ಚಿಕ್ಕೋಡಿ: ರಸ್ತೆ ಬದಿಯಲ್ಲಿ ಅನಾಥವಾಗಿ ಐದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂತ್ರಸ್ತ ಮಹಿಳೆಯೋರ್ವಳನ್ನ ಸಮಾಜ ಸೇವಕರೊಬ್ಬರು ಚಿಕಿತ್ಸೆ ಕೊಡಿಸಿದ್ದಾರೆ.
ಈ ಘಟನೆ ಬೆಳಗಾವಿ ಜಿಲ್ಲೆಯೆ ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದಲ್ಲಿ ನಡೆದಿದ್ದು, ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಐದು ದಿನಗಳಿಂದ ಈ ಮಹಿಳೆ ಎಲ್ಲಿಯೂ ಹೋಗದೆ ಅನ್ನ ನೀರಿಗಾಗಿ ಪರದಾಡುವುದನ್ನು ಕಂಡು, ಬೋರಗಲ್ಲ ಗ್ರಾಮದ ಮಹಾಂತೇಶ ಚೌಗಲಾ ಎಂಬವರು ಸ್ಥಳೀಯರ ಸಹಾಯದಿಂದ ಸಮೀಪದ ಸಂಕೇಶ್ವರ ಸರಕಾರಿ ಆಸ್ಪತ್ರೆ ಸೇರಿಸಿದ್ದಾರೆ. ಆಸ್ಪತ್ರೆಯಲ್ಲಿ ಮಹಿಳೆಗೆ ಚಿಕಿತ್ಸೆ ನೀಡಿ ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ.
ಸದ್ಯ ಸಂತ್ರಸ್ತೆಯನ್ನು ಹುಕ್ಕೇರಿ ತಾಲೂಕಿನ ಹಿಡಕಲ್ಲ ಡ್ಯಾಂ ದಲ್ಲಿರುವ ಮಹಿಳಾ ಸ್ವಾಂತನ ಕೇಂದ್ರಕ್ಕೆ ಸೇರಿಸಲಾಗಿದೆ.