ಬೀದರ್: ಐತಿಹಾಸಿಕ ಬಾವಿಗೆ (Well) ಬಿದ್ದು ಯುವಕ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಬೀದರ್ (Bidar) ತಾಲೂಕಿನ ಹಮಿಲಾಪೂರ್ ಗ್ರಾಮದ ಬಳಿ ನಡೆದಿದೆ.
ಬೀರಪ್ಪ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕನಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಷಯ ತಿಳಿದು ಅಗ್ನಿಶಾಮಕ ದಳದ (Fire Brigade) ಸಿಬ್ಬಂದಿಗಳು ಮೃತದೇಹಕ್ಕಾಗಿ ಬಾವಿಯಲ್ಲಿ ಸತತ ಎರಡು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದ್ದಾರೆ. ಬಳಿಕ ಹಗ್ಗದ ಮೂಲಕ ಮೃತದೇಹವನ್ನು ಬಾವಿಯಿಂದ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: 12 ಸಾವಿರ ಕೋಟಿ ಮೌಲ್ಯದ 2.5 ಟನ್ ಡ್ರಗ್ಸ್ ಜಪ್ತಿ – ಪಾಕ್ ಆರೋಪಿಯ ಬಂಧನ
ಈ ಕುರಿತು ಬೀದರ್ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಚರಂಡಿ ಸ್ವಚ್ಛಗೊಳಿಸುತ್ತಿದ್ದಾಗ ಉಸಿರುಗಟ್ಟಿ ಒಂದೇ ಕುಟುಂಬದ 5 ಕಾರ್ಮಿಕರು ಸಾವು