Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru Rural

ವೃದ್ಧೆಯನ್ನು ಕೊಂದು, ಕಬೋರ್ಡ್‌ನಲ್ಲಿ ಸುತ್ತಿಟ್ಟು ಅನ್ಯಕೋಮಿನ ಮಹಿಳೆ ಎಸ್ಕೇಪ್

Public TV
Last updated: December 4, 2022 4:40 pm
Public TV
Share
2 Min Read
Bengaluru Murder
SHARE

ಆನೇಕಲ್: ದೆಹಲಿಯ ಶ್ರದ್ಧಾವಾಕರ್ (Shraddha Walker) ಹತ್ಯೆ ಪ್ರಕರಣದ ಮಾದರಿಯಲ್ಲೇ ಅನ್ಯಕೋಮಿನ ಮಹಿಳೆಯೊಬ್ಬರು ವೃದ್ಧೆಯನ್ನು ಕೊಂದು, ಮೃತದೇಹವನ್ನು ಕಬೋರ್ಡ್‌ನಲ್ಲಿ ಸುತ್ತಿಟ್ಟಿದ್ದ ಘಟನೆ ಬೆಂಗಳೂರು (Bengaluru) ಹೊರಹೊಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ.

ಕೊಲೆಯ (Murder) ಆರೋಪಿಯನ್ನು ನೆರಳೂರು ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಾಯಲ್ ಖಾನ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ರಾಮುಲು ಗೈರು- ಮುರಿದು ಬಿತ್ತಾ ದಶಕಗಳ ಗೆಳೆತನದ ನಂಟು..?

Bengaluru Murder 3

ಪಾಯಲ್ ಖಾನ್ ತನ್ನ ಕೆಳಮನೆಯಲ್ಲಿ ಬಾಡಿಗೆಗೆ ವಾಸವಿದ್ದ ವೃದ್ಧೆಯನ್ನು ಕೊಂದು ಎಸ್ಕೇಪ್ ಆಗಿದ್ದಾಳೆ. ಕಳೆದ ಮೂರು ದಿನಗಳ ಹಿಂದೆ ಈ ಮಹಿಳೆ ಅಜ್ಜಿಯನ್ನು ಮನೆಗೆ ಕರೆದಿದ್ದಳು. ಅನಂತರ ಎಷ್ಟು ಹುಡುಕಿದರೂ ಸಿಗಲೇ ಇಲ್ಲ. ಕೊಲೆ ಮಾಡಿ ಒಂದು ದಿನದ ನಂತರ ಮುಸ್ಲಿಂ ಮಹಿಳೆ (Muslim Women) ಎಸ್ಕೇಪ್ ಆಗಿದ್ದಳು. ಇದರಿಂದ ಅನುಮಾನಗೊಂಡ ಅಜ್ಜಿ ಮನೆಯವರು ಆಕೆಯ ಮನೆಬೀಗ ತೆಗೆಸಿ ನೋಡಿದ್ದಾರೆ. ಮನೆಯಲ್ಲಾ ಹುಡುಕಾಡಿದಾಗ ಅಜ್ಜಿಯ ಮೃತದೇಹವನ್ನು ಪ್ಯಾಕ್ ಮಾಡಿ ಕಬೋರ್ಡ್‌ನಲ್ಲಿ ಇಟ್ಟಿದ್ದನ್ನು ಕಂಡು ದಂಗಾಗಿದ್ದಾರೆ. ಬಳಿಕ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Bengaluru Murder 2

ತುಮಕೂರು ಜಿಲ್ಲೆಯ ಶಿರಾ ಮೂಲತದ ವೃದ್ಧೆ ಪಾರ್ವತಮ್ಮ ಕಳೆದ 9 ತಿಂಗಳ ಹಿಂದೆ ನೆರಳೂರಿಗೆ ಬಾಡಿಗೆಗೆ ಬಂದಿದ್ದರು. ಶುಕ್ರವಾರ ಪಾರ್ವತಮ್ಮ ಅವರ ಸೊಸೆ ಜ್ಯೋತಿ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರಲು ಹೊರಗೆ ಹೋಗಿದ್ದಾರೆ. ಈ ವೇಳೆ ಅಜ್ಜಿಯನ್ನು ಮನೆಗೆ ಕರೆದುಕೊಂಡು ಹೋದ ಮಹಿಳೆ ಕೃತ್ಯ ಎಸಗಿದ್ದಾಳೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಕ್ಷೌರಿಕನ ಮಗ 250ನೇ ಏಕದಿನ ಆಟಗಾರನಾಗಿ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದೇ ರೋಚಕ

Bengaluru Murder 1

ಆರೋಪಿ ಮಹಿಳೆ ಪಾಯಲ್ ಖಾನ್ 8 ತಿಂಗಳ ಹಿಂದೆಯಷ್ಟೇ ನೆರಳೂರಿನಲ್ಲಿ ಮನೆ ಬಾಡಿಗೆ ಪಡೆದಿದ್ದರು. ತನ್ನ ಅಣ್ಣನಿಗೆ ಅಪಘಾತವಾಗಿದೆ ಎಂದು ಹೇಳಿ ಮುಸ್ಲಿಂ ಮಹಿಳೆ ಒಬ್ಬಳೇ ವಾಸವಾಗಿದ್ದಳು. ಕಳೆದ ತಿಂಗಳೂ ಬಾಡಿಗೆ ಕೊಟ್ಟಿರಲಿಲ್ಲ. ಆದ್ರೆ ಅಜ್ಜಿ ಕೊಲೆಯಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಮನೆ ಮಾಲೀಕ ಅಂಬರೀಶ್ ಹೇಳಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಕಳೆದ ಮೂರು ದಿನಗಳಿಂದ ಮೃತ ಅಜ್ಜಿ ಪಾರ್ವತಮ್ಮ ನಾಪತ್ತೆಯಾಗಿದ್ದರು. ಈ ಬಗ್ಗೆ ಅತ್ತಿಬೆಲೆ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿತ್ತು. ನಿನ್ನೆಯಿಂದ ಮುಸ್ಲಿಂ ಮಹಿಳೆ ಪಾಯಲ್ ಖಾನ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಮನೆ ಪರಿಶೀಲಿಸಿದಾಗ ಕಬೋರ್ಡ್ನಲ್ಲಿ ವೃದ್ಧೆಯ ಮೃತದೇಹ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

Bengaluru Murder SP

ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ವೃದ್ಧೆಯ ಮೃತದೇಹ ಪತ್ತೆಯಾಗಿದೆ. ಮಾರಕಾಸ್ತçಗಳಿಂದ ತಲೆ ಹೊಡೆದು ಹತ್ಯೆ ಮಾಡಲಾಗಿದೆ. ಅಜ್ಜಿಯ ಮೈಮೇಲಿದ್ದ 70 ಗ್ರಾಂ ಚಿನ್ನ ಸಹ ನಾಪತ್ತೆಯಾಗಿದೆ. ಆರೋಪಿ ಮಹಿಳೆ ಪತ್ತೆಗಾಗಿ ಎರಡು ಪೊಲೀಸ್ ತಂಡ ರಚಿಸಲಾಗಿದೆ, ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengalurucrimeFIRMuslims Womenಎಫ್‍ಐಆರ್ಕ್ರೈಂಬೆಂಗಳೂರುಮುಸ್ಲಿಂ ಮಹಿಳೆ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
2 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
17 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
31 minutes ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
28 minutes ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
1 hour ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
1 hour ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
2 hours ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?