ಪತ್ನಿಯನ್ನು ಪುಸಲಾಯಿಸಿ ದೇವಸ್ಥಾನಕ್ಕೆ ಕರೆದೊಯ್ದ – ಕೊಲೆ ಮಾಡಿ ಅರಣ್ಯ ಪ್ರದೇಶಕ್ಕೆ ಶವ ಎಸೆದ

Public TV
1 Min Read
ramanagara murder case

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿ ಹತ್ಯೆಯಾದ ಘಟನೆ ಮಾಗಡಿ ತಾಲೂಕಿನ ಹೂಜಗಲ್ಲು ಬೆಟ್ಟದಲ್ಲಿ ನಡೆದಿದೆ.

ದಿವ್ಯಾ (32) ಗಂಡನಿಂದಲೇ ಕೊಲೆಯಾದ ಮಹಿಳೆ. ಉಮೇಶ್ ಪತ್ನಿಯನ್ನು ಹತ್ಯೆಗೈದು ಪರಾರಿಯಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆ ವಿಚ್ಛೇದನ ಪಡೆಯಲು ದಂಪತಿ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ಮಾಗಡಿ ಕೋರ್ಟ್‌ಗೆ ದಂಪತಿ ಹಾಜರಾಗಿದ್ದರು. ಇದನ್ನೂ ಓದಿ: ಹುಡ್ಗಿ ವಿಚಾರಕ್ಕೆ ಕಿರಿಕ್‌ – ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಮಾರಾಮಾರಿ

Crime

ಬಳಿಕ ಡ್ರಾಮಾ ಮಾಡಿ ಪತ್ನಿಯನ್ನು ದೇವಸ್ಥಾನಕ್ಕೆಂದು ಹೂಜಗಲ್ಲು ಬೆಟ್ಟಕ್ಕೆ ಕರೆದೊಯ್ದ ಉಮೇಶ್, ಪೂಜೆ ಮಾಡುವ ವೇಳೆ ಪತ್ನಿ ದಿವ್ಯಾಳ ಹತ್ಯೆ ಮಾಡಿದ್ದಾನೆ. ಶವವನ್ನು ಚೀಲೂರು ಅರಣ್ಯ ಪ್ರದೇಶದಲ್ಲಿ ಎಸೆದು ಆರೋಪಿ ಎಸ್ಕೇಪ್ ಆಗಿದ್ದಾನೆ. ಈ ಪ್ರಕರಣ ಸಂಬಂಧ ಐವರ ಮೇಲೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯವೆಸಗಿ ಪರಾರಿಯಾಗಿದ್ದ ಪತಿ ಉಮೇಶ್ ಸೇರಿ ಮತ್ತೋರ್ವ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

Share This Article