ಹಾಸನ: ಪ್ರಜ್ವಲ್ ರೇವಣ್ಣ (Prajwal Revanna) ಅವರ ಸಂಸದ ಸ್ಥಾನದ ಅಸಿಂಧು ಪ್ರಕರಣದ ದೂರುದಾರ ವಕೀಲ (Lawyer) ದೇವರಾಜೇಗೌಡ ಹಲವಾರು ಜನರಿಗೆ ವಂಚನೆ ಮಾಡಿದ್ದಾರೆ ಎಂದು ಅವರ ಮಾಜಿ ಪತ್ನಿ ಭಾಗ್ಯ ಆರೋಪಿಸಿದ್ದಾರೆ.
ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜೇಗೌಡ ಹಾಸನ ಹಾಗೂ ಬೆಂಗಳೂರಿನಲ್ಲಿ ಹಲವರಿಗೆ ವಂಚನೆ ಮಾಡಿದ್ದಾರೆ. 2016 ರಲ್ಲಿ ಯಾವುದೇ ಆಸ್ತಿ ಇಲ್ಲದ ವ್ಯಕ್ತಿ 2023ರ ವೇಳೆಗೆ 84 ಕೋಟಿ ರೂ. ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ ಅದು ಹೇಗೆ ಸಾಧ್ಯ? ಅಲ್ಲದೇ 13 ವರ್ಷಗಳ ಹಿಂದೆ ನನ್ನಿಂದ ವಿಚ್ಛೇದನ ಪಡೆದುಕೊಂಡ ಬಳಿಕ ನನ್ನ ಚಾರಿತ್ರ್ಯ ಹರಣ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿ ಜೊತೆಗೆ ತನಗೆ ಸಂಬಂಧ ಇದೆ ಎಂದು ಆರೋಪ ಮಾಡಿ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮೋದಿ ಒಪ್ಪಿ ಬಂದರೆ ಕೋಲಾರ ಕ್ಷೇತ್ರ ಬಿಟ್ಟು ಕೊಡುವ ನಿರ್ಧಾರ: ಮುನಿಸ್ವಾಮಿ
ನಾವಿಬ್ಬರೂ ಹಾಸನದ ಕಾಮಸಮುದ್ರದವರು, 26 ವರ್ಷಗಳ ಹಿಂದೆ ಮದುವೆ ನಡೆದಿತ್ತು. ಮದುವೆ ಬಳಿಕ 13 ವರ್ಷ ಸಂಸಾರ ಮಾಡಿದ್ದೆವು. ಬಳಿಕ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ಕೊಡುತ್ತಿದ್ದರು. ಇವರ ಹಿಂಸೆ ತಾಳದೇ ವಿಚ್ಛೇದನ ಪಡೆದುಕೊಂಡಿದ್ದೇನೆ ಎಂದಿದ್ದಾರೆ.
ವಿಚ್ಛೇದನದ ಬಳಿಕ ಕೂಡ ರಾಜಕಾರಣಿಗಳೊಂದಿಗೆ ಸಂಬಂಧ ಇದೆ ಎಂದು ಚಾರಿತ್ರ್ಯ ಹರಣ ಮುಂದುವರೆಸಿದ್ದಾರೆ. ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡುವುದಾಗಿ ಅವರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ ಮಾಡಿದ ಸರ್ಕಾರ
Web Stories