Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ರಾಜಕೀಯ ಜೀವನದ ಮೊದಲ ವಿಲನ್ ಹೆಚ್.ಡಿ ರೇವಣ್ಣ: ಸಿಎಂಗೆ ಎ.ಮಂಜು ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ಮ ರಾಜಕೀಯ ಜೀವನದ ಮೊದಲ ವಿಲನ್ ಹೆಚ್.ಡಿ ರೇವಣ್ಣ: ಸಿಎಂಗೆ ಎ.ಮಂಜು ಪತ್ರ

Bengaluru City

ನಿಮ್ಮ ರಾಜಕೀಯ ಜೀವನದ ಮೊದಲ ವಿಲನ್ ಹೆಚ್.ಡಿ ರೇವಣ್ಣ: ಸಿಎಂಗೆ ಎ.ಮಂಜು ಪತ್ರ

Public TV
Last updated: July 21, 2019 8:19 pm
Public TV
Share
3 Min Read
hdk manju
SHARE

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಸಚಿವ ಎ.ಮಂಜು ಇಂದು ಫೇಸ್‍ಬುಕ್ ನಲ್ಲಿ ಮುಖ್ಯಮಂತ್ರಿಗಳಿಗೆ ಸುದೀರ್ಘವಾದ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ರಾಜೀನಾಮೆ ನೀಡಿ ಹೊರ ಬನ್ನಿ ಎಂದು ಎ.ಮಂಜು ಮನವಿ ಮಾಡಿಕೊಂಡಿದ್ದಾರೆ.

ಪತ್ರದಲ್ಲಿ ಏನಿದೆ?
ಸನ್ಮಾನ್ಯ ಮುಖ್ಯಮಂತ್ರಿಗಳಿಗೊಂದು ಕಳಕಳಿಯ ಮನವಿ. ಸರ್ ನೀವು ಕನ್ನಡಿಗರ ಕಣ್ಮಣಿ ಆಗಿದ್ದವರು ಎಂದು ಬಳಸಲು ಸಕಾರಣವಿದೆ. ನೀವು ರಾಜ್ಯ ಕಂಡ ವಿಶೇಷ ರಾಜಕಾರಣಿ. ಮೊದಲ ಬಾರಿಗೆ ಶಾಸಕರಾಗಿ ಸಿಎಂ ಆದ ದಾಖಲೆ ನಿಮ್ಮ ಹೆಸರಲ್ಲೇ ಇದೆ. 2006ರ 20-20 ಸರ್ಕಾರದ ಸಮಯದಲ್ಲಿ ನೀವು ತೋರಿಸಿದ ಕಾರ್ಯ ಕ್ಷಮತೆ ಅನುಕರಣೀಯ. ಜನನಾಯಕ ಅಂದರೆ ಹೀಗಿರಬೇಕು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಈಗ ತಾವು ಮಾಡುತ್ತಿರುವುದು ಏನು? ಯಾವ ಸಂದೇಶವನ್ನು ಮುಂದಿನ ಪೀಳಿಗೆಗೆ ನೀಡುತ್ತಿದ್ದೀರಾ? ಒಮ್ಮೆ ನಿಮ್ಮ ಪಟಾಲಂನ್ನು ದೂರವಿಟ್ಟು ಏಕಾಂತದಲ್ಲಿ ಕುಳಿತು ಯೋಚಿಸಿ.

HDK 3

ನಿಮ್ಮ ರಾಜಕೀಯ ಜೀವನದ ಮೊದಲ ವಿಲನ್ ಸಹೋದರ ಹೆಚ್.ಡಿ ರೇವಣ್ಣ. ಸಮ್ಮಿಶ್ರ ಸರ್ಕಾರದ ಇವತ್ತಿನ ಸ್ಥಿತಿಗೆ ರೇವಣ್ಣ ಕೊಡುಗೆ ಅಪಾರ. ಆತ ಹುಟ್ಟುತ್ತಾ ಸಹೋದರರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತಿಗೆ ಅನ್ವರ್ಥನಾಗಿದ್ದಾನೆ. ನಿಮ್ಮನ್ನು ಆತ ವ್ಯವಸ್ಥಿತವಾಗಿ ಹಂತ ಹಂತವಾಗಿ ಮುಗಿಸಿಯೇ ಬಿಟ್ಟ. ಅದು ನಿಮಗೆ ಗೊತ್ತಾಗಲೇ ಇಲ್ಲ. ಇರಲಿ ಈಗಲಾದರೂ ಅದನ್ನು ಅರ್ಥ ಮಾಡಿಕೊಳ್ಳಿ. ನಿಮ್ಮ ಭವಿಷ್ಯ ಉತ್ತಮವಾಗುವುದು. ಇನ್ನು ಮುಖ್ಯ ವಿಷಯಕ್ಕೆ ಬರುತ್ತೇನೆ. ಸದ್ಯ ಸದನದಲ್ಲಿ ನಿಮ್ಮ ವರ್ತನೆ ರಾಜ್ಯದ ಜನರಿಗೆ ಮಾತ್ರವಲ್ಲ ನಿಮ್ಮದೇ ಸಮುದಾಯದ ಜನರಿಗೆ ಅಸಹ್ಯ ತರಿಸಿದೆ. ಅಸಹ್ಯ ಒಂದು ಕಡೆಯಾದರೆ ಮತ್ತೊಂದು ಕಡೆ ಗಬ್ಬೆದ್ದು ಹೋಗಿರುವ ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಜನರು ಶಾಸಕಾಂಗ ಕಾರ್ಯಾಂಗ ಪತ್ರಿಕಾರಂಗದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿರುವ ಕಾಲಘಟ್ಟದಲ್ಲಿ ನ್ಯಾಯಾಂಗ ಸಂವಿಧಾನದ ಮೇಲೆ ಇನ್ನು ನಂಬಿಕೆ ಇಟ್ಟಿದ್ದಾರೆ. ಆದರೆ ನೀವು ಅದನ್ನೇ ಬುಡಮೇಲು ಮಾಡಲು ಹೊರಟಿದ್ದೀರಾ? ನಿಮ್ಮ ವ್ಯಕ್ತಿತ್ವಕ್ಕೆ ಇದು ಶೋಭೆ ತರುವುದಿಲ್ಲ.

ರೇವಣ್ಣನಂತವನು ಇದನ್ನು ಮಾಡುವುದು ನಿರೀಕ್ಷಿತ. ಆದರೆ ತಾವು ಅವನಂತಲ್ಲ ಎಂದು ನಾನು ಭಾವಿಸಿದ್ದೇನೆ. ಅದಕ್ಕಾಗಿಯೇ ನಿಮಗೆ ಸೌಜನ್ಯವಾಗಿ ವಿನಂತಿಸಿಕೊಳ್ಳುತ್ತಿದ್ದೇನೆ. ಕಾನೂನಿಗೆ ಗೌರವ ಕೊಡಿ. ಹಿಂದಿನ ನಿದರ್ಶನಗಳನ್ನು ನೋಡಿ. ತೀರಾ ಹಿಂದೆಯಲ್ಲ ನೀವು ಸಿಎಂ ಆಗುವ ಮುನ್ನ ಆದ ಘಟನೆಗಳನ್ನು ನೆನಪಿಸಿಕೊಳ್ಳಿ. ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಯ ದಂಡನಾಯಕ ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಸಂವಿಧಾನಬದ್ಧವಾಗಿ ಸಿಎಂ ಆದರು. ಆದರೆ ರಾಜಕೀಯ ತಂತ್ರಗಳನ್ನು ಬಳಸಿ ಅವರು ವಿಶ್ವಾಸ ಮತ ಸಾಬೀತು ಮಾಡದಂತೆ ಮಾಡಿ ಒಂದೇ ದಿನದಲ್ಲಿ ಅವರನ್ನು ಕೆಳಗಿಳಿಸಿದ್ದೀರಿ. ಅವತ್ತಿನ ಉದಾಹರಣೆಯನ್ನೇ ನೋಡುವುದಾದರೂ ಅವತ್ತು ಯಡಿಯೂರಪ್ಪನವರಿಗೆ ನ್ಯಾಯಾಲಯ ಒಂದು ದಿನದಲ್ಲಿ ವಿಶ್ವಾಸ ಮತ ಯಾಚನೆ ಮಾಡಲು ಸೂಚಿಸಿತ್ತು.

HSN A Manju BJP

104 ಜನ ಇದ್ದವರಿಗೆ ಬೇಕಾಗಿದ್ದು ಕೇವಲ 9 ಜನರ ಬೆಂಬಲ. ಆದರೆ ಎಲ್ಲಿ ಅದು ಸಿಕ್ಕಿ ಬಿಡುತ್ತದೋ ಎಂದು ಅದಕ್ಕೆ ಅವಕಾಶ ಕೊಡದೇ ಅವರನ್ನು ಇಳಿಸಿಬಿಟ್ಟಿರಿ. ಆದರೆ ಈಗ ನೀವು ಮಾಡ್ತಾ ಇರೋದು ಏನು ಸ್ವಾಮಿ? ಅದೇ ಕಾನೂನು ರಾಜ್ಯಪಾಲರು ಯಾರೇ ಹೇಳಿದರೂ ಕುರ್ಚಿಗೆ ಅಂಟಿಕೊಂಡು ಕೂರುವ ಕೆಟ್ಟ ಬುದ್ಧಿ ಅದ್ಯಾಕೆ ಬಂತು? ದಯಮಾಡಿ ಈಗಲೂ ಕಾಲ ಮಿಂಚಿಲ್ಲ. ನೀವು ಸದಾ ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ, ಅಧಿಕಾರಕ್ಕೆ ಅಂಟಿಕೊಂಡಿಲ್ಲ ಎಂದು ಹೇಳುತ್ತೀರಿ. ಅದನ್ನು ಕೇವಲ ಘೋಷಣೆಗೆ ಮಾತ್ರ ಸೀಮಿತಗೊಳಿಸದೇ ದಯಮಾಡಿ ಕಾರ್ಯ ರೂಪಕ್ಕೂ ತನ್ನಿ. ಮುಂದಿನ ಪೀಳಿಗೆಗೆ ಒಬ್ಬ ಒಳ್ಳೆಯ ಜನನಾಯಕರಾಗಿ ನೆನಪಿನಲ್ಲಿರಿ. ಕೆಟ್ಟ ಪರಂಪರೆಗೆ ಅಡಿಪಾಯ ಹಾಕಿ ಕೆಟ್ಟವರಾಗಿ ಬಿಂಬಿತರಾಗದಿರಿ. ಇನ್ನೂ ಕಾಲ ಮಿಂಚಿಲ್ಲ ನೀವೇ ಸ್ವಯಂಪ್ರೇರಿತರಾಗಿ ರಾಜೀನಾಮೆ ಕೊಡಿ ನಿಮ್ಮ ಗೌರವ ಉಳಿಸಿಕೊಳ್ಳಿ ಎಂದು ನಾನು ಗೌರವಪೂರ್ವಕವಾಗಿ ವಿನಂತಿಸಿಕೊಳ್ಳುತ್ತಿದ್ದೇನೆ.

ಎ ಮಂಜು
ಮಾಜಿ ಸಚಿವರು

TAGGED:ಎ ಮಂಜುಕರ್ನಾಟಕ ಪೊಲಿಟಿಕ್ಸ್ಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಸಿಎಂಹೆಚ್ ಡಿ ರೇವಣ್ಣ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

KH Muniyappa
Kalaburagi

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

Public TV
By Public TV
47 minutes ago
Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
55 minutes ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

Public TV
By Public TV
60 minutes ago
02 9
Big Bulletin

ಬಿಗ್‌ ಬುಲೆಟಿನ್‌ 11 January 2026 ಭಾಗ-2

Public TV
By Public TV
1 hour ago
01 9
Big Bulletin

ಬಿಗ್‌ ಬುಲೆಟಿನ್‌ 11 January 2026 ಭಾಗ-1

Public TV
By Public TV
1 hour ago
03 9
Big Bulletin

ಬಿಗ್‌ ಬುಲೆಟಿನ್‌ 11 January 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?