– ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕೋಡಿಮಠದ ಶ್ರೀಗಳು ಹೇಳಿದ್ದೇನು?
ಕೋಲಾರ: ಈವರ್ಷ ಧಾರ್ಮಿಕ ಮುಖಂಡನೊಬ್ಬನ (Religious Leader) ಸಾವಾಗುತ್ತೆ, ಮತಾಂಧತೆ ಹೆಚ್ಚಾಗುತ್ತದೆ. ಜಾಗತಿಕ ಮಟ್ಟದಲ್ಲಿ ಬಾಂಬ್ ಸ್ಫೋಟ ಸಂಭವಿಸುತ್ತೆ, ಭೂಕಂಪ ಆಗುತ್ತೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodimutt Swamiji) ಭವಿಷ್ಯ ನುಡಿದಿದ್ದಾರೆ.
ಕೋಲಾರ (Kolara) ತಾಲೂಕಿನ ನರಸಾಪುರದ ಖಾಸಗಿ ಕಾರ್ಯಕ್ರಮದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವರ್ಷ ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ, ನೀರಿನ ಹಾವಳಿ, ಯುದ್ಧ ಆಗುತ್ತೆ. ಅನೇಕ ಸಾವು ನೋವುಗಳು ಸಂಭವಿಸುತ್ತೆ. ಮತಾದಂತೆ ಹೆಚ್ಚಾಗುತ್ತೆ, ಬಾಂಬ್ ಸ್ಫೋಟ ಸಂಭವಿಸುತ್ತೆ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಆತಂಕಪಟ್ಟಿದ್ದಾರೆ.
ಉತ್ತಮ ಮಳೆ-ಬೆಳೆ ಆಗುತ್ತೆ:
ರಾಜ್ಯ ಹಾಗೂ ರಾಷ್ಟ್ರ ರಾಜಕಾರಣ ಕುರಿತು ಯುಗಾದಿ ಕಳೆದ ನಂತರ ಹೇಳುವೆ. ಒಂದು ತಿಂಗಳು ಕಳೆದ ಮೇಲೆ ಮಳೆ, ಬೆಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ. ಯುಗಾದಿ ನಂತರ ರಾಜ್ಯದಲ್ಲಿ ಒಳ್ಳೆಯ ಮಳೆ, ಬೆಳೆ ಆಗುವ ಲಕ್ಷಣಗಳಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಆನೆ ತುಳಿತಕ್ಕೆ ವ್ಯಕ್ತಿ ಬಲಿ; ಕರ್ನಾಟಕ ಸರ್ಕಾರದಿಂದ ಪರಿಹಾರ – ಈಶ್ವರ್ ಖಂಡ್ರೆ ಹೇಳಿದ್ದೇನು?
ಗ್ಯಾರಂಟಿಗಳ ಬಗ್ಗೆ ನುಣುಚಿಕೊಂಡ ಶ್ರೀಗಳು:
ಇದೇ ವೇಳೆ ರಾಜ್ಯ ಸರ್ಕಾರ ಗ್ಯಾರಂಟಿಗಳ (Gurantee Scheme) ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ, ನನಗಿಂತ ನಿಮಗೇ ಚೆನ್ನಾಗಿ ಗೊತ್ತು ಎಂದು ನುಣುಚಿಕೊಂಡಿದ್ದಾರೆ. ಯುಗಾದಿಯ ನಂತರ ನೂತನ ಸಂವತ್ಸರದ ಭವಿಷ್ಯ ಬರಲಿದೆ. ನಂತರ ರಾಷ್ಟ್ರ ರಾಜಕಾರಣದ ಬಗ್ಗೆಯೂ ಹೇಳುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲು; ಅಧಿಕಾರಿಯ ವಿರುದ್ಧ ಕ್ರಮ ವಹಿಸಿ: ಅಶೋಕ್ ಒತ್ತಾಯ