ಬೆಂಗಳೂರು: ಸ್ನೇಹಿತರ ಜೊತೆ ಸೇರಿ ಪಾರ್ಟಿ ಮಾಡುತ್ತಿದ್ದ ವೇಳೆ ಗಲಾಟೆಯಾಗಿ ಯುವಕನ ಬರ್ಬರ ಹತ್ಯೆಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru Murder) ನಡೆದಿದೆ.
ನೇಪಾಳ ಮೂಲದ ಡೇವಿಡ್ (20) ಕೊಲೆಯಾದ ಯುವಕ. ಬೆಳ್ಳಂದೂರು ಬಳಿಯ ಹರಳೂರಿನಲ್ಲಿ ಸ್ನೇಹಿತರ ಜೊತೆ ಯುವಕ ಪಾರ್ಟಿ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಇದನ್ನೂ ಓದಿ: ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡ್ತಿದ್ದ ಐವರು MBBS ವಿದ್ಯಾರ್ಥಿಗಳು ಅರೆಸ್ಟ್
- Advertisement 2
- Advertisement 3
ನೇಪಾಳದ ಡೇವಿಡ್ ಮತ್ತು ಆತನ ಸ್ನೇಹಿತರು ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಸ್ನೇಹಿತರ ನಡುವೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಡೇವಿಡ್ ಎದೆಗೆ ಸ್ನೇಹಿತನೊಬ್ಬ ಚಾಕುವಿನಿಂದ ಇರಿದಿದ್ದಾನೆ. ಡೇವಿಡ್ ತೀವ್ರ ರಕ್ತಸ್ರಾವದಿಂದ ಬಿದ್ದು ಒದ್ದಾಡುತ್ತಿದ್ದ.
- Advertisement 4
ಇದರಿಂದ ಆತಂಕಗೊಂಡ ಸ್ನೇಹಿತರು ತಕ್ಷಣ ಡೇವಿಡ್ನನ್ನು ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದಾರೆ. ಆದರೆ ಮಾರ್ಗ ಮಧ್ಯೆ ಯುವಕ ಕೊನೆಯುಸಿರೆಳೆದಿದ್ದಾನೆ. ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನವಜೋಡಿ ಸೇರಿ ಐವರು ಸಂಬಂಧಿಗಳನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ