ಗದಗ: ಸಾಲದ ಬಾಧೆಗೆ ತುಂಗಭದ್ರಾ ನದಿಗೆ (Tungabhadra River ) ಹಾರಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ.
ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಮುರಡಿ ತಾಂಡ ನಿವಾಸಿ ದಿನೇಶ್ ಅಕ್ಕಸಾಲಿ ಎಂಬ ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ಮೂರು ದಿನಗಳ ಹಿಂದೆ ಮುಂಡರಗಿಯ ಹಮ್ಮಗಿ ಬ್ಯಾರೇಜ್ ಬಳಿ ತುಂಗಭದ್ರಾ ನದಿಗೆ ಯುವಕ ಹಾರಿದ್ದ. ಸಾಲಬಾಧೆ ಹಾಗೂ ಕೌಟುಂಬಿಕ ಕಲಹ ಹಿನ್ನೆಲೆ ಆತ ಮನನೊಂದಿದ್ದ. ಮೂರು ದಿನಗಳ ಹಿಂದೆ ಬ್ರಿಡ್ಜ್ ಮೇಲೆ ಬೈಕ್, ಮೊಬೈಲ್, ಚಪ್ಪಲಿ ಬಿಟ್ಟು ರಾತ್ರಿ ವೇಳೆ ಹಾರಿದ್ದ ಎನ್ನಲಾಗ್ತಿದೆ.
ಈ ಬಗ್ಗೆ ಮೂರು ದಿನಗಳಿಂದ ಅಗ್ನಿಶಾಮಕ ದಳ, ಈಜು ತಜ್ಞರು, ಸ್ಥಳಿಯರು ಶೋಧಕಾರ್ಯ ನಡೆಸಿದ್ದರು. ಇಂದು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕೊಂಬಳಿ ಬಳಿ ಶವ ಪತ್ತೆಯಾಗಿದೆ. ಇದನ್ನೂ ಓದಿ: ಚಿತ್ರದುರ್ಗ| ಮಳೆರಾಯನ ಅಟ್ಟಹಾಸಕ್ಕೆ 65 ಲಕ್ಷಕ್ಕೂ ಅಧಿಕ ಮೌಲ್ಯದ 25,000 ಕೋಳಿಗಳ ಮಾರಣಹೋಮ
ಸಾಲದ ಸುಳಿಗೆ ಸಿಲುಕಿದ ಕುಟುಂಬಕ್ಕೆ ಸ್ವಂತ ಜಮೀನು ಇಲ್ಲ. ಕುಲ ಕಸುಬು ಮಾಡುವ ಸಾಮಗ್ರಿಗಳನ್ನು ಮಾರಾಟ ಮಾಡಿದ್ದಾನೆ. ದಿಕ್ಕು ತೋಚದೇ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ಮನೆಯ ಮಗನನ್ನು ಕಳೆದುಕೊಂಡ ಕುಟುಂಬ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಇದನ್ನೂ ಓದಿ: ತುಂಗಾ ಮೇಲ್ದಂಡೆ ಕಾಲುವೆ ಒಡೆದು ಅಪಾರ ಪ್ರಮಾಣದ ಬೆಳೆಹಾನಿ
ಮುಂಡರಗಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಾಗಿತ್ತು. ಈಗ ಮೃತದೇಹ ಪತ್ತೆಯಾದ್ದರಿಂದ ಹೂವಿನಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತುಮಕೂರು| ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ – ಪತಿ ಸಾವು, ಪತ್ನಿ ಗಂಭೀರ