ಕೊಪ್ಪಳದಲ್ಲಿ ಕರಡಿ ದಾಳಿಗೊಳಗಾಗಿ ಮಹಿಳೆ ಗಂಭೀರ

Public TV
0 Min Read
KARADI ATTACK

ಕೊಪ್ಪಳ: ಮಹಿಳೆಯೊಬ್ಬರ ಮೇಲೆ ಕರಡಿ ದಾಳಿ ಮಾಡಿ ಗಂಭೀರ ಗಾಯಗೊಳಿಸಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಗಂಗಾವತಿ ತಾಲೂಕಿನ ಮುಸಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದಾಳಿಗೊಳಗಾದ ಮಹಿಳೆಯನ್ನು ಹನುಮಮ್ಮ ದ್ಯಾಮಣ್ಣ ಭೋವಿ ಎಂದು ಗುರುತಿಸಲಾಗಿದೆ.

ಕರಡಿ ದಾಳಿ ಸುದ್ದಿ ತಿಳಿದು ಗ್ರಾಮಸ್ಥರು ಗಂಭೀರ ಗಾಯಗೊಂಡ ಮಹಿಳೆಯನ್ನು ರಕ್ಷಿಸಿ, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 3 ಕರಡಿಗಳು ಗ್ರಾಮದ ಪಕ್ಕದಲ್ಲಿನ ಹೊಲದಲ್ಲೇ ಅಡಗಿ ಕುಳಿತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

KPL KARADI ATTACK 1 1

ಕರಡಿ ಹಿಡಿಯಲು ಮುಂದಾಗದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಕೈಯಲ್ಲಿ ಬಡಿಗೆಗಳನ್ನು ಹಿಡಿದು ಕರಡಿಗಾಗಿ ರಾತ್ರಿಯಿಡಿ ಜಾಗರಣೆ ಮಾಡಿದ್ದಾರೆ.

KPL KARADI ATTACK 1 5

KPL KARADI ATTACK 1 4

KPL KARADI ATTACK 1

KARADI ATTACK 2

Share This Article
Leave a Comment

Leave a Reply

Your email address will not be published. Required fields are marked *