ಮೈಸೂರು: ನಿರಂತರವಾಗಿ ಸುರಿದ ಮಳೆಯಿಂದ ಶಿಥಿಲಗೊಂಡಿದ್ದ ಮನೆಯ ಛಾವಣಿ ಕುಸಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಮಂಡಿಮೊಹಲ್ಲಾದ ಸೊಪ್ಪಿನ ಬೀದಿಯಲ್ಲಿ ನಡೆದಿದೆ.
45 ವರ್ಷದ ನಾಗೇಶ್ ಮೃತ ದುರ್ದೈವಿ. ಘಟನೆಯಿಂದ ಮನೆಯಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಾಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿರಂತರವಾಗಿ ಸುರಿದ ಮಳೆಯಿಂದ ಶಿಥಿಲಗೊಂಡಿದ್ದ ಪರಿಣಾಮ ಇಂದು ಮುಂಜಾನೆ ಅನಿರೀಕ್ಷಿತವಾಗಿ ಮನೆ ಛಾವಣಿ ಕುಸಿದಿದೆ. ಇದರಿಂದ ಮನೆಯ ಅವಶೇಷಗಳ ಅಡಿ ಸಿಲುಕಿ ನಾಗೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಮನೆಯ ನೆರೆಹೊರೆಯವರು ಬಂದು ಮನೆಯಲ್ಲಿದ್ದ ಇತರನ್ನು ರಕ್ಷಿಸಿ ಆಂಬುಲೆನ್ಸ್ ಗೆ ಕರೆ ಮಾಡಿ ಬಳಿಕ ಸಮೀಪದ ಕೆ.ಆರ್. ಆಸ್ಪತ್ರೆ ಸೇರಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಮೃತ ದೇಹವನ್ನು ಹೊರತೆಗೆದ್ದಾರೆ.