ವಿಜಯಪುರ: ನವಜಾತ ಶಿಶುವನ್ನು ಮನೆಯ ಬಳಿ ಇಟ್ಟು ದುಷ್ಟರು ಪರಾರಿಯಾದ ಘಟನೆ ವಿಜಯಪುರ (Vijayapura) ಚಾಲುಕ್ಯನಗರದಲ್ಲಿ ನಡೆದಿದೆ.
ರಾಮಕೃಷ್ಣ ಆಸ್ಪತ್ರೆಯ ಹಿಂಬದಿಯ ಬಿ.ಜಿ ಪೊಲೀಸ್ (BG Police) ಪಾಟೀಲ ಎಂಬುವವರ ಮನೆಯ ಹೊಸ್ತಿಲಲ್ಲಿ ಮಗುವನ್ನಿಟ್ಟು ಎಸ್ಕೇಪ್ ಆಗಿದ್ದಾರೆ. ಆಸ್ಪತ್ರೆಯಲ್ಲಿ ಹೆರಿಗೆಯಾಗಿರುವ ಕ್ಲಿಪ್ ಜೊತೆಯಲ್ಲಿ ಮಗುವನ್ನು ಇಟ್ಟು ಪರಾರಿಯಾಗಿದ್ದಾರೆ.
ಮೃತಪಟ್ಟಿರುವ ಗಂಡು ಮಗು ಇದಾಗಿದ್ದು, ಮಗುವಿನ ದೇಹದ ಮೇಲೆ ಕಪ್ಪು ಕಪ್ಪು ಕಲೆಗಳು ಕಂಡುಬಂದಿವೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ - ಇಂದು ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಫಿಕ್ಸ್?
ಮನೆಯಲ್ಲಿ ಬಾಡಿಗೆ ಇರುವ ವಿದ್ಯಾರ್ಥಿನಿಯರು (Students) ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪತಿಗೆ ದೈಹಿಕ ಸಂಬಂಧ ನಿರಾಕರಿಸುವುದು ಕ್ರೌರ್ಯಕ್ಕೆ ಸಮ: ಮಧ್ಯಪ್ರದೇಶ ಹೈಕೋರ್ಟ್