ಚಂಡೀಗಢ: ಕ್ರಿಮಿನಲ್ ಹಿನ್ನೆಲೆ ಇರುವ ನಿನ್ನನ್ನು ಮದುವೆಯಾಗಲ್ಲ ಎಂದು ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನೇ ಹತ್ಯೆ ಮಾಡಿರುವ ಘಟನೆ ಪಂಜಾಬ್ನ ಸೈನ್ಪುರ ಗ್ರಾಮದಲ್ಲಿ ನಡೆದಿದೆ.
ಸೆಕ್ಷನ್ 307 ರ ಅಡಿಯಲ್ಲಿ ಬಂಧಿತನಾಗಿದ್ದ ಯುವಕ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ. ಅಪರಾಧ ಹಿನ್ನೆಲೆಯುಳ್ಳವನಾಗಿದ್ದರಿಂದ ಆತನನ್ನು ಮದುವೆಯಾಗಲು ಗೆಳತಿ ನಿರಾಕರಿಸಿದ್ದಾಳೆ. ನಿರಾಕರಣೆ ಸಹಿಸಲಾಗದೆ ಆತ ಮತ್ತು ಆತನ ಸ್ನೇಹಿತರು ಯುವತಿ ಮನೆಗೆ ನುಗ್ಗಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್
ನನ್ನ ಸಹೋದರಿ ಪೂಜಾಳನ್ನು ಹತ್ಯೆ ಮಾಡಿರುವ ರಾಹುಲ್ ನಮಗೆ ಸೋದರ ಮಾವ. ಈತನಿಗೆ ಕ್ರಿಮಿನಲ್ ಹಿನ್ನೆಲೆಯಿತ್ತು. ಹೀಗಾಗಿ ಆತನನ್ನು ಮದುವೆಯಾಗಲು ಪೂಜಾ ನಿರಾಕರಿಸಿದ್ದಳು. ಆರೋಪಿಗಳ ವಿರುದ್ಧ ಪೊಲೀಸ್ ಆಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೃತ ಪೂಜಾ ಸಹೋದರಿ ರಜನಿ ಬಾಲಾ ಒತ್ತಾಯಿಸಿದ್ದಾರೆ.
ದೀನಾನಗರ ಪೊಲೀಸ್ ಠಾಣೆಯ ಎಸ್ಹೆಚ್ಒ ಕಪಿಲ್ ಕೌಶಲ್, ಸಾಯಿನ್ಪುರ ಗ್ರಾಮದಲ್ಲಿ ಯುವತಿಯನ್ನು ಕೊಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಪ್ರಕರಣದಲ್ಲಿ ಮೃತಳ ಸಹೋದರಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವರ್ಷದೊಳಗೆ ಮೊಮ್ಮಗು ನೀಡಿ, ಇಲ್ಲ 5 ಕೋಟಿ ಪರಿಹಾರ ಕೊಡಿ – ಮಗ, ಸೊಸೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಅತ್ತೆ