ https://t.co/Al2c3s8P2s#Chikkaballapur #Murder #Mother #Children pic.twitter.com/ZWXP98r3HU
— PublicTV (@publictvnews) October 21, 2017
ಮಾಂಸಾಹಾರ ತಿನ್ನುವಂತೆ ಪತಿಯಿಂದ ಕಿರುಕುಳ-ಮನನೊಂದು ಆತ್ಮಹತ್ಯೆಗೆ ಶರಣಾದ ಪತ್ನಿ https://t.co/YaB5lvjfHh#meat #vegetarian #suicide #Husband #Food pic.twitter.com/d8dR70XDaS
— PublicTV (@publictvnews) October 18, 2017