– ನೇಹಾ ಹಿರೇಮಠ ಪ್ರಕರಣಕ್ಕೆ ವರ್ಷ ತುಂಬುತ್ತಲೇ ಅದೇ ರೀತಿಯ ಮತ್ತೊಂದು ಘಟನೆ
ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremath) ಪ್ರಕರಣಕ್ಕೆ ವರ್ಷ ತುಂಬುತ್ತಲೇ ಅದೇ ರೀತಿಯ ಘಟನೆಯೊಂದು ಹುಬ್ಬಳ್ಳಿಯ (Hubballi) ವಿದ್ಯಾನಗರದಲ್ಲಿ (Vidya Nagar) ನಡೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಧರ್ಮೀಯ ಯುವಕನೊಬ್ಬ ಯುವತಿಗೆ ಟಾರ್ಚರ್ ನೀಡಿ, ಕೊಲೆಗೆ ಯತ್ನಿಸಿದ್ದಾನೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಸಂತ್ರಸ್ತೆ ಹಾಗೂ ಸಿರಾಜ್ ಒಂದೇ ಪಟ್ಟಣದ ನಿವಾಸಿಗಳು. ಸದ್ಯ ಸಂತ್ರಸ್ತೆ ಪ್ಯಾರಾ ಮೆಡಿಕಲ್ ಕೋರ್ಸ್ನಲ್ಲಿ ಓದುತ್ತಿದ್ದಾಳೆ. ಮೊದಲಿನಿಂದಲೂ ಸಂತ್ರಸ್ತೆಗೆ ಸಿರಾಜ್ನ ಪರಿಚಯವಿತ್ತು. ಪ್ರೀತಿಸುವಂತೆ ಸಂತ್ರಸ್ತೆಗೆ ಒತ್ತಾಯ ಮಾಡಿದ್ದು, ಬಳಿಕ ಟಾರ್ಚರ್ ಕೂಡ ನೀಡಿದ್ದ. ಅಲ್ಲದೇ ಸಂತ್ರಸ್ತೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.ಇದನ್ನೂ ಓದಿ:ಪ್ರತಿದಿನ ಕಿರುಕುಳ ಕೊಡ್ತಿದ್ಲು, ನಾನೇ ದೌರ್ಜನ್ಯಕ್ಕೆ ಒಳಗಾಗಿದ್ದೇನೆ – ಪತ್ನಿಯ ಕೊಲೆ ರಹಸ್ಯ ಬಿಚ್ಚಿಟ್ಟ ಟೆಕ್ಕಿ ಪತಿ!
- Advertisement
- Advertisement
ರಂಜಾನ್ ಹಬ್ಬದಂದು ಸಿರಾಜ್ ಹುಬ್ಬಳ್ಳಿಯಲ್ಲಿ ಸಂತ್ರಸ್ತೆ ಓದುತ್ತಿದ್ದ ಕಾಲೇಜಿಗೆ ತೆರಳಿ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇದೆಲ್ಲದರಿಂದ ತ್ರೀವವಾಗಿ ಮನನೊಂದ ಸಂತ್ರಸ್ತೆ ಕಾಲೇಜಿನ ಹಾಸ್ಟೆಲ್ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಕೆಎಂಸಿ ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗಳ ಈ ಪರಿಸ್ಥಿತಿಯನ್ನು ನೆನೆದು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದು, ಸಿರಾಜ್ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇನ್ನೂ ಇದು ಅನ್ಯಧರ್ಮೀಯ ಯುವಕನಿಂದ ಲವ್ ಜಿಹಾದ್, ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕಿಮ್ಸ್ ಆಸ್ಪತ್ರೆಗೆ ಭೇಟಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಿ, ಪ್ರಕರಣದ ಕುರಿತು ಮಾಹಿತಿ ಪಡೆದಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿಯೇ ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ (Vidya Nagar Police Station) ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ನೇಹಾ ಹಿರೇಮಠ ಪ್ರಕರಣದ ನಂತರ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ, ಪಾಲಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಹೀಗಾಗಿ ಜನರು ಪೊಲೀಸ್ ಇಲಾಖೆಯ ಜೊತೆ ಸಹಕಾರ ನೀಡದರೆ ಮುಂದೆ ಈ ರೀತಿ ಘಟನೆ ನಡೆಯದಂತೆ ಸಕಾಲದಲ್ಲಿ ತಡೆಗಟ್ಟಲು ಸಹಾಯವಾಗುತ್ತದೆ ಎಂದು ಮನವಿ ಮಾಡಿದ್ದಾರೆ.ಇದನ್ನೂ ಓದಿ:ಉಕ್ರೇನ್ ಮಹಿಳೆಯರನ್ನ ರೇಪ್ ಮಾಡುವಂತೆ ಒತ್ತಾಯಿಸುತ್ತಿದ್ದ ರಷ್ಯಾ ಸೈನಿಕನ ಪತ್ನಿಗೆ ಕಠಿಣ ಜೈಲು ಶಿಕ್ಷೆ