ಚಿತ್ರದುರ್ಗ: ಮಕ್ಕಳು ಖಾಸಗಿ ಶಾಲೆಗೆ ಸೇರಿಕೊಳ್ಳುತ್ತಿರುವ ಪರಿಣಾಮ ವಿದ್ಯಾರ್ಥಿನಿಗೆ ಇಬ್ಬರು ಶಿಕ್ಷಕರು ಇರುವ ಪರಿಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಂಜೆಹಟ್ಟಿ ಗ್ರಾಮದಲ್ಲಿರುವ ಪ್ರಾಥಮಿಕ ಕಿರಿಯ ಶಾಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರಬೇಕು ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಅನ್ನೋ ದೃಷ್ಟಿಯಿಂದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಮಕ್ಕಳಿಗೆ ಮಾತ್ರ ಸರ್ಕಾರಿ ಶಾಲೆಯಲ್ಲಿ ಸರಿಯಾಗಿ ದೊರೆಯುತ್ತಿಲ್ಲ. ಇದೇ ಕಾರಣಕ್ಕೆ ಪೋಷಕರು ಖಾಸಗಿ ಶಾಲೆಗಳ ಕಡೆಗೆ ಮುಖ ಮಾಡುತ್ತಿದ್ದಾರೆ. ಇದರಿಂದಾಗಿ ಇಲ್ಲೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಇಬ್ಬರು ಶಿಕ್ಷಕರಿದ್ದಾರೆ.
ಒಂದೊಂದು ದಿನ ಬೆಳಗ್ಗೆ ಶಾಲೆ ಆರಂಭಿಸಿ ಮಧ್ಯಾಹ್ನ 2 ಗಂಟೆ ಸಮಯಕ್ಕೆ ಶಾಲೆಗೆ ಬೀಗ ಜಡಿದು ಮನೆ ದಾರಿ ಹಿಡಿಯುತ್ತಾರೆ. ಕಳೆದ ನಾಲ್ಕು ವರ್ಷಗಳಲ್ಲಿ 80 ಜನ ವಿದ್ಯಾರ್ಥಿಗಳಿದ್ದೂ, ಕಳೆದ ಸಾಲಿನಲ್ಲಿ ಪಾಠಗಳು ಸರಿಯಾಗಿ ನಡೆಯುವುದಿಲ್ಲ ಎಂದು ಬೇಸರದಿಂದ ಮಕ್ಕಳ ಟಿಸಿ ಪಡೆದು ಚಳ್ಳಕೆರೆ ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ.
ಉಳಿದ ಮೂವರು ಮಕ್ಕಳು ಆದರೆ ಜೂನ್ ತಿಂಗಳಲ್ಲಿ ದಾಖಲಾತಿ ಸಂಖ್ಯೆ 10ಕ್ಕೆ ಏರಿದೆ ಅಂತ ಹೇಳಿ ಶಾಲೆ ನಡೆಸಲಾಗುತ್ತಿದೆ. ಆದರೆ ಅವರುಗಳಲ್ಲಿ ವಿದ್ಯಾರ್ಥಿನಿ ಮಾತ್ರ ಶಾಲೆಗೆ ಬರುತ್ತಿದ್ದಾಳೆ. ಶಾಲೆಯ ಆರಂಭದಲ್ಲಿ ಗ್ರಾಮದಲ್ಲಿ ಶಿಕ್ಷಕರು ಬಂದು ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸುವಂತೆ ಪ್ರೇರೇಪಿಸಬೇಕು. ಆದರೆ ಅಂತಹ ಕೆಲಸವನ್ನು ಯಾವುದೇ ಶಿಕ್ಷಕರು ಮಾಡುವುದಿಲ್ಲ. ಇದರಿಂದಾಗಿ ಸರ್ಕಾರಿ ಶಾಲೆಯು ಮುಚ್ಚುವ ಸ್ಥಿತಿಗೆ ತಲುಪಿದೆ ಅಂತ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.