Districts
ತಂದೆ ನಿಧನರಾಗಿದ್ದರಿಂದ ರಜೆ ಹಾಕಿ ಊರಿಗೆ ಬಂದಿದ್ದ ಯೋಧ ಇನ್ನಿಲ್ಲ

ಹಾವೇರಿ: ರಜೆ ಮೇಲೆ ಬಂದಿದ್ದ ಯೋಧರೊಬ್ಬರು ಹೃದಯಾಘಾತಕ್ಕೀಡಾದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ತಾವರಗಿ ಗ್ರಾಮದಲ್ಲಿ ನಡೆದಿದೆ.
ಭರಮಗೌಡ ಹೊಸಮನಿ(39) ಮೃತ ಯೋಧ. ಇವರು 18 ವರ್ಷಗಳಿಂದ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸ್ತಿದ್ದರು. ತಂದೆ ನಿಧನರಾಗಿದ್ದರಿಂದ 15 ದಿನಗಳ ಹಿಂದೆಯಷ್ಟೇ ರಜೆ ಹಾಕಿ ಊರಿಗೆ ಬಂದಿದ್ದರು. ಸದ್ಯ ಇವರು ಮೇಘಾಲಯದ ಬಿಎಸ್ಎಫ್ ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸ್ತಿದ್ದರು.
ನಿನ್ನೆ ಸಂಜೆ ಹೊಸಮನಿಯವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಹಿರೇಕೆರೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಯೋಧ ಇನ್ನಿಲ್ಲವಾಗಿದ್ದಾರೆ.
