ಮಡಿಕೇರಿ: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajapete) ತಾಲ್ಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ.
ವಿರಾಜಪೇಟೆ ತಾಲೂಕು ಕರಡ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶೀಲಾ ದಂಪತಿ ಪುತ್ರಿ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಮಹಿಳೆ. ಇದನ್ನೂ ಓದಿ: ತಯಾರಿಕಾ ವಲಯದಲ್ಲಿ ಮಾನವ-ಯಾಂತ್ರಿಕ ಬುದ್ಧಿಯ ಸಮನ್ವಯತೆ: ಭುವನ್ ಲೋಧಾ
Advertisement
Advertisement
ದಿನೇಶ್-ಕಾವೇರಮ್ಮ ಮದುವೆಯಾಗಿ ಸುಮಾರು 4 ವರ್ಷಗಳು ಕಳೆದಿದೆ. ಫೆ.12 ರಂದು ಪತಿ ದಿನೇಶ್ ತಮ್ಮ ಮನೆಯ ಸನೀಹದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡಿದ್ದಾರೆ. ಕಾವೇರಮ್ಮ ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನೂ ಓದಿ: ಪ್ರೇಮಿಗಳ ದಿನಕ್ಕೆ ದುಬಾರಿಯಾದ ಗುಲಾಬಿ – ತೋಟದಲ್ಲೇ 1 ರೆಡ್ ರೋಸ್ಗೆ 25-30 ರೂ.
Advertisement
Advertisement
ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತಳ ಅಣ್ಣ ಎಂ.ಎ ತಿಮ್ಮಯ್ಯ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವ್ರು ರಾಜ್ಯದ ದೀರ್ಘಾವಧಿ ಸಿಎಂ ಆಗಲೆಂದು ಹಾರೈಸ್ತೇನೆ – ಪರಮೇಶ್ವರ್