Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲಿದ್ದೆ ಇಲ್ಲಿತನಕ: ಕೊಳ್ಳೇಗಾಲದಿಂದ ಬಂದ ತೇಜಸ್ವಿಯ ಬಂಡವಾಳವಾಗಿದ್ದದ್ದು ಬರವಣಿಗೆ ಮಾತ್ರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲಿದ್ದೆ ಇಲ್ಲಿತನಕ: ಕೊಳ್ಳೇಗಾಲದಿಂದ ಬಂದ ತೇಜಸ್ವಿಯ ಬಂಡವಾಳವಾಗಿದ್ದದ್ದು ಬರವಣಿಗೆ ಮಾತ್ರ!

Bengaluru City

ಎಲ್ಲಿದ್ದೆ ಇಲ್ಲಿತನಕ: ಕೊಳ್ಳೇಗಾಲದಿಂದ ಬಂದ ತೇಜಸ್ವಿಯ ಬಂಡವಾಳವಾಗಿದ್ದದ್ದು ಬರವಣಿಗೆ ಮಾತ್ರ!

Public TV
Last updated: October 6, 2019 1:41 pm
Public TV
Share
3 Min Read
ellidde illeethanka
SHARE

ಬೆಂಗಳೂರು: ಸುಮ್ಮನೆ ಒಂದು ಸಲ ಕನ್ನಡ ಚಿತ್ರರಂಗದತ್ತ ಕಣ್ಣು ಹಾಯಿಸಿ ಅಲ್ಲಿ ಪ್ರಸಿದ್ಧಿ ಪಡೆದುಕೊಂಡವರು, ಗೆದ್ದವರ ಹಿನ್ನೆಲೆಗಳನ್ನೊಮ್ಮೆ ಕೆದಕಿದರೆ ಯಾವ್ಯಾವುದೋ ದಿಕ್ಕುಗಳಿಂದ ಮನಮಿಡಿಯುವ, ಅಚ್ಚರಿ ಹುಟ್ಟಿಸುವ ಕಥೆಗಳು ತೆರೆದುಕೊಳ್ಳುತ್ತವೆ. ಯಾವುದೋ ಹಳ್ಳಿ ಮೂಲೆಯಿಂದ ಬಂದು ಎಲ್ಲೋ ಕಳೆದು ಹೋಗಬೇಕಿದ್ದವರನ್ನೂ ಸಿನಿಮಾ ಮಾಯೆಯೆಂಬುದು ಸುತ್ತಿ ಬಳಸಿ ಬರ ಸೆಳೆದುಕೊಂಡ ಕಥೆಗಳೂ ತೆರೆದುಕೊಳ್ಳುತ್ತವೆ. ಹೀಗೆ ಬಂದ ಬಹುತೇಕರ ಬಂಡವಾಳ ಪ್ರತಿಭೆ ಮಾತ್ರವೇ ಆಗಿರುತ್ತದೆ. ಇದೇ ತಿಂಗಳ 11ರಂದು ತೆರೆಗಾಣಲಿರುವ `ಎಲ್ಲಿದ್ದೆ ಇಲ್ಲಿತನಕ’ ಚಿತ್ರದ ನಿರ್ದೇಶಕ ತೇಜಸ್ವಿಯವರ ಬದುಕಿನ ಹಾದಿಯೂ ಇದಕ್ಕೆ ಪೂರಕವಾಗಿದೆ.

Ellidde Illi Tanaka 7

ಸೃಜನ್ ಲೋಕೇಶ್ ಸಾರಥ್ಯದಲ್ಲಿ ಮೂಡಿ ಬಂದಿದ್ದ ಯಶಸ್ವಿ ಕಿರುತೆರೆ ಶೋ ಮಜಾ ಟಾಕೀಸ್. ಅದರ ಕ್ರಿಯೇಟಿವ್ ನಿರ್ದೇಶಕರಾಗಿ, ಯಶಸ್ಸಿನ ರೂವಾರಿಗಳಲ್ಲೊಬ್ಬರಾಗಿರುವವರು ತೇಜಸ್ವಿ. ಅದಕ್ಕೂ ಹಿಂದೆಯೇ ಒಂದಷ್ಟು ಕಿರುತೆರೆ ಶೋಗಳನ್ನು ನಿರ್ವಹಿಸುತ್ತಾ, ಧಾರಾವಾಹಿಗಳನ್ನು ನಿರ್ದೇಶನ ಮಾಡುತ್ತಾ ಪ್ರಸಿದ್ಧಿ ಪಡೆದುಕೊಂಡಿರುವವರು, ಪ್ರತಿಭಾವಂತರಾಗಿ ಗುರುತಿಸಿಕೊಂಡಿರುವವರು ತೇಜಸ್ವಿ. ಅವರು ಸೃಜನ್ ಅಭಿನಯದ ಎಲ್ಲಿದ್ದೆ ಇಲ್ಲಿತನಕ ಚಿತ್ರವನ್ನು ಕೂಡ ಭಿನ್ನವಾಗಿಯೇ ನಿರ್ದೇಶನ ಮಾಡಿರುತ್ತಾರೆಂಬ ನಂಬಿಕೆ ಹುಟ್ಟಿಕೊಂಡಿರೋದಕ್ಕೆ ತೇಜಸ್ವಿಯವರ ಈವರೆಗಿನ ಕಲಾ ಯಾನವೇ ಕಾರಣವಾಗಿದೆ. ಹಂತ ಹಂತವಾಗಿ ಹೊರಬಂದು ಸೂಪರ್ ಹಿಟ್ ಆಗಿರೋ ಹಾಡುಗಳು ಮತ್ತು ಎಲ್ಲರಿಗೂ ಮೆಚ್ಚುಗೆಯಾಗಿರೋ ಟ್ರೇಲರ್ ಮೂಲಕವೇ ಎಲ್ಲಿದ್ದೆ ಇಲ್ಲಿತನಕ ಚಿತ್ರ ಹೆಚ್ಚೆಚ್ಚು ಪ್ರೇಕ್ಷಕರನ್ನು ತಲುಪಿಕೊಂಡಿದೆ. ತಾಜಾ ಕಥೆಯ ಸುಳಿವಿನೊಂದಿಗೆ ಪ್ರೇಕ್ಷಕರೆಲ್ಲ ಬಿಡುಗಡೆಯ ಕ್ಷಣಕ್ಕಾಗಿ ತುದಿಗಾಲಲ್ಲಿ ನಿಲ್ಲುವಂತೆಯೂ ಮಾಡಿದೆ.

Ellidde Illi Tanaka 8

ಇವತ್ತಿಗೆ ಎಲ್ಲಿದ್ದೆ ಇಲ್ಲಿತನಕ ಸಿನಿಮಾ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿರೋ ತೇಜಸ್ವಿಯವರು ಸಾಗಿ ಬಂದ ರೀತಿಯೇ ವಿಶೇಷವಾದದ್ದು. ಸಾಮಾನ್ಯವಾಗಿ ಹಳ್ಳಿಗಾಡುಗಳಿಂದ ಬಂದು ಹೀಗೆ ಬಣ್ಣದ ಲೋಕದಲ್ಲಿ ಹೆಜ್ಜೆ ಗುರುತು ಮೂಡಿಸಿದವರು ಅದನ್ನೇ ಗುರಿಯಾಗಿಸಿಕೊಂಡಿರುತ್ತಾರೆ. ಆದರೆ ಕೊಳ್ಳೇಗಾಲದಲ್ಲಿಯೇ ಹುಟ್ಟಿ ಅಲ್ಲಿಯೇ ಶಾಲಾ ಕಾಲೇಜು ವ್ಯಾಸಂಗ ಮಾಡಿದ್ದ ತೇಜಸ್ವಿಯವರ ಪಾಲಿಗೆ ಅಂಥಾ ಕನಸೇನೂ ಇರಲಿಲ್ಲ. ಚಿಕ್ಕ ವಯಸ್ಸಿಗೇ ಹಚ್ಚಿಕೊಂಡಿದ್ದ ಓದಿನ ಹುಚ್ಚು ಅವರೊಳಗೆ ಬರವಣಿಗೆಯ ಆಸಕ್ತಿ ಹುಟ್ಟಿಸಿತ್ತು. ಅದುವೇ ನಾಟಕ ಮತ್ತು ರಂಗಭೂಮಿಯ ನಂಟನ್ನೂ ಬೆಳೆಸುವಂತೆ ಮಾಡಿತ್ತು. ಆದರೆ ಬದುಕಿನ ಅನಿವಾರ್ಯತೆಗೆ ದುಡಿಯಲೇ ಬೇಕಾದ ಅನಿವಾರ್ಯ ಸೃಷ್ಟಿಸಿದಾಗ ತೇಜಸ್ವಿ ದಶಕಗಳಷ್ಟು ಹಿಂದೆ ಮುಖ ಮಾಡಿದ್ದು ಬೆಂಗಳೂರಿನತ್ತ. ಆ ಕ್ಷಣದಲ್ಲಿ ಅವರ ಮುಂದಿದ್ದದ್ದು ಯಾವುದಾದರೊಂದು ಕೆಲಸ ಮಾಡಿ ಮನೆಯಲ್ಲಿದ್ದ ಆರ್ಥಿಕ ಸಂಕಷ್ಟ ನೀಗಿಸಬೇಕೆಂಬುದರ ಹೊರತಾಗಿ ಬೇರೆ ಯಾವ ಇಂಗಿತವೂ ಇರಲಿಲ್ಲ.

ellidde illeethanka 2

ಆದರೆ, ಅವರಿಗೇ ಅರಿವಿಲ್ಲದಂತೆ ಇಡೀ ಬದುಕು ಬೆಳಗಿ ಬಿಡುವಂತಹ ಬರವಣಿಗೆಯ ಕಲೆ ಅವರೊಳಗಿತ್ತು. ಅದುವೇ ಅಚ್ಚರಿದಾಯಕವಾಗಿ ಅವರನ್ನು ಬಣ್ಣದ ಲೋಕಕ್ಕೆ ಕೈ ಹಿಡಿದು ಸೆಳೆದುಕೊಂಡಿತ್ತು. ಬೆಂಗಳೂರಿಗೆ ಬಂದಿಳಿದ ತೇಜಸ್ವಿಯವರಿಗೆ ರಂಗಭೂಮಿಯಲ್ಲಿಯೂ ಹೆಸರು ಮಾಡಿ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದ ಬಸವರಾಜ್ ಸೂಳೇರಿಪಾಳ್ಯ ಪರಿಚಯವಾಗಿದ್ದರು. ಅವರೇ ತೇಜಸ್ವಿಯೊಳಗಿನ ಬರವಣಿಗೆಯ ತೇಜಸ್ಸನ್ನು ಪತ್ತೆಹಚ್ಚಿ ಬರೆಯಲು ಪ್ರೇರೇಪಿಸಿದ್ದರು. ಹಾಗೆ ಕಿರುತೆರೆಗೆ ಬರವಣಿಗೆಯ ಮೂಲಕ ಎಂಟ್ರಿ ಕೊಟ್ಟಿದ್ದ ತೇಜಸ್ವಿ, ಅಲ್ಲಿನ ಎಲ್ಲ ಪಟ್ಟುಗಳನ್ನೂ ಶ್ರದ್ಧೆಯಿಂದಲೇ ಕರಗತ ಮಾಡಿಕೊಂಡಿದ್ದರು. ಆ ನಂತರ ಒಂದಷ್ಟು ವರ್ಷಗಳ ಕಾಲ ಅಲ್ಲಿಯೇ ಸಕ್ರಿಯರಾಗಿದ್ದರು. ಕಡೆಗೂ ಸೃಜನ್ ಲೋಕೇಶ್ ಸಂಪರ್ಕಕ್ಕೆ ಬಂದ ತೇಜಸ್ವಿಯವರ ಮುಂದೆ ಹೊಸ ಸಾಧ್ಯತೆಗಳು ಬಿಚ್ಚಿಕೊಳ್ಳಲಾರಂಭಿಸಿದ್ದವು.

Ellidde Illi Tanaka 6

ಸೃಜನ್ ಜೊತೆ ಕಿಚನ್ ಕಿಲಾಡಿ ಎಂಬ ಶೋ ಆರಂಭಿಸಿದ್ದ ತೇಜಸ್ವಿ ಆ ನಂತರದಿಂದ ಇಲ್ಲಿವರೆಗೂ ಸೃಜನ್ ಜೊತೆಯಾಗಿಯೇ ಸಾಗಿ ಬಂದಿದ್ದಾರೆ. ಜೊತೆಯಾಗಿಯೇ ಲೋಕೇಶ್ ಪ್ರೊಡಕ್ಷನ್ ಸಂಸ್ಥೆಯನ್ನೂ ಹುಟ್ಟು ಹಾಕಿದ್ದಾರೆ. ಆ ಬಳಿಕ ಸೃಜನ್ ಪ್ರೊಡಕ್ಷನ್ಸ್ ಅಡಿಯಲ್ಲಿಯೇ ಮಜಾ ಟಾಕೀಸ್ ಎಂಬ ಯಶಸ್ವೀ ಕಾರ್ಯಕ್ರಮವನ್ನೂ ಅವರು ನಿರ್ದೇಶನ ಮಾಡಿದ್ದಾರೆ. ಹೀಗೆ ಹಲವಾರು ವರ್ಷಗಳಿಂದ ಸೃಜನ್ ಲೋಕೇಶ್ ಅವರೊಂದಿಗೆ ಒಡನಾಡಿರುವ ತೇಜಸ್ವಿ ಇದೀಗ ಅವರಿಗಾಗಿ ಎಲ್ಲಿದ್ದೆ ಇಲ್ಲಿತನಕ ಚಿತ್ರವನ್ನೂ ನಿರ್ದೇಶನ ಮಾಡಿದ್ದಾರೆ. ಇದು ಅವರು ನಿರ್ದೇಶನ ಮಾಡಿರೋ ಮೊದಲ ಚಿತ್ರ. ಆದರೆ ಅದು ಈಗಾಗಲೇ ದೊಡ್ಡ ಮಟ್ಟದಲ್ಲಿ ಹಿಟ್ ಆಗೋ ಎಲ್ಲ ಲಕ್ಷಣಗಳನ್ನೂ ಹೊಮ್ಮಿಸುತ್ತಿದೆ. ಕಿರುತೆರೆಯಲ್ಲಿ ಆರಂಭದಿಂದಲೂ ಯಶಸ್ವಿಯಾಗುತ್ತಾ ಬಂದಿರೋ ತೇಜಸ್ವಿ ಎಲ್ಲಿದ್ದೆ ಇಲ್ಲಿತನಕ ಮೂಲಕ ಸಿನಿಮಾ ನಿರ್ದೇಶಕರಾಗಿಯೂ ಗೆಲ್ಲುವ ಲಕ್ಷಣಗಳೇ ದಟ್ಟವಾಗಿವೆ.

TAGGED:ellidde illitanakaPublic TVsandalwoodSrujan LokeshTejasviಎಲ್ಲಿದ್ದೆ ಇಲ್ಲಿ ತನಕತೇಜಸ್ವಿಪಬ್ಲಿಕ್ ಟಿವಿಸೃಜನ್ ಲೋಕೇಶ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

NAMMA METRO 4
Bengaluru City

ಏ.5ರಂದು 2 ಗಂಟೆಗಳ ಕಾಲ `ನಮ್ಮ ಮೆಟ್ರೋ’ ಸೇವೆ ಸ್ಥಗಿತ

Public TV
By Public TV
8 minutes ago
Raghav Chadha
Latest

ರಾಘವ್‌ ಚಡ್ಡಾಗೆ AAP ಶಾಕ್‌ – ರಾಜ್ಯಸಭೆಯಲ್ಲಿ ಉಪನಾಯಕ ಸ್ಥಾನದಿಂದ ವಜಾ

Public TV
By Public TV
21 minutes ago
CRIME
Crime

ಮಗನ ರೋಗ ವಾಸಿಯಾಗಲು 12 ವರ್ಷದ ಮಗಳನ್ನೇ ಬಲಿಕೊಟ್ಟ ತಾಯಿ – ಬಳಿಕ ರೇಪ್ ಅಂತ ದೂರು

Public TV
By Public TV
34 minutes ago
religious waste
Dakshina Kannada

ಮಂಗಳೂರಿನಲ್ಲಿ 5.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹ

Public TV
By Public TV
1 hour ago
lovers suicide chamarajanagara
Chamarajanagar

ನೇಣು ಬಿಗಿದುಕೊಂಡು ಆದಿವಾಸಿ ಸಮುದಾಯದ ಪ್ರೇಮಿಗಳು ಆತ್ಮಹತ್ಯೆ

Public TV
By Public TV
2 hours ago
jain premier league goes big 12 teams auctioned for rs 31 crore
Cricket

ಜೈನ್ ಪ್ರೀಮಿಯರ್ ಲೀಗ್ – ಕೋಟಿ ಕೋಟಿಗೆ ಹರಾಜಾದ ತಂಡಗಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?