ಬೆಂಗಳೂರು: ಪಾದಚಾರಿಗೆ ಡಿಕ್ಕಿ ಹೊಡೆದು ಲಾರಿ ಸಮೇತ ಚಾಲಕ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರು-ಹೊಸೂರು (Bengaluru) ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಒರಿಸ್ಸಾ ಮೂಲದ ನಿರಂಜನ್ ಹಿಟ್ ಆ್ಯಂಡ್ ರನ್ಗೆ ಬಲಿಯಾದ ದುರ್ದೈವಿ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಜಾತಿಗಣತಿ ಸಂಘರ್ಷ – ಕಾಂತರಾಜು ವರದಿಗೆ ವೀರಶೈವರಿಂದಲೂ ತೀವ್ರ ವಿರೋಧ
- Advertisement 2
- Advertisement 3
ನಿರಂಜನ್ ಕುಟುಂಬ ಚಂದಾಪುರದಲ್ಲಿ ವಾಸವಿದೆ. ಹಳೆ ಚಂದಾಪುರಿಂದ ನಡೆದು ಬರುವಾಗ ನಿರಂಜನ್ಗೆ ಈಚರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತ ನಡೆಸಿ ವಾಹನ ನಿಲ್ಲಿಸದೇ ಚಾಲಕ ಎಸ್ಕೇಪ್ ಆಗಿದ್ದಾರೆ. ಭೀಕರ ಅಪಘಾತದಿಂದ ನಿರಂಜನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
- Advertisement 4
ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೃತದೇಹವನ್ನು ರವಾನೆ ಮಾಡಿ ಟ್ರಾಫಿಕ್ ಕ್ಲಿಯರ್ ಮಾಡಲಾಯಿತು. ಇದನ್ನೂ ಓದಿ: 1 ಕಿ.ಮೀಗೆ 450 ಕೋಟಿ ರೂ. – ಡಿಕೆಶಿಯ ಕನಸಿನ ಸುರಂಗ ಯೋಜನೆ ಬೆಂಗಳೂರಿಗೆ ಬೇಕಾ? ಬೇಡ್ವಾ?
ಅಪಘಾತ ನಡೆಸಿ ಪರಾರಿಯಾಗಿರುವ ವಾಹನ ಹಾಗೂ ಚಾಲಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.