ಚಾಮರಾಜನಗರ: 2024ರ ಲೋಕಸಭಾ ಚುನಾವಣೆಗೆ (Lok Sabha Election 2023) ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ನಾನೂ ಬಿಜೆಪಿ ಟಿಕೆಟ್ (BJP Ticket) ಆಕಾಂಕ್ಷಿ ಎಂದು ಕಿರುತೆರೆ, ಚಲನಚಿತ್ರ ನಟ ಆರ್.ಅರ್ಜುನ್ ರಮೇಶ್ (Arjun Ramesh) ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, 12 ವರ್ಷಗಳಿಂದ ಬಿಜೆಪಿ (BJP) ಸಂಘಟನೆಯಲ್ಲಿ ತೊಡಗಿದ್ದೇನೆ. ಟಿ.ನರಸೀಪುರ ಪುರಸಭಾ ಸದಸ್ಯನಾಗಿ ಅತ್ಯಧಿಕ ಮತಗಳಿಂದ ಆಯ್ಕೆಯಾಗಿದ್ದೇನೆ. ನನ್ನ ತಂದೆ ಮಾಜಿ ವಿಧಾನಪರಿಷತ್ತ ಸದಸ್ಯ ಸಿ.ರಮೇಶ್ ಕಳೆದ 20 ವರ್ಷಗಳಿಂದ ಪಕ್ಷದ ಸಂಘಟನೆಗೆ ದುಡಿಯುತ್ತಿದ್ದಾರೆ. ಪಕ್ಷ ನನಗೆ ಈ ಬಾರಿ ಅವಕಾಶ ಮಾಡಿಕೊಡಬೇಕೆಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದಿದ್ದಾರೆ.
ಬಿಜೆಪಿ ಕಾರ್ಯಕರ್ತರ ಪಕ್ಷ ಅನ್ನೋದನ್ನ ಹಲವು ಬಾರಿ ಸಾಬೀತು ಮಾಡಿದೆ. ನಾನೂ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆ. ಜನಸಾಮಾನ್ಯ ಕೇಂದ್ರ ಸ್ಥಾಪಿಸಿ ಸೇವೆ ಸಲ್ಲಿಸುತ್ತಿದ್ದೇನೆ. ಜೊತೆಗೆ ನಟನಾಗಿಯೂ ಗುರುತಿಸಿಕೊಂಡಿದ್ದೇನೆ. ಹಾಗಾಗಿ ರಾಜ್ಯದ ನಾಯಕರು ನನಗೆ ಅವಕಾಶ ಮಾಡಿಕೊಡಬೇಕು ಎಂದು ಕೋರಿದ್ದಾರೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಲೂಟಿ ಹೊಡೆಯೋದು ಬಿಟ್ಟರೆ ತಮ್ಮನಾಗಿ ಸ್ವೀಕಾರ ಮಾಡ್ತೀನಿ: ಕುಮಾರಸ್ವಾಮಿ ಷರತ್ತು
ಇಂದಿನ ರಾಜಕೀಯ ವಿದ್ಯಮಾನ ಅನುಭವಿಸಿ, ಪ್ರತಿ ಹಂತದಲ್ಲೂ ರಾಜಕೀಯ ಬಣ್ಣ ಬದಲಾಯಿಸುವುದನ್ನ ನೋಡಿದ್ದೇನೆ. ಆದ್ರೆ ಇದ್ದರೂ, ಸತ್ತರೂ ಬಿಜೆಪಿಯಲ್ಲೇ ಇರುತ್ತೇನೆ, ಅಪ್ಪಟ ಹಿಂದೂ ಕಾರ್ಯಕರ್ತನಾಗಿಯೇ ಸಾಯುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: BJPಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗ್ತಿದ್ದೀನಿ – ಎಸ್.ಟಿ ಸೋಮಶೇಖರ್
Web Stories