Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರಗರನ್ನು 7 ವರ್ಷ ಸತಾಯಿಸಿದ ರಾಜ್ಯ ಸರ್ಕಾರದ ವಿರುದ್ಧ ‘ಪಬ್ಲಿಕ್ ಹೀರೋ’ ಗಾಂಧಿಗಿರಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೊರಗರನ್ನು 7 ವರ್ಷ ಸತಾಯಿಸಿದ ರಾಜ್ಯ ಸರ್ಕಾರದ ವಿರುದ್ಧ ‘ಪಬ್ಲಿಕ್ ಹೀರೋ’ ಗಾಂಧಿಗಿರಿ!

Districts

ಕೊರಗರನ್ನು 7 ವರ್ಷ ಸತಾಯಿಸಿದ ರಾಜ್ಯ ಸರ್ಕಾರದ ವಿರುದ್ಧ ‘ಪಬ್ಲಿಕ್ ಹೀರೋ’ ಗಾಂಧಿಗಿರಿ!

Public TV
Last updated: November 15, 2017 5:13 pm
Public TV
Share
3 Min Read
Ravindranath Shanbhag
SHARE

ಉಡುಪಿ: ದಲಿತ- ದಮನಿತರಿಗಾಗಿ ನಮ್ಮಜೀವನ ಮುಡಿಪು. ಪ್ರತಿ ಚುನಾವಣೆ ಬಂದಾಗ ರಾಜಕಾರಣಿಗಳ ಬಾಯಲ್ಲಿ ಪ್ರಣಾಳಿಕೆಯಲ್ಲಿ ಕೇಳಿ ಬರುವ ವಾಕ್ಯ ಇದು. ಆಮೇಲೆ ಓಟು ಹಾಕಿದವರನ್ನು ಮರೆತು ಬಿಡೋದು ಜನಪ್ರತಿನಿಧಿಗಳ ರೋಗ. ಉಡುಪಿಯಲ್ಲಿ ಇಂತದ್ದೇ ಒಂದು ಘಟನೆಯಾಗಿದೆ. ಸ್ಮಶಾನಕ್ಕೂ ಲಾಯಕ್ಕಿಲ್ಲದ ಜಮೀನು ಮಂಜೂರು ಮಾಡಿ ಅದನ್ನು ನಿವೇಶನ ಕೂಡಾ ಮಾಡಿಕೊಡದೆ ಸರ್ಕಾರ ಸತಾಯಿಸುತ್ತಿರುವ ಸ್ಟೋರಿ. ಸರ್ಕಾರದ ವಿರುದ್ಧ ನಮ್ಮ ಪಬ್ಲಿಕ್ ಹೀರೋ ಗಾಂಧಿಗಿರಿ ಮಾಡಲು ಹೊರಟ ಕಥೆಯಿದು.

ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಕೊಂಡಾಡಿ ಗ್ರಾಮ ಇದು. ಸ್ಮಶಾನಕ್ಕೂ ಲಾಯಕ್ಕಿಲ್ಲದ ಜಾಗವನ್ನು ಸರ್ಕಾರ ಕೊರಗ ಸಮುದಾಯದ 23 ಕುಟುಂಬಗಳಿಗೆ 2011ರಲ್ಲಿ ಮನೆ ಕಟ್ಟಲು ನೀಡಿತ್ತು. ಜಿಲ್ಲಾಧಿಕಾರಿ ಕಚೇರಿಯೊಳಗೆ ನಕ್ಷೆಯಲ್ಲಿ ನೋಡಿ ಜಮೀನನ್ನು ಸರ್ಕಾರ ನೀಡಿತ್ತು. ಆದರೆ ಆ ಪ್ರದೇಶ ಅಕ್ಷರಶಃ ನರಕ. ಹೊಂಡ, ಗುಂಡಿ, ಬಂಡೆಕಲ್ಲು ತುಂಬಿದ ನಿರ್ಜನ ಕಾಡು. ಜಮೀನು ಸಮತಟ್ಟು ಮಾಡಲು ಸರ್ಕಾರದಿಂದ 3 ಲಕ್ಷ ಮಂಜೂರಾದರೂ ಅದು ತಲುಪಿಲ್ಲ.

UDP KORAGA 19

ಸಂತ್ರಸ್ಥೆ ಹೇಳಿದ್ದು ಹೀಗೆ: ಸಂತ್ರಸ್ಥೆ ಮಹಾಲಕ್ಷ್ಮೀ ಮತ್ತು ಸುಬೇಧ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನಾವು 7 ವರ್ಷ ನಾಯಿಗಳ ಹಾಗೆ ಸರ್ಕಾರಿ ಕಚೇರಿಗಳಿಗೆ ಸುತ್ತಾಡಿ ಸುತ್ತಾಡಿ ಸತ್ತು ಹೋಗಿದ್ದೇವೆ. ಕೊನೆಗೆ ನಮಗೆ ಆಸರೆಯಾಗಿ ಕಾಣಿಸಿದ್ದು ಡಾ. ರವೀಂದ್ರನಾಥ ಶಾನುಭಾಗ್. ಅವರ ಬಳಿ ಬಂದ ಮೇಲೂ ಕೂಡಾ ಒಂದು ಬಾರಿ ಎಲ್ಲರನ್ನು ಸಂಪರ್ಕಿಸಿ ಆಯ್ತು. ಆಗಲೂ ಕೆಲಸ ಆಗದಿದ್ದಾಗ ಶಾನುಭಾಗರೇ ಕೆಲಸ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಇನ್ನು ನಾವು ಹೆದರಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ಹಣಕ್ಕಾಗಿ ಕಾಯಬೇಡಿ ನೀವೇ ಹಣ ಹೊಂದಿಸಿ ಜಮೀನು ಹದ ಮಾಡಿ ಎಂದು ಆಗಿನ ಡಿಸಿ ಎಂಟಿ ರೇಜು ಸಲಹೆ ಕೊಟ್ಟಿದ್ದರು. ಅದರಂತೆ ಎರಡು ಹೊತ್ತು ಊಟಕ್ಕೆ ಕಷ್ಟಪಡುವವರು ಸಾಲ ಸೋಲ ಮಾಡಿ ಒಂದೊಂದು ಕುಟುಂಬ ಐದೈದು ಸಾವಿರ ಒಟ್ಟು ಮಾಡಿತ್ತು. ಒಂದು ಲಕ್ಷ ಮೂವತ್ತೈದು ಸಾವಿರ ಹೊಂದಿಸಿ ಜಮೀನನ್ನು ಸಮತಟ್ಟು ಮಾಡಲು ಶುರುಮಾಡಿತು.

UDP KORAGA 18

ಬಂಡೆಕಲ್ಲುಗಳು ತುಂಬಿದ ಬೋಳುಗುಡ್ಡದ ಒಂದು ಭಾಗವನ್ನು ಸಮತಟ್ಟು ಮಾಡಲು ಸಾಧ್ಯವಾಗಿರಲಿಲ್ಲ. ಅದಾಗಿ ನಾಲ್ಕು ವರ್ಷ ಮನವಿ ಮೇಲೆ ಮನವಿ ಕೊಡುತ್ತಾ ಬಂದರೂ ಕೆಲಸ ನಡೆಯಲಿಲ್ಲ. ಕಾದು ಕಾದು ಬೇಸತ್ತ 23 ಕುಟುಂಬದವರು ಉಡುಪಿಯ ಮಾನವಹಕ್ಕುಗಳ ಪ್ರತಿಷ್ಟಾನವನ್ನು ಸಂಪರ್ಕಿಸಿದೆ. ಈ ಸಂಸ್ಥೆ 1 ವರ್ಷ ಹೋರಾಟ ಮಾಡಿದ್ರೂ ಸರ್ಕಾರ ಕಣ್ಣು ಬಿಡಲೇ ಇಲ್ಲ. ಸರ್ಕಾರದಿಂದ ಕೆಲಸ ಆಗುವುದಿಲ್ಲ ಎಂದು ಗೊತ್ತಾದ ಮೇಲೆ ನಮ್ಮ ಪಬ್ಲಿಕ್ ಹೀರೋ ಡಾ. ರವೀಂದ್ರನಾಥ ಶಾನುಭಾಗ್ ಗಾಂಧಿಗಿರಿ ಮಾಡಲು ಹೊರಟಿದ್ದಾರೆ. ದಾನಿಗಳು ಮತ್ತು ಸಂಸ್ಥೆಯ ಸದಸ್ಯರು ಹಣ ಹಾಕಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.

UDP KORAGA 23

ಶಾನುಭಾಗ್ ಹೇಳಿದ್ದು ಹೀಗೆ: ಸಣ್ಣ ನಿವೇಶನಕ್ಕಾಗಿ ಕೊರಗರು ಹೋರಾಡುವುದು ಇಷ್ಟು ಕಷ್ಟವಿದೆಯಾ? 2011ರಲ್ಲಿ ಹಕ್ಕು ಪತ್ರ ಕೊಟ್ಟರೂ 7 ವರ್ಷ ಜಮೀನು ಸಮತಟ್ಟು ಮಾಡಲು ಬೇಕಾ? ಸರ್ಕಾರ ಹೇಳುವ ಅಹಿಂದಾ ಬೆಂಬಲ ಎಷ್ಟರ ಮಟ್ಟಿಗೆ ನಂಬುವುದು? ಸರ್ಕಾರ ರಿಜೆಕ್ಟ್ ಮಾಡಲು ಯಾವುದೇ ಕಾರಣಗಳಿಲ್ಲ. ಮಾನವಹಕ್ಕುಗಳ ಪ್ರತಿಷ್ಟಾನ ಈ ಕೊರಗ ಕುಟುಂಬದ ಜೊತೆ ಕೊನೆಯವರೆಗೆ ನಿಲ್ಲುತ್ತದೆ. ಜಮೀನು ಸಮತಟ್ಟು ಮಾಡಿಸಿ, ಮನೆ ಕಟ್ಟಿ ಕುಟುಂಬಗಳು ಅಲ್ಲಿ ನೆಲೆಸುವವರೆಗೆ ಆ ನಂತರದ ಸಮಸ್ಯೆಗಳ ಬಗ್ಗೆ ಕೂಡಾ ಮಾನವ ಹಕ್ಕುಗಳ ಹೋರಾಟ ಪ್ರತಿಷ್ಟಾನ ಬೆಂಬಲವಾಗಿ ನಿಲ್ಲುತ್ತದೆ ಎಂದು ಡಾ. ರವೀಂದ್ರನಾಥ ಶಾನುಭಾಗ್ ಹೇಳಿದ್ದಾರೆ.

23 ಕುಟುಂಬಗಳು, ಅವರ ಸಂಬಂಧಿಕರು, ಮಣಿಪಾಲ ವಿಶ್ವವಿದ್ಯಾನಿಲಯದ ಸುಮಾರು 600 ಸ್ವಯಂಸೇವಕ ಸಂಘದ ಸದಸ್ಯರು ಜಮೀನು ಸಮತಟ್ಟು ಮಾಡಲು ನಾವು ಸಿದ್ಧರೆಂದು ಘೋಷಿಸಿದ್ದಾರೆ. ಒಟ್ಟಿನಲ್ಲಿ ಈ ಭೂಮಿಯ ಮೂಲ ನಿವಾಸಿಗಳಿಗೆ ನೆಲೆಯಿಲ್ಲದಂತಾಗಿರೋದು ನಾಚಿಕೆಗೇಡಿನ ವಿಚಾರ.

https://www.youtube.com/watch?v=mUP-1N8wHHE

UDP KORAGA 1

UDP KORAGA 25

UDP KORAGA 24

UDP KORAGA 23

UDP KORAGA 21

UDP KORAGA 20

UDP KORAGA 19

 

UDP KORAGA 17

UDP KORAGA 12

UDP KORAGA 13

UDP KORAGA 14

UDP KORAGA 15

UDP KORAGA 16

UDP KORAGA 11

UDP KORAGA 10

UDP KORAGA 9

UDP KORAGA 7

UDP KORAGA 8

UDP KORAGA 6

UDP KORAGA 4

UDP KORAGA 3

UDP KORAGA 2

TAGGED:dalitGandhigiriPublic TVsiteudupiಉಡುಪಿಗಾಂಧಿಗಿರಿದಲಿತನಿವೇಶನಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood

You Might Also Like

Shalini Rajneesh
Bengaluru City

ಮುಡಾ ಮಾಜಿ ಆಯುಕ್ತ ನಟೇಶ್‌ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ ಕ್ರಮ: ಸ್ನೇಹಮಯಿಗೆ ಸಿಎಸ್‌ ಎಚ್ಚರಿಕೆ

Public TV
By Public TV
28 minutes ago
Magadi road psi koushik
Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
By Public TV
35 minutes ago
d.k.shivakumar
Bengaluru City

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

Public TV
By Public TV
54 minutes ago
kumki elephants arrived Chikkamagaluru Pura capture wild elephant
Chikkamagaluru

ಚಿಕ್ಕಮಗಳೂರು | ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ

Public TV
By Public TV
58 minutes ago
Uttarakhand highcourt
Court

ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆ – ದೇಗುಲ, ಆಶ್ರಮಗಳಲ್ಲಿ ತಪಾಸಣೆ ನಡೆಸುವಂತೆ ಉತ್ತರಾಖಂಡ ಹೈಕೋರ್ಟ್ ಸೂಚನೆ

Public TV
By Public TV
1 hour ago
Deployment of heavy fighter jets in the Middle East US attack on Iran possible at any time F 35s F 15s F 16s F 22
Latest

ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ – ಇರಾನ್‌ ಮೇಲೆ ಯಾವುದೇ ಸಮಯದಲ್ಲಿ ಅಮೆರಿಕ ದಾಳಿ ಸಾಧ್ಯತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?