Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನ | ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಾಸನ | ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ

Crime

ಹಾಸನ | ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ

Public TV
Last updated: May 23, 2025 6:41 pm
Public TV
Share
2 Min Read
Hassan Aane Dali
SHARE

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಗೆ ಮತ್ತೊಂದು ಬಲಿಯಾಗಿದೆ. ಬೇಲೂರು(Beluru) ತಾಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಗುಂಪೊಂದು ಮಹಿಳೆ ಮೇಲೆ ದಾಳಿ ಮಾಡಿದ್ದು, ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಜೇಂದ್ರಪುರ(Gajendrapura) ಗ್ರಾಮದ ಚಂದ್ರಮ್ಮ(45) ಕಾಡಾನೆ ದಾಳಿಗೆ ಮೃತಪಟ್ಟ ಮಹಿಳೆ. ಚಂದ್ರಮ್ಮ ಶುಕ್ರವಾರ ಬೆಳಗ್ಗೆ ಡಾ.ಕರುಣ್ ಎಂಬುವವರ ಕಾಫಿ ತೋಟದ ಕೆಲಸಕ್ಕೆ ಬಂದಿದ್ದರು. ಒಟ್ಟು ಹನ್ನೆರಡು ಮಂದಿ ಮಹಿಳೆಯರು ತೋಟಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಐದು ಕಾಡಾನೆಗಳು ದಾಳಿ ಮಾಡಿವೆ. ಇದನ್ನೂ ಓದಿ: ಸಂತ್ರಸ್ತೆ ಜೊತೆ ವಿವಾಹ; ಪೋಕ್ಸೊ ಕೇಸ್‌ ಅಪರಾಧಿಯನ್ನು ಜೈಲು ಶಿಕ್ಷೆಯಿಂದ ಪಾರು ಮಾಡಿದ ಸುಪ್ರೀಂ

ಈ ವೇಳೆ ಎಲ್ಲರೂ ದಿಕ್ಕಾಪಾಲಾಗಿ ಓಡಿದ್ದು ಚಂದ್ರಮ್ಮ ಕಾಡಾನೆ ಬಳಿ ಸಿಲುಕಿಕೊಂಡಿದ್ದರು. ಚಂದ್ರಮ್ಮನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ ಕಾಲಿನಿಂದ ತುಳಿದು ಭೀಕರವಾಗಿ ಸಾಯಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: 51 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ

ಈ ವೇಳೆ ಮೃತದೇಹ ಮೇಲೆತ್ತಲು ಬಿಡದೆ ಸ್ಥಳೀಯರು ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಡಾನೆ ದಾಳಿಯಿಂದ ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಕಳೆದ 5 ತಿಂಗಳಲ್ಲಿ 6 ಮಂದಿ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಅರಣ್ಯ ಸಚಿವರು ಕೇವಲ ಭರವಸೆ ನೀಡುತ್ತಿದ್ದಾರೆ ಹೊರತು ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು. ಅಲ್ಲದೇ ಸ್ಥಳಕ್ಕೆ ಅರಣ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಬೇಕು ಅಲ್ಲಿಯವರೆಗೂ ಮೃತದೇಹ ಮೇಲೆತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ಅಹಿತರಕ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರು. ಬಳಿಕ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಎಸ್ಪಿ ಮಹಮದ್ ಸುಜೇತಾ, ಸಿಸಿಎಫ್ ಏಡುಕುಂಡಲ, ಡಿಎಫ್‌ಓ ಸೌರಭ್‌ಕುಮಾರ್ ಆಗಮಿಸಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು. ಇದನ್ನೂ ಓದಿ: ತಮನ್ನಾನು ಬೇಡ, ಸುಮನ್ನಾನು ಬೇಡ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ರಾಯಭಾರಿ ಆಗ್ತೀನಿ: ವಾಟಾಳ್ ನಾಗರಾಜ್

ಈ ವೇಳೆ ಬೆಳಗ್ಗೆ ನಡೆದ ಘಟನೆಯನ್ನು ವಿವರಿಸಿದ ಚಂದ್ರಮ್ಮ ಜೊತೆಗಿದ್ದ ಮಹಿಳೆಯರು ಕಣ್ಣೀರಿಟ್ಟರು. ಅಲ್ಲದೇ ಕಾಡಾನೆ ಪೀಡಿತ ಪ್ರದೇಶದ ಜನರು ಕಾಡಾನೆಗಳಿಂದ ಪ್ರತಿನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ತೆರೆದಿಟ್ಟರು. ನಂತರ ಪ್ರತಿಭಟನಾಕಾರರನ್ನು ಉದ್ದೇಶಿ ಮಾತನಾಡಿದ ಅಧಿಕಾರಿಗಳು ಹಲವು ಭರವಸೆಗಳನ್ನು ನೀಡಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

ಈಗಿನಿಂದಲೇ ಕಾಡಾನೆ ಚಲನವಲನದ ಬಗ್ಗೆ ಸರಿಯಾದ ಮಾಹಿತಿ ನೀಡಿ, ಕಾಡಾನೆ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಸರ್ಕಾರದೊಂದಿಗೆ ಚರ್ಚೆ ನಡೆಸುತ್ತೇವೆ. ರಾತ್ರಿ ವೇಳೆ ವಿದ್ಯುತ್ ಕಡಿತ ಮಾಡದಂತೆ ಚೆಸ್ಕಾಂ ಇಲಾಖೆಗೆ ಸೂಚನೆ ನೀಡಲಾಗಿದೆ. ಕಾಡಾನೆ ಹಾವಳಿ ತಪ್ಪಿಸಲು ಸಾಕಷ್ಟು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿ ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು. ಇದನ್ನೂ ಓದಿ: ಹೌದು ನಾವು ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ ಕೊಟ್ಟಿದ್ದೇವೆ, ತಪ್ಪೇನಿದೆ?: ಡಿಕೆಶಿ ಸಮರ್ಥನೆ

ಬಳಿಕ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೇಲೂರು ತಾಲ್ಲೂಕು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅರೇಹಳ್ಳಿ ಪೊಲೀಸ್ ಠಾಣೆ(Arehalli Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:belurucrimeElephant Attackhassan
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Hibiscus Flower
Crime

ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು

Public TV
By Public TV
31 seconds ago
Shell Petrol Bunk
Bengaluru City

ಜನರಿಗೆ ಶಾಕ್‌ ಮೇಲೆ ಶಾಕ್‌ – ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ

Public TV
By Public TV
19 minutes ago
bengaluru development authority bda
Bengaluru City

ಬಹುನಿರೀಕ್ಷಿತ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ಗೆ ಟೆಂಡರ್ ಆಹ್ವಾನಿಸಿದ ಬಿಡಿಎ

Public TV
By Public TV
27 minutes ago
Caste Census 1
Bagalkot

2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ

Public TV
By Public TV
41 minutes ago
Chikkaballapura Petrol Bunk Close
Chikkaballapur

ಪ್ಲಾಸ್ಟಿಕ್ ಬಾಟಲಿಗೆ ಪೆಟ್ರೋಲ್ ಹಾಕದ್ದಕ್ಕೆ ಆಕ್ರೋಶ – ಚಿಕ್ಕಬಳ್ಳಾಪುರದಲ್ಲಿ ಬಂಕ್ ಕ್ಲೋಸ್ ಮಾಡಿಸಿದ ರೈತರು

Public TV
By Public TV
1 hour ago
Kuwait Power Plant
Latest

ಕುವೈತ್‌ ಮೇಲೆ ಇರಾನ್‌ ದಾಳಿ – ವಿದ್ಯುತ್‌ ಸ್ಥಾವರದಲ್ಲಿದ್ದ ಭಾರತೀಯ ಕಾರ್ಮಿಕ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?