ಮಂಗಳೂರು: ಕರಾವಳಿಯಲ್ಲಿ ಅನ್ಯಕೋಮಿನ ಯುವಕ-ಯುವತಿ ಪ್ರೀತಿಸಿ ಮದುವೆಯಾಗಿದ್ದಾರೆ. ಭಜರಂಗದಳ ಕಾರ್ಯಕರ್ತನನ್ನು ಮುಸ್ಲಿಂ ಯುವತಿ ವರಿಸಿದ್ದಾಳೆ.
ಇದು ಮಂಗಳೂರಿನ ಸುರತ್ಕಲ್ನಲ್ಲಿ (Surathkal) ನಡೆದ ಹಿಂದೂ-ಮುಸ್ಲಿಂ ಲವ್ ಸ್ಟೋರಿಯಾಗಿದೆ (Hindu- Muslim Love Story). ಮುಸ್ಲಿಂ ಯುವತಿಯೊಬ್ಬಳು ಭಜರಂಗದಳದ (Bhajarangdal) ಕಾರ್ಯಕರ್ತನನ್ನ ಮದುವೆಯಾಗಿದ್ದಾಳೆ.
ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರೋ ಪ್ರಶಾಂತ್ ಭಂಡಾರಿ ಹಾಗೂ ಆಯೇಷಾ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಅಂತೆಯೇ ನ.30ರಂದು ಸುರತ್ಕಲ್ನ ಆಯೇಷಾ ಜೊತೆ ಪ್ರಶಾಂತ್ ಪರಾರಿಯಾಗಿದ್ದ. ಇದನ್ನೂ ಓದಿ: ಯತ್ನಾಳ್ ನಿಜವಾದ ಗುರಿ ಮೋದಿ ಅನ್ನೋದು ನಿಧಾನವಾಗಿ ಬಯಲಾಗಿದೆ: ಸಿದ್ದರಾಮಯ್ಯ
ಸುರತ್ಕಲ್ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿರೋ ಪ್ರಶಾಂತ್, ದೀಪಕ್ ರಾವ್ ಹತ್ಯೆ ಆರೋಪಿ ಪಿಂಕಿ ನವಾಜ್ ಎಂಬಾತನ ಹತ್ಯೆಗೂ ಯತ್ನಿಸಿದ್ದ. ಇದೀಗ ಸುರತ್ಕಲ್ ನ ಮುಸ್ಲಿಂ ಯುವತಿಯ ಪ್ರೀತಿಸಿ ವರಿಸಿ ಸುದ್ದಿಯಾಗಿದ್ದಾನೆ.
ಇತ್ತ ಆಯೇಷಾ ಪೋಷಕರು ಸುರತ್ಕಲ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.