ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ (Conversion) ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಡ್ಯಾನಿಷ್ ಖಾನ್ (27) ಬಂಧಿತ ಆರೋಪಿ. ಮಣಿಪಾಲ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ಆರೋಪಿ ವಿರುದ್ಧ ದೂರು ನೀಡಿದ್ದರು. ಈ ವಿದ್ಯಾರ್ಥಿನಿಯರು ಎಂಬಿಬಿಎಸ್ ವಿದ್ಯಾಭ್ಯಾಸಕ್ಕೆ ಡೆಲ್ಲಿ ಮತ್ತು ರಾಜಸ್ಥಾನದಿಂದ ಬಂದಿದ್ದರು. ಇದನ್ನೂ ಓದಿ: ಈ ಸರ್ಕಾರ ಪಾಪರ್ ಸರ್ಕಾರ- ಗುಂಡಿ ಮುಚ್ಚೋಕು ಕಾಸಿಲ್ಲ: ಅಶೋಕ್ ಕಿಡಿ
- Advertisement -
- Advertisement -
ಯುವತಿಗೆ ಪ್ರೀತಿಸಿ, ಮದುವೆಯಾಗುವ ಪ್ರಸ್ತಾಪವನ್ನು ಆರೋಪಿ ಡ್ಯಾನಿಷ್ ಮುಂದಿಟ್ಟಿದ್ದ. ಇಸ್ಲಾಂಗೆ ಮತಾಂತರವಾಗಬೇಕೆಂದು ಷರತ್ತು ವಿಧಿಸಿದ್ದ. ಷರತ್ತು ಒಪ್ಪದ್ದಕ್ಕೆ ಬೆದರಿಕೆ, ಹಲ್ಲೆ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಉಡುಪಿ ಮಹಿಳಾ ಠಾಣೆಯಲ್ಲಿ ಆ.31 ರಂದು ದೂರು ದಾಖಲಾಗಿತ್ತು.
- Advertisement -
ಮಹಮ್ಮದ್ ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳು. ಕ್ಯಾಂಪಸ್ನಲ್ಲಿ ಪರಿಚಯವಾಗಿ, ಆತ ಈಕೆಯ ಫೋನ್ ನಂಬರ್ ಪಡೆದುಕೊಂಡು ಗೆಳೆತನವಾಗಿತ್ತು. 2024 ರ ಜನವರಿ 22 ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ ರಾಮಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಗಿ ಆರೋಪ ಹೊರಿಸಲಾಗಿದೆ. ಇದನ್ನೂ ಓದಿ: ನಾನು ಛಲವಾದಿ, ನನ್ನ ವಿರುದ್ಧ ದೂರು ಕೊಟ್ಟರೂ ನಾನು ಹೆದರಲ್ಲ: ಛಲವಾದಿ ನಾರಾಯಣಸ್ವಾಮಿ
- Advertisement -
2024 ರ ಮಾ.11 ರಂದು ಸಂತ್ರಸ್ತೆ ಆರೋಪಿಯ ರೂಮ್ಗೆ ತೆರಳಿದಾಗ ಮತಾಂತರಕ್ಕೆ ಒತ್ತಾಯಿಸಿದ್ದ. ನಿರಾಕರಿಸಿದಾಗ ಆರೋಪಿಯು ತನ್ನ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಿದ್ದ. ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕ ಕುರುಕುಳ ಕೊಟ್ಟು, ಬೇಡಿಕೆ ಇಟ್ಟಿದ್ದ ಎಂದು ಸಂತ್ರಸ್ತೆ ದೂರಿದ್ದಾರೆ.
2024 ರ ಆಗಸ್ಟ್ 28 ರವರೆಗೂ ಫೋನ್ನಲ್ಲಿ ತನ್ನನ್ನು ಸಂಪರ್ಕಿಸಿ ನಿರಂತರ ಕಿರುಕುಳ ನೀಡಿದ್ದಾನೆಂದು ದೂರಲಾಗಿದೆ. ಪ್ರಕರಣದ ಆರೋಪಿಯನ್ನು ಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆರೋಪಿಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.