ಚುನಾವಣಾ ಕರ್ತವ್ಯಕ್ಕೆ ತಮಿಳುನಾಡಿಗೆ ತೆರಳಿದ್ದ ರಾಜ್ಯದ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ದುರ್ಮರಣ

Public TV
1 Min Read
KSRP Police Officer Prabhakar

– ಇಬ್ಬರ ಸಾವು, ಮೂವರು ಗಂಭೀರ

ಬೆಂಗಳೂರು: ಕರ್ನಾಟಕದಿಂದ ತಮಿಳುನಾಡಿಗೆ ಚುನಾವಣಾ (Lok Sabha Election 2024) ಕರ್ತವ್ಯಕ್ಕೆ ತೆರಳಿದ್ದ ಪೊಲೀಸ್ (Police) ಅಧಿಕಾರಿ ಹಾಗೂ ತಮಿಳುನಾಡಿನ ಕಾನ್ಸ್‌ಟೇಬಲ್  ಒಬ್ಬರು ಅಪಘಾತದಲ್ಲಿ  (Accident) ಮೃತಪಟ್ಟ ಘಟನೆ ತಮಿಳುನಾಡಿನ ಕಿಲ್ಪೆನ್ನತುರ್ ಎಂಬಲ್ಲಿ ನಡೆದಿದೆ.

ಕೆಎಸ್‍ಆರ್‌ಪಿ ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡಿನ (Tamil Nadu) ಕಾನ್ಸ್‌ಟೇಬಲ್ ದಿನೇಶ್ ಮೃತಪಟ್ಟ ಪೊಲೀಸರು ಎಂದು ತಿಳಿದು ಬಂದಿದೆ. ಪ್ರಭಾಕರ್ (KSRP Police Officer Prabhakar) ಅವರು ಜೀಪ್‍ನಲ್ಲಿ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ತೆರಳುತ್ತಿದ್ದಾಗ ಬಸ್ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಾಸಕ ಪುತ್ರನ ಬೈಕ್ ಅಪಘಾತ

ಇಬ್ಬರ ಮೃತದೇಹಗಳನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾರೆ. ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.‌

ಒಟ್ಟು ಐವರು ಪೊಲೀಸರು ಜೀಪ್‍ನಲ್ಲಿದ್ದರು ಎಂದು ತಿಳಿದು ಬಂದಿದೆ. ಹೇಮಂತ್ ಕುಮಾರ್ (ಡೆಪ್ಯೂಟಿ ಕಮಾಂಡರ್), ವಿಟ್ಠಲ್ ಗಡಾದರ್ (ಹೆಡ್ ಕಾನ್ಸ್‌ಟೇಬಲ್), ಜಯಕುಮಾರ್ (ಕಾನ್ಸ್‌ಟೇಬಲ್) ಗಾಯಗೊಂಡಿದ್ದು, ಮೂವರನ್ನೂ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಆರ್ಟಿಕಲ್ 370 ಸಹವಾಸ ಬೇಡ: ಕಾಂಗ್ರೆಸ್‍ಗೆ ಅಮಿತ್ ಶಾ ಎಚ್ಚರಿಕೆ

Share This Article