ಕನ್ನಡದ ಖ್ಯಾತ ನಟಿಯೊಬ್ಬಳು ನಿರ್ದೇಶಕನನ್ನೇ ಮಂಚಕ್ಕೆ ಕರೆದ ಕಥೆಗೆ ಮೆಗಾ ಟ್ವಿಸ್ಟ್

Public TV
1 Min Read
geetha krishna

ರಡು ದಿನದ ಹಿಂದೆಯಷ್ಟೇ ಟಾಲಿವುಡ್ ನಿರ್ದೇಶಕ ಕಂ ನಿರ್ಮಾಪಕ ಗೀತಕೃಷ್ಣ ತನ್ನ ನಾಲಿಗೆ ಹರಿಬಿಟ್ಟು, ವಿವಾದ ಸೃಷ್ಟಿ ಮಾಡಿಕೊಂಡಿದ್ದ. ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿದ್ದ ಈ ಆಸಾಮಿ ‘ಕನ್ನಡದಲ್ಲಿ ಸಿನಿಮಾ ಮಾಡಲು ಹೋಗಿದ್ದೆ. ಅಲ್ಲಿನ ಖ್ಯಾತ ನಟಿಯೊಬ್ಬಳು ನನ್ನನ್ನೇ ಮಂಚಕ್ಕೆ ಕರೆದುಬಿಟ್ಟಳು. ಲೈಂಗಿಕ ಕಿರುಕುಳ ಹೆಣ್ಣುಮಕ್ಕಳ ಮೇಲೆ ಆಗುತ್ತದೆ ಎಂದು ಕೇಳಿದ್ದೀರಿ. ಕನ್ನಡದಲ್ಲಿ ಗಂಡುಮಕ್ಕಳ ಮೇಲೆ ಹೀಗೆ ಆಗುತ್ತಿದೆ ಎಂದು ಸ್ವತಃ ಅನುಭವಿಸಿದೆ’ ಎಂದು ಹೇಳುವ ಮೂಲಕ ವಿವಾದ ಸೃಷ್ಟಿ ಮಾಡಿದ್ದರು. ಇದನ್ನೂ ಓದಿ : ನಿಮ್ಮ ಬಾಡಿಯನ್ನು ನೀವೇ ಲವ್ ಮಾಡಬೇಕು : ರಾಗಿಣಿ

geethakrishna

ಗೀತಕೃಷ್ಣ ಮಾತು ಸ್ಯಾಂಡಲ್‌ವುಡ್‌ ಮತ್ತು ಟಾಲಿವುಡ್ ಅಂಗಳದಲ್ಲಿ ಬಿರುಗಾಳಿಯನ್ನೇ ಸೃಷ್ಟಿ ಮಾಡಿತ್ತು. ಪದೇ ಪದೇ ತಮಿಳು ಮತ್ತು ತೆಲುಗು ನಟರು ಕನ್ನಡ ಸಿನಿಮಾ ರಂಗದ ಮೇಲೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಗೀತಕೃಷ್ಣ ಉಲ್ಟಾ ಹೊಡೆದಿದ್ದಾರೆ. ಮತ್ತು ತಾವು ಆ ರೀತಿಯಲ್ಲಿ ಮಾತೇ ಆಡಿಲ್ಲವೆಂದು, ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ : ಸದ್ದಿಲ್ಲದೇ ಶುರುವಾಯ್ತು ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ : ಮೊದಲ ದಿನವೇ ಫೋಟೋ ಲೀಕ್

director geethakrishna

ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ನಾನು ಕನ್ನಡ ಸಿನಿಮಾ ರಂಗದ ಕುರಿತು ಅವಹೇಳನವಾಗುವಂತಹ ಯಾವುದೇ ಮಾತಗಳನ್ನು ಆಡಿಲ್ಲ. ಕನ್ನಡದ ನಟಿಯೊಬ್ಬರು ಮಂಚಕ್ಕೆ ಕರೆದಿದ್ದರು ಎಂದು ಹೇಳಿಲ್ಲ. ಸಿನಿಮಾ ರಂಗದಲ್ಲಿ ಕಾಮನ್ ಆಗಿ ಇಂಥದ್ದು ನಡೆಯುತ್ತದೆ ಎಂದು ಹೇಳಿದ್ದೆ. ಅದನ್ನೇ ಇಷ್ಟೊಂದು ದೊಡ್ಡದು ಮಾಡಲಾಗುತ್ತಿದೆ. ನಾನು ಆ ರೀತಿಯಲ್ಲಿ ಹೇಳಿಯೇ ಇಲ್ಲವೆಂದು ಅವರು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *