Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜನ್ ನಾಗೇಂದ್ರ ಗೀತೆಗಳಿಗೆ ಹೊಸ ರೂಪ : ರಾಜನ್ ಪುತ್ರ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಜನ್ ನಾಗೇಂದ್ರ ಗೀತೆಗಳಿಗೆ ಹೊಸ ರೂಪ : ರಾಜನ್ ಪುತ್ರ ಘೋಷಣೆ

Cinema

ರಾಜನ್ ನಾಗೇಂದ್ರ ಗೀತೆಗಳಿಗೆ ಹೊಸ ರೂಪ : ರಾಜನ್ ಪುತ್ರ ಘೋಷಣೆ

Public TV
Last updated: May 30, 2023 1:25 pm
Public TV
Share
2 Min Read
Rajan Nagendra 1
SHARE

ಕನ್ನಡ ಚಿತ್ರರಂಗದ ಹಿರಿಯ ಜನಪ್ರಿಯ ಸಂಗೀತ ನಿರ್ದೇಶಕ (Music Director) ರಾಜನ್ (ರಾಜನ್ ನಾಗೇಂದ್ರ) (Rajan Nagendra) ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು  ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್ ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯಲ್ಲಿ ಕಲಿತಿರುವ ಅನೇಕರು ಇಂದು ಸಂಗೀತ ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ.  ಈಗ ರಾಜನ್ ಅವರ ಪುತ್ರ ಅನಂತ ರಾಜನ್ (Anantha Rajan), ‘ರಾಜನ್ ನಾಗೇಂದ್ರ ಟ್ರಸ್ಟ್‌ ವತಿಯಿಂದ ರಾಜನ್ ನಾಗೇಂದ್ರ ಅವರ ಗೀತೆಗಳಿಗೆ ಹೊಸರೂಪ ನೀಡಿ ಕೇಳುಗರ ಮುಂದೆ ತರುವ ಪ್ರಯತ್ನದಲ್ಲಿದ್ದಾರೆ. ಅಂದಹಾಗೆ, ರಾಜನ್ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ಪುತ್ರ ಅನಂತ ರಾಜನ್, ‘ರಾಜನ್ ನಾಗೇಂದ್ರ ಗಾನಯಾನ’ ಎಂಬ ಹೆಸರಿನಲ್ಲಿ ತಮ್ಮ ಯೋಜನೆಯನ್ನು ಘೋಷಿಸಿದ್ದಾರೆ.

Rajan Nagendra 2

‘ಕನ್ನಡದಿಂದ ಸಂಗೀತ ಲೋಕಕ್ಕೆ ಹೊಸ ಪ್ರತಿಭೆಗಳು ಬರಬೇಕು ಎಂಬ ಆಶಯದಿಂದ ನಮ್ಮ ತಂದೆ ರಾಜನ್ ಬದುಕಿರುವಾಗಲೇ ‘ಸಪ್ತ ಸ್ವರಾಂಜಲಿ’ ಎಂಬ ಸಂಗೀತ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸಂಸ್ಥೆಯಿಂದ ಈಗಾಗಲೇ ಅನೇಕ ಪ್ರತಿಭೆಗಳು ಕಲಾವಿದರಾಗಿ ಸಂಗೀತ ಲೋಕಕ್ಕೆ ಪರಿಚಯವಾಗಿದ್ದಾರೆ. ಇನ್ನು ಕನ್ನಡ ಸಿನಿಮಾ ಸಂಗೀತದಲ್ಲಿ ರಾಜನ್- ನಾಗೇಂದ್ರ ಅವರ ಹಾಡುಗಳು ಚಿನ್ನ ಇದ್ದಂತೆ. ಹಳೆಯದಾದರೂ ಚಿನ್ನಕ್ಕೆ ಇರುವ ಬೆಲೆ ಇದ್ದೇ ಇರುತ್ತದೆ. ಹಳೆಯ ಚಿನ್ನವನ್ನು ಪಾಲಿಶ್ ಮಾಡಿ ಮತ್ತೆ ಬಳಸುವಂತೆ, ರಾಜನ್ ನಾಗೇಂದ್ರ ಅವರ ಈ ಗೋಲ್ಡನ್ ಹಾಡುಗಳನ್ನು ಇಂದಿನ ಕೇಳುಗರಿಗೆ ಇಷ್ಟವಾಗುವಂತೆ, ಹೊಸ ರೂಪದಲ್ಲಿ ಮತ್ತೆ ತರುತ್ತಿದ್ದೇವೆ’. ‘ನಾನು ನನ್ನ ಶಾಲಾ ದಿನಗಳಿಂದಲೇ ತಂದೆ (ರಾಜನ್) ಅವರ ಬಹುತೇಕ  ಮ್ಯೂಸಿಕ್ ರೆಕಾರ್ಡಿಂಗ್‌ಗಳನ್ನು ಹತ್ತಿರ ದಿಂದ ನೋಡಿದ್ದೆ. ಶಾಲೆಯಿಂದ ನೇರವಾಗಿ ರೆಕಾರ್ಡಿಂಗ್ ಸ್ಟುಡಿಯೋಗೆ ಹೋಗುತ್ತಿದ್ದೆ. ಹಾಗಾಗಿ ಅವರು ಮಾಡಿರುವ ಬಹುತೇಕ ಹಾಡುಗಳ ರೆಕಾರ್ಡಿಂಗ್ ಬಗ್ಗೆ ನನಗೆ ಅರಿವಿದೆ. ತುಂಬ ವೃತ್ತಿಪರವಾಗಿ ರೆಕಾರ್ಡಿಂಗ್ ಕೆಲಸ ಮಾಡುತ್ತಿದ್ದರು ಎಂದರು. ಇದನ್ನೂ ಓದಿ:ಭಾವಿ ಪತ್ನಿ ಜೊತೆಗಿನ ಅಭಿಷೇಕ್ ಅಂಬರೀಶ್ ವೀಡಿಯೋ ವೈರಲ್

Rajan Nagendra 4

‘ತಂದೆ (ರಾಜನ್)ಅವರ ನಿಧನದ ನಂತರ ಅವರ ಕೆಲಸವನ್ನು ಟ್ರಸ್ಟ್‌ ಮೂಲಕ ನಾವು ಮಾಡಲು ಮುಂದಾದೆವು. ಈಗಾಗಲೇ ರಾಜನ್ ನಾಗೇಂದ್ರ ಅವರ ಒಂದಷ್ಟು ಹಳೆಯ ಹಾಡುಗಳಿಗೆ ಹೊಸರೂಪ ಕೊಟ್ಟಿದ್ದೇವೆ. ರಾಜನ್ ಬದುಕಿದ್ದಾಗ ತಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದ ಪ್ರತಿಭೆಗಳಿಗೆ ವರ್ಷಕ್ಕೆ ಮೂರು ನಾಲ್ಕು ಕಾರ್ಯಕ್ರಮಗಳ ಮೂಲಕ ಅವರನ್ನು ಸಂಗೀತ ಲೋಕಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದ್ದರು. ಅದನ್ನು ಮುಂದುವರೆಸುವ ಕೆಲಸ ಟ್ರಸ್ಟ್‌ ಮೂಲಕ ನಾವು ಮಾಡುತ್ತಿದ್ದೇವೆ’ ಎಂದು ರಾಜನ್ ಅವರ ಮಗ ಅನಂತ ರಾಜನ್ ತಿಳಿಸಿದರು.

Rajan Nagendra 3

ಹಿರಿಯ ಚಿತ್ರ ನಿರ್ದೇಶಕ ಭಾರ್ಗವ ಮಾತನಾಡಿ, ‘ರಾಜನ್ ನಾಗೇಂದ್ರ ನನ್ನ ನಿರ್ದೇಶನದ 26 ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಸುಮಾರು 38 ಸಿನಿಮಾಗಳಿಗೆ ಅವರೊಂದಿಗೆ ಕೆಲಸ ಮಾಡಿದ್ದೇನೆ. ಕನ್ನಡ ಚಿತ್ರರಂಗದ ತುಂಬಾ ಅಪರೂಪದ ಸದಭಿರುಚಿ ಸಂಗೀತ ನಿರ್ದೇಶಕರಲ್ಲಿ ರಾಜನ್ ನಾಗೇಂದ್ರ ಜೋಡಿ ಕೂಡ ಒಂದು.  ಕೆಲಸದಲ್ಲಿ ದೊಡ್ಡ ಮಟ್ಟಕ್ಕೆ ಏರಿದವರು ರಾಜನ್. ಇಂದಿಗೂ ಪ್ರತಿದಿನ ಅವರ ಹಾಡುಗಳನ್ನು ಕೇಳುಗರು ಗುನುಗುತ್ತಿರುವುದೇ ಅವರ ಹಾಡುಗಳ ಜನಪ್ರಿಯತೆಗೆ ದೊಡ್ಡ ಸಾಕ್ಷಿ ಎಂದರು. ಗುರುದತ್, ಲಹರಿ ವೇಲು (Lahari Velu) ಮೊದಲಾದವರು ರಾಜನ್ ನಾಗೇಂದ್ರ ಹಾಡುಗಳ ಕುರಿತು ಮಾತನಾಡಿದರು. ಸಿಂಚನಾ, ಭೂಮಿಕಾ, ಸ್ಮಿತಾ, ಕೀರ್ತನಾ, ವಿಷ್ಣು ಮೊದಲಾದ ಕಲಾವಿದರು ರಾಜನ್ ನಾಗೇಂದ್ರ ಅವರ ಕೆಲ ಹಾಡುಗಳನ್ನು ಹೊಸ ರೂಪದಲ್ಲಿ ಪ್ರಸ್ತುತಪಡಿಸಿದರು.

TAGGED:Anantha RajanLahari Velumusic directorRajan Nagendraಅನಂತ ರಾಜನ್ರಾಜನ್ ನಾಗೇಂದ್ರಲಹರಿ ವೇಲುಸಂಗೀತ ನಿರ್ದೇಶಕ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Sangamesh
Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
By Public TV
21 minutes ago
Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
22 minutes ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
43 minutes ago
R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
1 hour ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
1 hour ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?