Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖ್ಯಾತ ಗಾಯಕ, ನಟ ರಾಜು ಅನಂತಸ್ವಾಮಿ ನೆನಪಲ್ಲಿ ಸಂಗೀತ ಸಂಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಖ್ಯಾತ ಗಾಯಕ, ನಟ ರಾಜು ಅನಂತಸ್ವಾಮಿ ನೆನಪಲ್ಲಿ ಸಂಗೀತ ಸಂಜೆ

Cinema

ಖ್ಯಾತ ಗಾಯಕ, ನಟ ರಾಜು ಅನಂತಸ್ವಾಮಿ ನೆನಪಲ್ಲಿ ಸಂಗೀತ ಸಂಜೆ

Public TV
Last updated: April 17, 2024 1:45 pm
Public TV
Share
3 Min Read
raju ananthaswamy
SHARE

ತಮ್ಮ ಅಮೋಘ ಗಾಯನದಿಂದ ವಿಶ್ವದೆಲ್ಲೆಡೆ ಮನೆಮಾತಾಗಿದ್ದ ಖ್ಯಾತ ಗಾಯಕ ರಾಜು ಅನಂತಸ್ವಾಮಿ (Raju Ananthaswamy) ಅವರ ನೆನಪಿನಲ್ಲೊಂದು ಸುಗಮ ಸಂಗೀತ ಸಂಜೆ ‘ರಾಜು ದಿ ಲೆಜೆಂಡ್’ (Raju the Legend) ಎಂಬ ಹೆಸರಿನಲ್ಲಿ ಏಪ್ರಿಲ್ 19 ರಂದು ಕೋಣನ ಕುಂಟೆ ಬಳಿಯ ಶ್ರೀಹರಿ ಖೋಡೆ ಆಡಿಟೋರಿಯಂ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಹೆಸರಾಂತ ಡ್ರಮರ್ ಮಂಜನಾಥ್ ಸತ್ಯಶೀಲ್ ಹಾಗೂ ಖ್ಯಾತ ಗಾಯಕಿ ಅನನ್ಯ ಭಟ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಹಿರಿಯ ರಂಗಕರ್ಮಿ ಶ್ರೀನಿವಾಸ್ ಜಿ ಕಪ್ಪಣ್ಣ, ಸಂಗೀತ ನಿರ್ದೇಶಕರಾದ ಪ್ರವೀಣ್ ಡಿ ರಾವ್, ಪ್ರವೀಣ್ ಮತ್ತು ಪ್ರದೀಪ್ ಹಾಗೂ ಗಾಯಕಿ ದಿವ್ಯ ರಾಘವನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Raju the Legend 2

ರಾಜು ಅನಂತಸ್ವಾಮಿ ಅವರ ಹಾಡುಗಳನ್ನು ಕೇಳಿ ಬೆಳೆದ ನನಗೆ ಅವರ ಹೆಸರಿನಲ್ಲೊಂದು ಕಾರ್ಯಕ್ರಮ ಮಾಡಬೇಕೆನಿಸಿತು. ಈ ಕುರಿತು ಸ್ನೇಹಿತರಾದ ಖ್ಯಾತ ಡ್ರಮ್ಮರ್ ಮಂಜುನಾಥ್ ಸತ್ಯಶೀಲ್  ಅವರ ಬಳಿ ಹೇಳಿದೆ. ಅವರ ಯೋಚನೆ ಕೂಡ ಇದೇ ಆಗಿತ್ತು. ನಾವಿಬ್ಬರು ಈ ಸಮಾರಂಭವನ್ನು ಆಯೋಜಿಸಲು ಮುಂದಾದೆವು. ಈ ಕುರಿತು ಎಲ್ಲರೊಡನೆ ಚರ್ಚಿಸಿದಾಗ ರಾಜು ಅನಂತಸ್ವಾಮಿ ಅವರ ಹತ್ತಿರದ ಒಡನಾಡಿಗಳು ಹಾಗೂ ಅವರ ಶಿಷ್ಯರು ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಂತರು. ‌ಶ್ರೀನಿವಾಸ ಜಿ ಕಪ್ಪಣ್ಣ ಹಾಗೂ ಪ್ರವೀಣ್ ಡಿ ರಾವ್ ಅವರಂತಹ ಹಿರಿಯರ ಮಾರ್ಗದರ್ಶನದಲ್ಲಿ ಈ ಸಮಾರಂಭ ನಡೆಯಲಿದೆ. ಏಪ್ರಿಲ್ 19 ರಾಜು ಅನಂತಸ್ವಾಮಿ ಅವರ ಹುಟ್ಟುಹಬ್ಬ. ಹಾಗಾಗಿ ಅದೇ ದಿನ “ರಾಜು ದಿ ಲೆಜೆಂಡ್” ಹೆಸರಿನಲ್ಲಿ ರಾಜು ಅನಂತಸ್ವಾಮಿ ಅವರ ಹಾಡುಗಳ ಸುಗಮ ಸಂಗೀತ ಸಂಜೆ  ಕೋಣನಕುಂಟೆಯ ಶ್ರೀಹರಿ ಖೋಡೆ ಆಡಿಟೋರಿಯಂ ನಲ್ಲಿ  ನಡೆಯಲಿದೆ. ನಾಡಿನ ಅನೇಕ ಹೆಸರಾಂತ ಕಲಾವಿದರು ಹಾಗೂ ಗಾಯಕರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ರಾಜು ಅನಂತಸ್ವಾಮಿ ಅವರ ಹದಿನೆಂಟು ಹಾಡುಗಳ ಗಾಯನ ಸುಪ್ರಸಿದ್ದ ಗಾಯಕ, ಗಾಯಕಿಯರ ಕಂಠಸಿರಿಯಲ್ಲಿ ಮೊಳಗಲಿದೆ. ಆಧುನಿಕ ತಂತ್ರಜ್ಞಾನ AI ಮೂಲಕ ರಾಜು ಅನಂತಸ್ವಾಮಿ ಅವರ ಕುರಿತಾದ ವಿಷುಯಲ್ಸ್ ಪ್ರದರ್ಶನವಾಗುತ್ತದೆ. ಮೊದಲು ಈ ಸಮಾರಂಭವನ್ನು ಸಣ್ಣ ಮಟ್ಟದಲ್ಲಿ ಮಾಡಬೇಕೆಂದುಕೊಂಡೆವು. ಈಗ ದೊಡ್ಡಮಟ್ಟದಲ್ಲಿ ರಾಜ್ಯದಲ್ಲೇ ದೊಡ್ಡ ಆಡಿಟೋರಿಯಂನಲ್ಲಿ ಈ ಸಮಾರಂಭ ನಡೆಯಲಿದೆ. ಈ ಸಂಗೀತ ಸಂಜೆ ಯಶಸ್ವಿಯಾಗಲು ಜನರ ಸಹಕಾರ ಅಗತ್ಯ. ರಾಜು ಅನಂತಸ್ವಾಮಿ ಅವರ ಅಭಿಮಾನಿಗಳು ಹಾಗೂ ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಈ ಮೂಲಕ ವಿನಂತಿ ಮಾಡುತ್ತೇವೆ‌ ಎಂದು ಗಾಯಕಿ ಅನನ್ಯ ಭಟ್ ತಿಳಿಸಿದರು.

Raju the Legend 1

ರಾಜು ಅನಂತಸ್ವಾಮಿ ಅವರ ಅಭಿಮಾನಿಯಾಗಿ ಹಾಗೂ ಅವರ ವಿದ್ಯಾರ್ಥಿಯಾಗಿ ಅವರ ಬಗ್ಗೆ ಒಂದು ಕಾರ್ಯಕ್ರಮ ಮಾಡಬೇಕೆನಿಸಿತು. ಏಪ್ರಿಲ್ 19, ರಾಜು ಅನಂತಸ್ವಾಮಿ ಅವರ ಹುಟ್ಟುಹಬ್ಬ. ಅದೇ ದಿನ “ರಾಜು ದಿ ಲೆಜೆಂಡ್” ಎಂಬ ಕಾರ್ಯಕ್ರಮ ಮಾಡಲು ನಾನು ಹಾಗೂ ಅನನ್ಯ ಭಟ್ ನಿರ್ಧರಿಸಿದ್ದೆವು. ನಂತರ ನಮ್ಮೊಂದಿಗೆ ರಾಜು ಅನಂತಸ್ವಾಮಿ ಅವರ ಒಡನಾಡಿಗಳು, ಅಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಜೊತೆಯಾದರು. ಸುಗಮ ಸಂಗೀತ ಕಾರ್ಯಕ್ರಮ ಎಂದರೆ ಸೀಮಿತ ವಾದ್ಯಗಾರರಷ್ಟೇ ಇರುತ್ತಾರೆ. ಆದರೆ “ರಾಜು ದಿ ಲೆಜೆಂಡ್” ಸುಗಮ ಸಂಗೀತ ಕಾರ್ಯಕ್ರಮದಲ್ಲಿ ನಾಡಿನ ಸುಪ್ರಸಿದ್ಧ ಗಾಯಕ, ಗಾಯಕಿಯರು, ಸಹ ಹಾಡುಗಾರರು(ಕೋರಸ್) ಹಾಗೂ ವಾದ್ಯಗಾರರು ಉಪಸ್ಥಿತರಿರುತ್ತಾರೆ. ಅಷ್ಟೇ ಅಲ್ಲದೇ ಬೇರೆ ದೇಶದ ವಿವಿಧ ವಾದ್ಯಗಳನ್ನು ಇದೇ ಮೊದಲ ಬಾರಿಗೆ ಸುಗಮ ಸಂಗೀತದ ಹಾಡುಗಳಿಗೆ ಬಳಸುವ ವಿಶಿಷ್ಟ ಪ್ರಯತ್ನ ಕೂಡ ಮಾಡಲಾಗುತ್ತಿದೆ‌. ಈ ಸಮಾರಂಭವನ್ನು ವಿಶ್ವಮಟ್ಟದಲ್ಲಿ ಗುರುತಿಸುವ ಹಾಗೆ ಮಾಡಬೇಕೆಂಬುದು ನಮ್ಮೆಲ್ಲರ ಕನಸು. ಆ ಕನಸಿಗೆ ಕನ್ನಡ ಕಲಾರಸಿಕರು ಆಸರೆಯಾಗುವ ಭರವಸೆಯಿದೆ. ಇಡೀ ಸಮಾರಂಭ ರಾಜು ಅನಂತಸ್ವಾಮಿ ಅವರಿಗೆ ಅರ್ಪಣೆಯಾಗಲಿದೆ ಎಂದು ಕಾರ್ಯಕ್ರಮದ ಬಗ್ಗೆ ಮಂಜುನಾಥ್ ಸತ್ಯಶೀಲ್ (ಡ್ರಮ್ಮರ್) ಮಾಹಿತಿ ನೀಡಿದರು.

ರಾಜು ಅನಂತಸ್ವಾಮಿ ಅವರೊಂದಿಗಿನ ಒಡನಾಟವನ್ನು  ನೆನಪಿಸಿಕೊಂಡ ಹಿರಿಯ ರಂಗಕರ್ಮಿ ಶ್ರೀನಿವಾಸ್ ಜಿ ಕಪ್ಪಣ್ಣ, “ರಾಜು ದಿ ಲೆಜೆಂಡ್” ಸಮಾರಂಭ ಯಶಸ್ವಿಯಾಗಲೆಂದು ಹಾರೈಸಿದರು. ಪ್ರವೀಣ್ ಡಿ ರಾವ್, ದಿವ್ಯ ರಾಘವನ್, ಪ್ರವೀಣ್ ಹಾಗೂ ಪ್ರದೀಪ್ ಸಹ ಸಮಾರಂಭದ ಕುರಿತು ಮಾತನಾಡಿದರು.

TAGGED:musicprogramRaju AnanthaswamyRaju the Legendಕಾರ್ಯಕ್ರಮರಾಜು ಅನಂತಸ್ವಾಮಿರಾಜು ದಿ ಲೆಜೆಂಡ್ಸಂಗೀತ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

daily horoscope dina bhavishya
Astrology

ದಿನ ಭವಿಷ್ಯ 30-04-2026

Public TV
By Public TV
8 minutes ago
Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
7 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
7 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
7 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
7 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?