Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಮೌಳಿ ಶಿಷ್ಯನಿಂದ ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕೃತಿ ಆಧರಿಸಿದ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ರಾಜಮೌಳಿ ಶಿಷ್ಯನಿಂದ ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕೃತಿ ಆಧರಿಸಿದ ಸಿನಿಮಾ

Bollywood

ರಾಜಮೌಳಿ ಶಿಷ್ಯನಿಂದ ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕೃತಿ ಆಧರಿಸಿದ ಸಿನಿಮಾ

Public TV
Last updated: August 17, 2022 1:20 pm
Public TV
Share
3 Min Read
FotoJet 45
SHARE

‘ಬಾಹುಬಲಿ’ ಚಿತ್ರಗಳ ನಂತರ ಪ್ಯಾನ್ ಇಂಡಿಯಾ ನಿರ್ದೇಶಕ ಎಂದೇ ಖ್ಯಾತರಾಗಿರುವ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಈಗ’ ಮತ್ತು ‘ಬಾಹುಬಲಿ’ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅಶ್ವಿನ್ ಗಂಗರಾಜು ಇದೀಗ ‘1770’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 75ನೇ ಸ್ವಾತಂತ್ರ್ಯೋತ್ಸದ ಹಿನ್ನೆಲೆಯಲ್ಲಿ ಈ ಚಿತ್ರವನ್ನು ಅಧಿಕೃತವಾಗೊಗಿ ಘೋಷಿಸಲಾಗಿದೆ. ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕಾದಂಬರಿಯನ್ನು ಆಧರಿಸಿದ ಈ ಬಹುಭಾಷಾ ಚಿತ್ರವನ್ನು ಎಸ್ಎಸ್1 ಎಂಟರ್ಟೈನ್ಮೆಂಟ್ ಮತ್ತು ಪಿಕೆ ಎಂಟರ್ಟೈನ್ಮೆಂಟ್ ಸಂಸ್ಥೆಗಳಡಿ ಶೈಲೇಂದ್ರ ಕುಮಾರ್, ಸುಜಯ್ ಕುಟ್ಟಿ, ಕೃಷ್ಣಕುಮಾರ್ ಬಿ ಮತ್ತು ಸೂರಜ್ ಶರ್ಮ ನಿರ್ಮಿಸುತ್ತಿದ್ದಾರೆ. ಇನ್ನು, ಖ್ಯಾತ ಲೇಖಕ ಮತ್ತು ಚಿತ್ರನಿರ್ದೇಶಕ ರಾಮ್ ಕಮಲ್ ಮುಖರ್ಜಿ ಈ ಚಿತ್ರದ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ. ವಂದೇ ಮಾತರಂಗೆ 150 ವರ್ಷವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

FotoJet 5 4

ಈ ಹಿಂದೆ ‘ಆಕಾಶವಾಣಿ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಅಶ್ವಿನ್ ಗಂಗರಾಜು ಅವರಿಗೆ ಇದು ನಿರ್ದೇಶಕರಾಗಿ ಎರಡನೆಯ ಚಿತ್ರ. ಈ ಕುರಿತು ಮಾತನಾಡುವ ಅವರು, ‘ಇಂಥದ್ದೊಂದು ಅದ್ಭುತ ದೃಶ್ಯಕಾವ್ಯವನ್ನು ತೆರೆಗೆ ತರುವುದು ದೊಡ್ಡ ಸವಾಲು. ಆದರೆ, ರಾಜಮೌಳಿ  ಅವರ ತಂದೆ ವಿ. ವಿಜಯೇಂದ್ರ ಪ್ರಸಾದ್ ಅವರು ಕಥೆ, ಚಿತ್ರಕಥೆ ರಚಿಸುತ್ತಿರುವುದರಿಂದ, ಚಿತ್ರ ಅದ್ಭುತವಾಗಿ ಮೂಡಿಬರುತ್ತದೆ ಎಂಬ ವಿಶ್ವಾಸವಿದೆ. ಒಬ್ಬ ನಿರ್ದೇಶಕನಾಗಿ ಬೇರೆ ಕಾಲಘಟ್ಟದ, ಎಮೋಷನ್ಗಳು ಹೆಚ್ಚಿರುವಂತಹ ಮತ್ತು ಆಕ್ಷನ್ ದೃಶ್ಯಗಳಿಗೆ ಹೆಚ್ಚು ಮಹತ್ವ ಇರುವಂತಹ ಚಿತ್ರಗಳನ್ನು ನಿರ್ದೇಶಿಸಬೇಕು ಎನ್ನುವುದು ನನ್ನ ವೈಯಕ್ತಿಕ ಆಸೆ. ಅದಕ್ಕೆ ಅನುಗುಣವಾಗಿ, ಈ ಕಥೆಯಲ್ಲಿ ಎಲ್ಲವೂ ಇದೆ. ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತೆರೆಗೆ ತರಬೇಕು ಎನ್ನುವುದು ನಿರ್ಮಾಪಕರ ಕನಸಾಗಿದ್ದು, ಆ ಕನಸನ್ನು ನನಸು ಮಾಡುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪರಿಪೂರ್ಣವಾಗಿ ನಿಭಾಯಿಸುತ್ತೇನೆ ಎಂಬ ನಂಬಿಕೆ ನನಗಿದೆ’ ಎನ್ನುತ್ತಾರೆ ಆಶ್ವಿನ್. ಈಗಾಗಲೇ ಅವರು ತಮ್ಮ ತಂಡದೊಂದಿಗೆ ಈ ಚಿತ್ರದ ಕುರಿತು ಸಾಕಷ್ಟು ರೀಸರ್ಚ್ ಮಾಡಿ, ಚಿತ್ರೀಕರಣಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ಬಾಯ್ಕಾಟ್ ಟ್ರೆಂಡ್ ಬೆಳೆಯದಂತೆ ಹತ್ತಿಕ್ಕಬೇಕು : ನಟ ಅರ್ಜುನ್ ಕಪೂರ್

FotoJet 1 30

ಬಂಕಿಮ್ ಚಂದ್ರ ಅವರ ‘ಆನಂದಮಠ’ ಕಾದಂಬರಿಯಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಕವನವು ಪ್ರಕಟವಾಗಿತ್ತು. ಈ ಕವನವು ಬ್ರಿಟಿಷ್ ಸಾಮ್ರಾಜ್ಯವನ್ನು ಅಕ್ಷರಶಃ ಅಲ್ಲಾಡಿಸಿತ್ತು. ವಂದೇ ಮಾತರಂ ಎನ್ನುವುದು ಮಹರ್ಷಿ ಬಂಕಿಮ ಚಂದ್ರರು ದೇಶವನ್ನು ಒಗ್ಗೂಡಿಸಲು ಉಚ್ಛರಿಸಿದ ಒಂದು ಮಂತ್ರ ಎನ್ನುತ್ತಾರೆ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಬರೆದಿರುವ ವಿಜಯೇಂದ್ರ ಪ್ರಸಾದ್. ‘ಈ ದೇಶವು ಬ್ರಿಟಿಷರಿಂದ ಅನುಭವಿಸುತ್ತಿದ್ದ ದಾಸ್ಯ ಮತ್ತು ಅನ್ಯಾಯದ ವಿರುದ್ಧ ಭಾರತೀಯರನ್ನು ಒಗ್ಗೂಡಿಸಲು ಬಳಿಸದ ಒಂದು ಮಂತ್ರವಾಗಿತ್ತು. ಈ ಚಿತ್ರದಲ್ಲಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ ಅದೆಷ್ಟೋ ಅಜ್ನಾತ ವೀರ ಯೋಧರ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದೇವೆ’ ಎನ್ನುತ್ತಾರೆ.

FotoJet 4 9

ದೊಡ್ಡ ಬಜೆಟ್ನ ಮತ್ತು ಗಾತ್ರದ ಚಿತ್ರಗಳನ್ನು ಮಾಡುವುದಕ್ಕೆ ಇದು ಒಳ್ಳೆಯ ಸಮಯ ಎನ್ನುತ್ತಾರೆ ಎಸ್ಎಸ್1 ಎಂಟರ್ಟೈನ್ಮೆಂಟ್ನ ಶೈಲೇಂದ್ರ ಕುಮಾರ್. ‘ಮೂಲತಃ ಜಾನ್ಸಿಯವರಾದ ನಾವು ವಂದೇ ಮಾತರಂ ಹಾಡುತ್ತಾ, ಕೇಳುತ್ತಾ ಬೆಳೆದವರು ನಾವು. ಆದರೆ, ವಿಜಯೇಂದ್ರ ಪ್ರಸಾದ್ ಅವರು ಹೇಳಿದ ಕಥೆಯನ್ನು ಕೇಳಿ ನಿಜಕ್ಕೂ ದಂಗಾದೆವು. ಇಂಥದ್ದೊಂದು ಅಪರೂಪದ ಕಥೆಯನ್ನು ತೆರೆಯ ಮೇಲೆ ತರುವುದಕ್ಕೆ ಕೈ ಜೋಡಿಸಿರುವ ಸುಜಯ್ ಕುಟ್ಟಿ ಮತ್ತು ಕೃಷ್ಣಕುಮಾರ್ ಅವರಿಗೆ ನಾವು ಆಭಾರಿ. ಇದೊಂದು ಬರೀ ಚಿತ್ರವಲ್ಲ, ಬೆಳ್ಳಿಪರದೆಯ ಮೇಲೆ ಜನರನ್ನು ದೊಡ್ಡ ಮಟ್ಟದಲ್ಲಿ ಮನರಂಜಿಸಬೇಕು ಎಂಬ ದೊಡ್ಡ ಕನಸು’ ಎನ್ನುತ್ತಾರೆ ಶೈಲೇಂದ್ರ ಕುಮಾರ್.

FotoJet 2 26

ಸುಜಯ್ ಕುಟ್ಟಿ ಈ ಹಿಂದೆ ಜೀ ಸ್ಟುಡಿಯೋಸ್ ಸಂಸ್ಥೆಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದವರು. ‘ಮಣಿಕರ್ಣಿಕಾ – ದಿ ಕ್ವೀನ್ ಆಫ್ ಜಾನ್ಸಿ’ ಮುಂತಾದ ಚಿತ್ರದ ನಿರ್ಮಾಣದಲ್ಲಿ ಗುರುತಿಸಿಕೊಂಡಿದ್ದವರು. ತಮ್ಮ ಹಾಗೂ ವಿಜಯೇಂದ್ರ ಪ್ರಸಾದ್ ಅವರ ಸ್ನೇಹ ಚಿತ್ರಗಳನ್ನು ಮೀರಿದ್ದು ಎನ್ನುವ ಅವರು, ‘ವಿಜಯೇಂದ್ರ ಪ್ರಸಾದ್ ಅವರು ನಮಗೆಲ್ಲರಿಗೂ ಸ್ಫೂರ್ತಿ. ನಾವು ‘1770’ ಚಿತ್ರವನ್ನು ನಿರ್ಮಿಸಿದರೆ, ಅದನ್ನು ವಿಜಯೇಂದ್ರ ಪ್ರಸಾದ್ ಅವರೇ ಬರೆಯಬೇಕು ಎಂದು ಮೊದಲೇ ಹೇಳಿದ್ದೆ. ಇಲ್ಲವಾದರೆ ಈ ಚಿತ್ರ ಮಾಡುವುದಿಲ್ಲ ಎಂದಿದ್ದೆ. ಅದಕ್ಕೆ ಸರಿಯಾಗಿ, ಅವರು ಒಪ್ಪಿ ನಮ್ಮ ಚಿತ್ರದ ಕಥೆ-ಚಿತ್ರಕಥೆಯನ್ನು ಪ್ರೀತಿಯಿಂದ ಬರೆದುಕೊಟ್ಟಿದ್ದಾರೆ’ ಎನ್ನುತ್ತಾರೆ ಸುಜಯ್ ಕುಟ್ಟಿ. ‘1770’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ದಸರಾ ಹೊತ್ತಿಗೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಱರು ಆಯ್ಕೆಯಾಗಲಿದ್ದು, ದೀಪಾವಳಿ ವೇಳೆಗೆ ಅಧಿಕೃತ ಘೋಷಣೆಯಾಗಲಿದೆ.

Live Tv
[brid partner=56869869 player=32851 video=960834 autoplay=true]

TAGGED:1770Ananda MathAshwini GangarajBankima Chandra Chatterjeecinemarajamouliಅಶ್ವಿನಿ ಗಂಗರಾಜ್ಆನಂದಮಠಬಂಕಿಮ ಚಂದ್ರ ಚಟರ್ಜಿರಾಜಮೌಳಿಸಿನಿಮಾ
Share This Article
Facebook Whatsapp Whatsapp Telegram

Cinema news

Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories
Prabhas 2
ದಿ ಸ್ಕ್ರಿಪ್ಟ್ ಕ್ರಾಫ್ಟ್ ಕಿರುಚಿತ್ರೋತ್ಸವಕ್ಕೆ ಪ್ರಭಾಸ್ ಚಾಲನೆ
Cinema Latest South cinema
Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows

You Might Also Like

belthangady police registered an FIR against Girish Mattannavar Mahesh Shetty Thimarodi Sameer
Dakshina Kannada

ಸಮೀರ್‌, ತಿಮರೋಡಿ, ಮಟ್ಟಣ್ಣನವರ್‌ ವಿರುದ್ಧ ಚಿನ್ನಯ್ಯ ದೂರು

Public TV
By Public TV
11 minutes ago
Yellow Line Metro
Bengaluru City

ಹಳದಿ ಮಾರ್ಗದ 1 ರೈಲಿನಲ್ಲಿ ತಾಂತ್ರಿಕ ಸಮಸ್ಯೆ – 19 ನಿಮಿಷದ ಅಂತರದಲ್ಲಿ ಸಂಚಾರ

Public TV
By Public TV
45 minutes ago
pm modi west bengal
Latest

ಪಶ್ಚಿಮ ಬಂಗಾಳದ ಬೀದಿಗಳಲ್ಲಿ ಬದುಕಲು ಬಿಜೆಪಿ ಬೇಕು ಎಂಬ ಘೋಷಣೆ ಕೇಳಿಬರ್ತಿದೆ: ಮೋದಿ

Public TV
By Public TV
2 hours ago
400 buses added to Kalyana Karnataka Road Transport Corporation
Bellary

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 400 ಬಸ್ಸು ಸೇರ್ಪಡೆ

Public TV
By Public TV
2 hours ago
Abuse in school for mentally Disabled children Bagalkote action against teachers Lakshmi Hebbalkar
Bagalkot

ಬುದ್ದಿಮಾಂದ್ಯ ಮಕ್ಕಳ ಶಾಲೆಯಲ್ಲಿ ದೌರ್ಜನ್ಯ – ಶಿಕ್ಷಕರ ವಿರುದ್ಧ ಕ್ರಮಕ್ಕೆ ಹೆಬ್ಬಾಳ್ಕರ್‌ ಸೂಚನೆ

Public TV
By Public TV
2 hours ago
Telangana Woman Beaten To Death By Husband Allegedly Over Dowry
Crime

ಪ್ರೀತಿಸಿ ಮದುವೆಯಾದ ಎಂಟೇ ತಿಂಗಳಿಗೆ ಪತ್ನಿಯನ್ನು ಥಳಿಸಿ ಕೊಂದ ಪತಿ – ಸಿಸಿಟಿವಿಯಲ್ಲಿ ಕೃತ್ಯ ಸೆರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?