ನಾಯಿ ಮೇಲೆ ಯುವಕನಿಂದ ಮನಸೋ ಇಚ್ಛೆ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
1 Min Read
Vidyaranyapura attack on dog

ಬೆಂಗಳೂರು: ನಾಯಿಯ (Dog) ಮೇಲೆ ಯುವಕನೋರ್ವ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ವಿದ್ಯಾರಣ್ಯಪುರದಲ್ಲಿ (Vidyaranyapura) ನಡೆದಿದೆ.

ನೆರೆಮನೆಯ ಯುವಕ ಮನೋಜ್ ಕುಮಾರ್ ಕೃತ್ಯವೆಸಗಿರುವುದಾಗಿ ಆರೋಪಿಸಲಾಗಿದೆ. ಮನೆಯೊಂದರ ಶೆಡ್‌ನಲ್ಲಿ ಕಟ್ಟಿ ಹಾಕಿದ್ದ ನಾಯಿಯ ಮೇಲೆ ಮನೋಜ್ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡು ನಿತ್ರಾಣವಾಗಿದ್ದ ನಾಯಿ 2-3 ದಿನಗಳಲ್ಲಿ ಸಾವನ್ನಪ್ಪಿದೆ. ಸಿಸಿಟಿವಿ ಪರಿಶೀಲನೆ ವೇಳೆ ಯುವಕ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯ ಎಕ್ಸ್ ಖಾತೆ ಹ್ಯಾಕ್

ಘಟನೆಯ ಬಗ್ಗೆ ವಿಚಾರಿಸಿದಾಗ ನಾಯಿ ಕೋಳಿ ಹಿಡಿದ ವಿಚಾರ ಬಯಲಾಗಿದೆ. ತನ್ನ ಕೋಳಿಯನ್ನು ನಾಯಿ ಹಿಡಿದಿದೆ ಎಂದು ಯುವಕ ಹೇಳಿದ್ದಾನೆ. ಅದೇ ವಿಚಾರಕ್ಕೆ ನಾಯಿಯ ತಲೆಗೆ ಹೊಡೆದು ಯುವಕ ಗಾಯಗೊಳಿಸಿದ್ದ. ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿ ಟ್ಯಾಗ್ ಮಾಡಿ ದೂರು ನೀಡಲಾಗಿದೆ. ಇದನ್ನೂ ಓದಿ: ವಿಜಯಪುರ ನಗರದಲ್ಲಿ ಚಿರತೆ ಪ್ರತ್ಯಕ್ಷ – ಜನರಲ್ಲಿ ಆತಂಕ

Share This Article