ತಾಯಿ ಜೊತೆ ನಾಲ್ವರು ಮಕ್ಕಳನ್ನು ಹತ್ಯೆಗೈದು ಬಾವಿಗೆ ಎಸೆದ ದುಷ್ಕರ್ಮಿಗಳು – ವಾಮಾಚಾರ ಬಲಿ?

Public TV
1 Min Read
Mumbai Police

ಭುವನೇಶ್ವರ: ಬುಡಕಟ್ಟು ಜನರೇ ಹೆಚ್ಚಾಗಿರುವ ಒಡಿಶಾದ ಸುಂದರ್‍ಘಡ್ ಜಿಲ್ಲೆಯ ಇಂದುಪುರ್ ಗ್ರಾಮದಲ್ಲಿ ತಾಯಿ ಹಾಗೂ ನಾಲ್ವರು ಮಕ್ಕಳನ್ನು ಕೊಲೆಗೈದು ಬಾವಿಗೆ ಎಸೆದ ಅಮಾನವೀಯ ಘಟನೆ ನಡೆದಿದೆ.

ಇಂದುಪುರ್ ಗ್ರಾಮದ ಸುದಮ್ ಮುಂಡಾ ಪತ್ನಿ ಮಂಗಿರಿ ಮುಂಡಾ (24) ಮತ್ತು ಅವರ ಮಕ್ಕಳ ಕೊಲೆಯಾದ ದುರ್ದೈವಿಗಳು. ಸುದಮ್ ಮುಂಡಾ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಆತ ಮನೆಯಲ್ಲಿ ಇಲ್ಲದಿದ್ದಾಗ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ.

ಮೃತ ಮಹಿಳೆಯ ಮನೆಯ ಸುತ್ತ ರಕ್ತದ ಕಲೆಯನ್ನು ನೋಡಿದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಬಳಿಕ ಬಾವಿಯಲ್ಲಿ ನೋಡಿದಾಗ ಮೃತ ದೇಹಗಳು ಪತ್ತೆಯಾಗಿವೆ. ಬಳಿಕ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ರೂರ್ಕೆಲಾ ಎಸ್‍ಪಿ ಉಮಾಶಂಕರ್ ದಾಸ್ ತಿಳಿಸಿದ್ದಾರೆ.

POLICE 15

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಮಾಶಂಕರ್ ದಾಸ್ ಅವರು, ಈಗ ಸಿಕ್ಕಿರುವ ಸಾಕ್ಷ್ಯಗಳ ಪ್ರಕಾರ ದುಷ್ಕರ್ಮಿಗಳು ಕೊಲೆ ಮಾಡಿ, ಬಳಿಕ ಮೃತ ದೇಹಗಳನ್ನು ಬಾವಿಗೆ ಎಸೆದಿದ್ದಾರೆ. ಅಷ್ಟೇ ಅಲ್ಲದೆ ವಾಮಾಚಾರದ ಶಂಕೆ ಕೂಡ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ.

ಮೃತ ದೇಹಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ಈ ಮೂಲಕ ಕೊಲೆಯ ಉದ್ದೇಶ ಹೊರ ಬೀಳುತ್ತದೆ. ಈ ಸಂಬಂಧ ತನಿಖೆ ಆರಂಭಿಸಲಾಗಿದೆ ಎಂದು ಉಮಾಶಂಕರ್ ದಾಸ್ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *